• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

SC/ST ದೌರ್ಜನ್ಯ ತಡೆ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದ ಸುಪ್ರಿಂ ಕೋರ್ಟ್‌

by
February 10, 2020
in ದೇಶ
0
SC/ST ದೌರ್ಜನ್ಯ ತಡೆ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದ ಸುಪ್ರಿಂ ಕೋರ್ಟ್‌
Share on WhatsAppShare on FacebookShare on Telegram

2019ರಲ್ಲಿ ಕೇಂದ್ರ ಸರ್ಕಾರವು ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆಯು ಸಾಂವಿಧಾನಿಕ ಮಾನ್ಯತೆಯನ್ನು ಹೊಂದಿದೆ ಎಂದು ಸುಪ್ರಿಂ ಕೋರ್ಟ್‌ ಇಂದು ಮಹತ್ತರವಾದ ಆದೇಶವನ್ನು ನೀಡಿದೆ. SC/STಗಳ ಮೇಲೆ ನಡೆಯುವ ದೌರ್ಜನ್ಯವನ್ನು ತೆಡೆಗಟ್ಟುವ ಸಲುವಾಗಿ ಜಾರಿಯಲ್ಲಿರುವ ಕಾಯ್ದೆಗೆ 2018ರಲ್ಲಿ ಸುಪ್ರಿಂ ಕೋರ್ಟ್‌ ಕೆಲವು ನಿರ್ದೇಶನಗಳನ್ನು ನೀಡಿತ್ತು. ಈ ನಿರ್ದೇಶನಗಳ ವಿರುದ್ದ ಮಂಡಿಸಲಾದ ತಿದ್ದುಪಡಿಯನ್ನು ಈಗ ಸುಪ್ರಿಂ ಕೋರ್ಟ್‌ ಎತ್ತಿ ಹಿಡಿದಿದೆ.

ADVERTISEMENT

2018ರಲ್ಲಿ ಡಾ. ಸುಭಾಷ್‌ ಕಾಶಿನಾಥ್‌ ಮಹಾಜನ್‌ ಮತ್ತು ಮಹಾರಾಷ್ಟ್ರ ಸರ್ಕಾರದ ನಡುವಿನ ಕೇಸ್‌ನ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯವು SC/ST ದೌರ್ಜನ್ಯ ತಡೆಗಟ್ಟುವ ಕಾಯ್ದೆಯಡಿಲ್ಲಿ ಕೇಸು ದಾಖಲಿಸುವ ಮೊದಲು ಕೆಲವು ನಿರ್ದೇಶನವನ್ನು ಪಾಲಿಸುವಂತೆ ಸೂಚಿಸಿತ್ತು. ಯಾವುದೇ ಪ್ರಕರಣದ FIR ದಾಖಲಿಸುವ ಮೊದಲು ಡಿವೈಎಸ್‌ಪಿ ಅಥವಾ ಅದಕ್ಕೆ ಸಮಾನಾಂತರವಾಗಿ ಹುದ್ದೆಯನ್ನು ಹೊಂದಿರುವ ಅಧಿಕಾರಿಗಳು ಆ ಪ್ರಕರಣದ ಪಾಥಮಿಕ ತನಿಖೆಯನ್ನು ಏಳು ದಿನಗಳ ಒಳಗೆ ಪೂರ್ಣಗೊಳಿಸಬೇಕು ಹಾಗೂ ಆ ಪ್ರಕರಣದ ತನಿಖಾಧಿಕಾರಿಯಾದವರು, ಪ್ರಕರಣಕ್ಕೆ ಸಂಬಂಧಪಟ್ಟವರನ್ನು ಬಂಧಿಸುವ ಮೊದಲು ಪೊಲೀಸ್‌ ವರಿಷ್ಟಾಧಿಕಾರಿಯವರ ಬಳಿ ಅನುಮತಿಯನ್ನು ಪಡೆಯಬೇಕು ಎಂದು ಸುಪ್ರಿಂ ಕೋರ್ಟ್‌ ಸೂಚಿಸಿತ್ತು.

ಈ ತೀರ್ಪಿನಿಂದ, FIR ದಾಖಲಾಗುವುದು ವಿಳಂಬವಾಗುತ್ತದೆ, ಹಾಗೂ ಡಿವೈಎಸ್‌ಪಿ ಅಥವಾ ಅವರಿಗೆ ಸಮಾನಾಂತರವಾದ ಹುದ್ದೆಯನ್ನು ಹೊಂದಿರುವ ಅಧಿಕಾರಿಗಳ ಸಂಖ್ಯೆ ಕಡಿಮೆ ಇರುವುದರಿಂದ ಒಂದು ವಾರದ ಒಳಗೆ ಪ್ರಾಥಮಿಕ ತನಿಖೆಯನ್ನು ಮಾಡುವುದು ಕೂಡಾ ಕಷ್ಟ ಸಾಧ್ಯ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರವು ಕಾಯ್ದೆಗೆ ತಿದ್ದುಪಡಿಯನ್ನು ತಂದಿತ್ತು. ಈ ತಿದ್ದುಪಡಿಯು ಸಂಸತ್ತಿನಲ್ಲಿ ಅಂಗೀಕಾರವಾಗಿತ್ತು ಕೂಡ.

ಈ ತಿದ್ದುಪಡಿಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ವಕೀಲ ಪ್ರಥ್ವಿರಾಜ್‌ ಚೌಹಾಣ್‌ ಅವರು ಸುಪ್ರಿಂ ಮೆಟ್ಟಿಲೇರಿದ್ದರು. ಜಸ್ಟೀಸ್‌ ಅರುಣ್‌ ಮಿಶ್ರಾ, ಜಸ್ಟೀಸ್‌ ವಿನೀತ್‌ ಸರಣ್‌, ಜಸ್ಟೀಸ್‌ ರವೀಂದ್ರ ಭಟ್‌ ಅವರಿದ್ದ ಸುಪ್ರಿಂ ಕೋರ್ಟ್‌ ಪೀಠವು ಈ ಮಹತ್ತರವಾದ ತೀರ್ಪನ್ನು ಇಂದು ಪ್ರಕಟಿಸಿದೆ.

ಎಸ್‌ಸಿ/ಎಸ್‌ಟಿ ಕಾಯ್ದೆಯಲ್ಲಾದ ತಿದ್ದುಪಡಿಯೇನು?

SC/STಯವರ ಮೇಲಾಗುವ ದೌರ್ಜನ್ಯವನ್ನು ತಡೆಯುಲು ಇರುವಂತಹ ಕಾಯ್ದೆಗೆ ಸಂಸತ್ತಿನಲ್ಲಿ ಸೆಕ್ಷನ್‌ 18A ಅನ್ನು ಸೇರಿಸಲಾಗಿತ್ತು. ಇದರ ಪ್ರಕಾರ FIR ದಾಖಲಿಸಲು ಯಾವುದೇ ಪ್ರಾಥಮಿಕ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿತ್ತು. ಮತ್ತು ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಅಥವಾ ವ್ಯಕ್ತಿಗಳನ್ನು ಬಂಧಿಸಲು ತನಿಖಾಧಿಕಾರಿಯು ಮೇಲಧಿಕಾರಿಗಳ ಅನುಮತಿಯನ್ನು ಪಡೆಯುವ ಅಗತ್ಯವಿಲ್ಲವೆಂದು ತಿದ್ದುಪಡಿಯನ್ನು ಸೇರಿಸಲಾಗಿತ್ತು.

ಪ್ರಮುಖವಾಗಿ, CrPC (Code of Criminal Procedure, 1973) ನ ಕಲಂ 438 (ನಿರೀಕ್ಷಣಾ ಜಾಮೀನು/Anticipatory bail) ಎಸ್‌/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ಅನ್ವಯವಾಗುವುದಿಲ್ಲ ಎಂದು ತಿದ್ದುಪಡಿಯು ಹೇಳುತ್ತದೆ.

ಈ ತಿದ್ದುಪಡಿಯಿಂದ SC/STಯೇತರರ ವಿರುದ್ದ ಸುಳ್ಳು ಕೇಸು ದಾಖಲಾಗುವ ಸನ್ನಿವೇಷಗಳು ಎದುರಾಗುವ ಅಪಾಯವಿದೆ ಎಂಬುದು ಅರ್ಜಿದಾರರ ಪರ ವಾದವಾಗಿತ್ತು. ಇನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)ಯ 2015ರ ವರದಿಯ ಪ್ರಕಾರ ದೇಶದಲ್ಲಿ ಪರಿಶಿಷ್ಟ ವರ್ಗದವರ ವಿರುದ್ದ ದೌರ್ಜನ್ಯ ಎಸಗಲಾಗಿದೆ ಎಂದು 1,40,340 ಪ್ರಕರಣಗಳು ದಾಖಲಾಗಿದ್ದವು. ಇವುಗಳಲ್ಲಿ 17,012 ಪ್ರಕರಣಗಳ ವಿಚಾರಣೆ 2015ರಲ್ಲೇ ಮುಗಿದಿದ್ದು 4,702 ಪ್ರಕರಣಗಳಲ್ಲಿ ಮಾತ್ರ ಅಪರಾಧ ಸಾಬೀತಾಗಿರುವುದಾಗಿ NCRB ವರದಿ ನೀಡಿದೆ. ಉಳಿದ ೧೨,೩೧೦ ಪ್ರಕರಣಗಳನ್ನು ವಜಾಗೊಳಿಸಲಾಗಿದೆ ಅಥವಾ ಅರೋಪಿಯನ್ನು ನಿರಪರಾಧಿಯೆಂದು ಘೋಷಿಸಿ ತೀರ್ಪು ನೀಡಲಾಗಿದೆ. ಇಲ್ಲಿ ಅಪರಾಧ ಸಾಬೀತಾಗಿರುವ ಪ್ರಮಾಣ ಶೇಕಡಾ 27.6ರಷ್ಟು ಮಾತ್ರ.

ಇನ್ನು ಪರಿಶಿಷ್ಟ ಪಂಗಡದವರ ವಿರುದ್ದ ದೌರ್ಜನ್ಯ ಎಸಗಿದ ಆರೋಪದಲ್ಲಿ 3,03,605 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇವುಗಳಲ್ಲಿ ಕೇವಲ 9,656 ವ್ಯಕ್ತಿಗಳ ಮೇಲಿನ ಅಪರಾಧ ಸಾಬೀತಾಗಿ ಶಿಕ್ಷೆಯನ್ನು ಪ್ರಕಟಿಸಲಾಗಿತ್ತು. 25,385 ಜನರನ್ನು ನಿರ್ದೋಷಿಗಳು ಎಂದು ನ್ಯಾಯಾಲಯ ಘೋಷಿಸಿತ್ತು. ಇಲ್ಲಿಯೂ ಕೇವಲ ಶೇಕಡಾ 25ರಷ್ಟು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ಪ್ರಕಟವಾಗಿದೆ.

ಹೀಗಿರುವಾಗ, ಈ ಎಸ್‌ಟಿ/ಎಸ್‌ಸಿ ದೌರ್ಜನ್ಯ ತಡೆ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ನಕಲಿ ಪ್ರಕರಣಗಳನ್ನು ಕೂಡಾ ದಾಖಲಿಸುವ ಸಾಧ್ಯತೆಗಳು ಕೂಡ ಇವೆ ಎಂಬ ಅಂಶವನ್ನು ಅಲ್ಲಗೆಳೆಯಲಾಗುವುದಿಲ್ಲ. ಇದರಿಂದ, ಅಮಾಯಕರು ಕೂಡಾ ತೊಂದರೆ ಅನುಭವಿಸಬೇಕಾಗಬಹುದು ಹಾಗೂ ಸುಖಾಸುಮ್ಮನೆ ಕೋರ್ಟಿನ ಸಮಯ ಕೂಡಾ ವ್ಯರ್ಥವಾಗುತ್ತದೆ. ಈಗಾಗಲೇ ಪ್ರತಿ ವರ್ಷ ಬಹಳಷ್ಟು ಕೇಸುಗಳು ವಿಲೇವಾರಿಯಾಗದೇ ಉಳಿದುಕೊಳ್ಳುತ್ತಿವೆ. ಹಾಗಾಗಿ, ಕನಿಷ್ಟ ಪಕ್ಷ ತನಿಖಾಧಿಕಾರಿಯಾದವರು ಪ್ರಕರಣ ದಾಖಲಿಸುವ ಮೊದಲು ಮೇಲ್ನೋಟಕ್ಕಾದರೂ ಅದರ ಕುರಿತಾಗಿ ವಿಚಾರಣೆ ಕೈಗೊಳ್ಳುವ ಅಗತ್ಯವಿದೆ. ಸರ್ಕಾರವೂ ಈ ತಿದ್ದುಪಡಿಯನ್ನು ಮರುಪರಿಶೀಲಿಸುವ ಅಗತ್ಯತೆ ಇದೆ.

Tags: SC/STSC/ST ದೌರ್ಜನ್ಯ ತಡೆ ತಿದ್ದುಪಡಿ ಕಾಯ್ದೆಸಾಂವಿಧಾನಿಕ ಮಾನ್ಯತೆಸುಪ್ರಿಂ ಕೋರ್ಟ್‌
Previous Post

ಕಗ್ಗಂಟಾಗದಂತೆ ನೂತನ ಸಚಿವರಿಗೆ ಖಾತೆ ಹಂಚಿದ CM BSY

Next Post

ಯಡಿಯೂರಪ್ಪ ಬೆಂಗಳೂರು ನಗರಾಭಿವೃದ್ಧಿ ಖಾತೆ ತಮಲ್ಲೇ ಉಳಿಸಿಕೊಂಡಿದ್ದೇಕೆ?

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ಯಡಿಯೂರಪ್ಪ ಬೆಂಗಳೂರು ನಗರಾಭಿವೃದ್ಧಿ ಖಾತೆ ತಮಲ್ಲೇ ಉಳಿಸಿಕೊಂಡಿದ್ದೇಕೆ?

ಯಡಿಯೂರಪ್ಪ ಬೆಂಗಳೂರು ನಗರಾಭಿವೃದ್ಧಿ ಖಾತೆ ತಮಲ್ಲೇ ಉಳಿಸಿಕೊಂಡಿದ್ದೇಕೆ?

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada