• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೇರಳದ ಕಣ್ಣೂರು ವಿವಿಯಲ್ಲಿ ಸಾವರ್ಕರ್ & ಗೋಳ್ವಾಲ್ಕರ್ ಬಗ್ಗೆ ಪಠ್ಯ ಕ್ರಮ: ಕೇಸರೀಕರಣ ಆಗುತ್ತಿದೆಯೇ ದೇವರ ನಾಡು.!?

ಕರ್ಣ by ಕರ್ಣ
September 12, 2021
in ದೇಶ
0
ಕೇರಳದ ಕಣ್ಣೂರು ವಿವಿಯಲ್ಲಿ ಸಾವರ್ಕರ್ & ಗೋಳ್ವಾಲ್ಕರ್ ಬಗ್ಗೆ ಪಠ್ಯ ಕ್ರಮ: ಕೇಸರೀಕರಣ ಆಗುತ್ತಿದೆಯೇ ದೇವರ ನಾಡು.!?
Share on WhatsAppShare on FacebookShare on Telegram

ಕೇರಳದ ಕಣ್ಣೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮ ಸಂಪೂರ್ಣವಾಗಿ ಆರ್​ಎಸ್​ಎಸ್​ ಮಯವಾಗಿದೆ. ವಿಡಿ ಸಾವರ್ಕರ್ ಮತ್ತು ಎಂ.ಎಸ್. ಗೋಲ್ವಾಲ್ಕರ್ ಅವರ ಕೃತಿಗಳನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದು ಕೇರಳದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದ ಸಿಎಂ ಪಿಣರಾಯಿ ವಿಜಯನ್ ಪರಿಶೀಲನೆಗೆ ತಜ್ಞರ ಸಮಿತಿಯನ್ನು ನೇಮಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿಫಾರಸಿನಂತೆ ಈ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯೂ ವಿಶ್ವವಿದ್ಯಾಲಯದ ಇಬ್ಬರು ಸದಸ್ಯರನ್ನು ಒಳಗೊಂಡಂತಿದೆ. ಈ ತಜ್ಞರ ಸಮಿತಿಯು ಪಠ್ಯವನ್ನು ಪರಿಶೀಲನೆಗೆ ಒಳಪಡಿಸಲಿದೆ ಎನ್ನಲಾಗಿದೆ.

ADVERTISEMENT

ವಿಶ್ವವಿದ್ಯಾನಿಯಲದ ಪಠ್ಯ ಕ್ರಮದಲ್ಲಿ ಆರೆಸ್ಸೆಸ್‌‌ ನಾಯಕರ ಪುಸ್ತಕಗಳ ಸೇರ್ಪಡೆಗೆ ಸಂಬಂಧಿಸಿದ ವಿವಾದಕ್ಕೆ ಪ್ರತಿಕ್ರಿಯಿಸಿದ ಪಿಣರಾಯಿ ವಿಜಯನ್, “ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿದವರನ್ನು ವೈಭವೀಕರಿಸುವುದು ವಿವೇಕವಲ್ಲ. ಕೇರಳ ರಾಜ್ಯವು ಯಾವಾಗಲೂ ಇಂತಹ ವಿವಾದಾತ್ಮಕ ವ್ಯಕ್ತಿಗಳಿಂದ ಮತ್ತು ಅವರನ್ನು ವೈಭವೀಕರಿಸುವುದರ ಬಗ್ಗೆ ಅಂತರ ಕಾಯ್ದುಕೊಂಡು ಬಂದಿದೆ. ಯಾವುದೇ ಪ್ರತಿಗಾಮಿ ಸಿದ್ಧಾಂತವನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸಬೇಕು” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಸಮಿತಿಯು ಪಠ್ಯಕ್ರಮವನ್ನು ಪರಿಶೀಲಿಸುತ್ತದೆ ಮತ್ತು ಸಮಿತಿಯ ಶಿಫಾರಸುಗಳ ಪ್ರಕಾರ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇತ್ತೀಚೆಗೆ, ಕಣ್ಣೂರು ವಿಶ್ವವಿದ್ಯಾನಿಲಯವು ಸಾವರ್ಕರ್ ಅವರ ‘ಹಿಂದುತ್ವ: ಹಿಂದೂ ಯಾರು’, ಗೋಲ್ವಾಲ್ಕರ್ ಅವರ ‘ಬಂಚ್ ಆಫ್‌ ಥಾಟ್ಸ್‌’, ‘ವಿ ಓರ್‌ ಅವರ್‌ ನೇಷನ್‌ಹುಡ್‌ ಡಿಫೈನೆಡ್‌’ ಕೃತಿಯನ್ನು ಎಂಎ (ಕಲಾ ಸ್ನಾತಕೋತ್ತರ) ಆಡಳಿತ ಮತ್ತು ರಾಜಕೀಯದ ವಿಷಯದ ಪಠ್ಯಕ್ರಮದಲ್ಲಿ ಸೇರಿಸಲಾಗಿದೆ.

ದೀನದಯಾಳ್ ಉಪಾಧ್ಯಾಯರ ಸಮಗ್ರ ಮಾನವತಾವಾದ ಬಾಲರಾಜ್ ಮಧೋಕ್ ಅವರ ‘ಭಾರತೀಯೀಕರಣ: ಏನು, ಏಕೆ ಮತ್ತು ಹೇಗೆ?’ ಭಾಗಗಳು ಕೂಡ ಪಠ್ಯಕ್ರಮದಲ್ಲಿ ಒಳಗೊಂಡಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಗೋಪಿನಾಥ್ ರವೀಂದ್ರನ್ ಅವರು ಪಠ್ಯಕ್ರಮದಲ್ಲಿ ಕೇಸರೀಕರಣದ ಆರೋಪವನ್ನು ತಿರಸ್ಕರಿಸಿದ್ದಾರೆ.

“ನಾವು ಗಾಂಧೀಜಿ, ನೆಹರು, ಅಂಬೇಡ್ಕರ್ ಮತ್ತು ಟಾಗೋರ್ ಅವರ ಕೃತಿಗಳನ್ನು ಸೇರಿಸಿದ್ದೇವೆ. ಹಾಗೆಯೆ ಪಠ್ಯಕ್ರಮದಲ್ಲಿ ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅವರ ಕೃತಿಗಳು ಒಳಗೊಂಡಿದೆ. ವಿದ್ಯಾರ್ಥಿಗಳು ಎಲ್ಲಾ ಸಿದ್ಧಾಂತಗಳ ಹಿಂದಿನ ಮೂಲ ಪಠ್ಯವನ್ನು ಕಲಿಯಲಿ ಮತ್ತು ಅರ್ಥಮಾಡಿಕೊಳ್ಳಲಿ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಹೇಳಿದ್ದು ಪ್ರಸ್ತುತ ಭಾರತದ ರಾಜಕೀಯದ ಭಾಗವಾಗಿದೆ. ಅದನ್ನು ಕಲಿಯುವುದರಲ್ಲಿ ತಪ್ಪೇನು.?” ಎಂದು ಗೋಪಿನಾಥ್‌ ಅವರು ಹೇಳಿದ್ದಾರೆ.

ಗಾಂಧಿ, ಅಂಬೇಡ್ಕರ್, ನೆಹರು ರಂಥಾ ಅಪ್ರತಿಮ ವ್ಯಕ್ತಿತ್ವಗಳ ಜೊತೆ ಹೆಸರು ಬರೆಯಲೂ ಯೋಗ್ಯವಲ್ಲದವರ ಬಗೆಗಿನ ಪಠ್ಯವೂ ಸೇರಿಸಿರುವುದರಲ್ಲಿ ತಪ್ಪೇನಿದೆ ಎಂದು ಕೇಳುವ ವಿಶ್ವ ವಿದ್ಯಾಲಯದ ಕುಲಪತಿ ಹೊಂದಿರುವ ದೇವರ ನಾಡಿಗೆ ಇದಕ್ಕಿಂದ ದುರಾದೃಷ್ಟ ಮತ್ತೊಂದಿಲ್ಲ. ಈ ಬಗ್ಗೆ ಕೇರಳದಲ್ಲಿ ತೀವ್ರ ಚರ್ಚೆಗಳಾಗುತ್ತಿವೆ. ಇವರಿಬ್ಬರ ಪಠ್ಯದ ಪ್ರತಿಯನ್ನು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸುಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ.‌ ಅಲ್ದೆ ನಾಡಿನ ಕಮ್ಯೂನಿಸ್ಟ್‌ ನಾಯಕರೇ ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಒಟ್ಟಾರೆ ಆರ್ ಎಸ್ಎಸ್ ಸಿದ್ಧಾಂತಗಳ ವಿರುದ್ಧ ತೀವ್ರ ಹೋರಾಟದ ಮೂಲಕ‌ ನೆಲೆ ಕಂಡುಕೊಂಡಿರುವ ಕಮ್ಯೂನಿಸ್ಟ್‌ ಸರ್ಕಾರ ಇರುವ ಕೇರಳದಲ್ಲಿ ಇಂಥಾ ಬೆಳವಣಿಗೆ ಪ್ರಜ್ಞಾವಂತರಲ್ಲಿ ಅಚ್ಚರಿ ಮೂಡಿಸಿದೆ. ಬ್ರೀಟಿಷರೊಂದಿಗೆ ಕೈ ಜೋಡಿಸಿ ಭಾರತದ ವಿರುದ್ಧವೇ ಪಿತೂರಿ ನಡೆಸಿದ ಗೋಳ್ವಾಲ್ಕಾರ್ ಹಾಗೂ ಸಾವರ್ಕರ್ ರಂಥವರ ಬಗ್ಗೆ ಕೇರಳದಂಥಾ ರಾಜ್ಯದ ವಿಶ್ವ ವಿದ್ಯಾಲಯವೊಂದರ ಪಠ್ಯವಾಗಿರುವುದು ಈಗ ಹಲವು ಅನುಮಾನಗಳಿಗೆ ಹಾಗೂ ಆಕ್ರೋಶಕ್ಕೆ ಆದಿ ಹಾಡಿದೆ.

Tags: BJPಕಣ್ಣೂರು ವಿವಿಕೇರಳಕೇಸರೀಕರಣನರೇಂದ್ರ ಮೋದಿಬಿಜೆಪಿಸಾವರ್ಕರ್ & ಗೋಳ್ವಾಲ್ಕರ್ಸಾವರ್ಕರ್ ಗೋಳ್ವಾಲ್ಕರ್ಸಿಎಂ ಪಿಣರಾಯಿ ವಿಜಯನ್
Previous Post

ಹಿಂದಿ ಹೇರಿಕೆ ವಿರುದ್ಧ ಕರವೇಯಿಂದ #ಹಿಂದಿಹೇರಿಕೆನಿಲ್ಲಿಸಿ ಅಭಿಯಾನ

Next Post

ಕಲ್ಕತ್ತಾ ಮೇಲ್ಸೇತುವೆಯನ್ನು ತನ್ನ ಜಾಹಿರಾತಿಗೆ ಬಳಸಿ ಟ್ರೋಲಿಗೊಳಗಾದ ಯೋಗಿ ಆದಿತ್ಯನಾಥ್.!

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಕಲ್ಕತ್ತಾ ಮೇಲ್ಸೇತುವೆಯನ್ನು ತನ್ನ ಜಾಹಿರಾತಿಗೆ ಬಳಸಿ ಟ್ರೋಲಿಗೊಳಗಾದ ಯೋಗಿ ಆದಿತ್ಯನಾಥ್.!

ಕಲ್ಕತ್ತಾ ಮೇಲ್ಸೇತುವೆಯನ್ನು ತನ್ನ ಜಾಹಿರಾತಿಗೆ ಬಳಸಿ ಟ್ರೋಲಿಗೊಳಗಾದ ಯೋಗಿ ಆದಿತ್ಯನಾಥ್.!

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada