ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಯ (Cabinet reshuffle) ಕಸರತ್ತು ಒಂದೆಡೆಯಾದ್ರೆ, ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ (Kpcc president) ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಜೋರು ಜಟಾಪಟಿ ಶುರುವಾಗಿದೆ.

ಸಚಿವ ಸತೀಶ್ ಜಾರಕಿಹೊಳಿ (Satish jarakiholi) ಕೂಡ ಕೆಪಿಸಿಸಿ ಅಧ್ಯಕ್ಷ (Kpcc president) ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನನ್ನನ್ನು ಪರಿಗಣಿಸಿದ್ರೆ, ಆ ಜವಾಬ್ದಾರಿ ನಿರ್ವಹಿಸಲು ನಾನು ಸಿದ್ಧ ಇದ್ದೇನೆ ಅಂತ ಹೇಳ್ತಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ (Cm siddaramaiah) ಮೂಲಕ ಹೈಕಮಾಂಡ್ಗೆ ಸತೀಶ್ ಜಾರಕಿಹೊಳಿ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಇನ್ನು ಪರೋಕ್ಷವಾಗಿ ಮತ್ತೊಂದು ಕಂಡೀಷನ್ ಹಾಕಿರುವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಹುದ್ದೆಯಿಂದ ನನ್ನ ಸಚಿವ ಸ್ಥಾನ ಹಾಗೂ ಖಾತೆಗೆ ಯಾವುದೇ ತೊಂದರೆ ಆಗಬಾರದು. ಎರಡೂ ಹುದ್ದೆ ನಿಭಾಯಿಸುವ ಸಾಮರ್ಥ್ಯ ತಮಗೆ ಇದೆ ಎಂದಿದ್ದಾರೆ.