ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೇ ಸಿದ್ದರಾಮಯ್ಯ (Siddaramiah) 5 ವರ್ಷ ಸಿಎಂ ಆಗಿರಲಿದ್ದಾರೆ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ(yathindrasiddaramiah )ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Sathish jarakiholi) ಪ್ರತಿಕ್ರಿಯೆ ನೀಡಿದ್ದಾರೆ
![](https://pratidhvani.com/wp-content/uploads/2024/01/rjp_300617_yathindra1-jpg.webp)
ಈ ಹೇಳಿಕೆಯ ಕುರಿತು ಮಾತನಾಡಿರುವ ಅವರು, ಈಗಾಗಲೇ ಸಿಎಂ ಬಗ್ಗೆ ಮಾತನಾಡಿದ್ದೇವೆ. ಈ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ ವೈಯಕ್ತಿಕ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅದು ಯತೀಂದ್ರ ಅವರ ವಯಕ್ತಿಕ ಹೇಳಿಕೆ ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದರು.
![](https://pratidhvani.com/wp-content/uploads/2024/01/Yathindra_Siddaramaiah-jpg.webp)
ಇನ್ನು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ ಕೇವಲ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಮುಂಬರುವ ಚುನಾವಣೆ ಗೆಲ್ಲುವುದು ನಮ್ಮ ಗುರಿ ಮಿಕ್ಕಿದ್ದನ್ನು ಮುಂದೆ ಮಾತಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು