ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಅನುಮತಿ ನಿರಾಕರಿಸಿದೆ.
ಹಾಗಾಗಿ ಬುಧವಾರ ಅಥವಾ ಗುರುವಾರದಂದು ಮೈದಾನದಲ್ಲಿ ಗಣಪತಿ ಉತ್ಸವವನ್ನ ಆಯೋಜಿಸುವಂತಿಲ್ಲ ಎಂದು ನ್ಯಾಯಾಲಯ ತಾಕೀತು ಮಾಡಿದೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ನಡುವೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿದೆ. ಹೀಗಾಗಿ ಈ ಪ್ರಕರಣವನ್ನು ತ್ರಿ ಸದಸ್ಯ ಪೀಠಕ್ಕೆ ವರ್ಗಾಯಿಸಿತ್ತು.