ಕಳೆದ ಬಾರಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕೆ ನೀಡಬಾರದೆ ಎಂಬ ಚರ್ಚೆ ರಾಜಕೀಯ ತಿರುವು ಪಡೆದಿತ್ತು. ಮಾಧ್ಯಮಗಳ ಮಕ್ಕಖ ಬಳಿಯೇ ಅಭಿಪ್ರಾಯ ಸಂಗ್ರಹಿಸಿದಾಗ ಬಹುತೇಕ ಮಕ್ಕಳ ಮೊಟ್ಟೆ ಬೇಕು ಎಂದು ಆಗ್ರಹಿಸಿದ್ದರು. ಆದರೆ ಮಾಂಸಹಾರಿಗಳಲ್ಲದ ವಿದ್ಯಾರ್ಥಿಗಳು ಏನು ತಿನ್ನಬೇಕು ಎಂಬ ಪ್ರಶ್ನೆ ಮಾತ್ರ ಹಾಗೆಯೇ ಇತ್ತು ಇದಕ್ಕೆಲ್ಲ ಈಗ ಶಿಕ್ಷಣ ಇಲಾಖೆ ತೆರೆ ಎಳೆದಿದ್ದು, ರಾಜ್ಯದ 8 ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ಮಕ್ಕಳಿಗೆ ಮೊಟ್ಟೆ ಕೊಡಲು ಆದೇಶ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ವಿತರಿಸುವುದಾಗಿ ತಿಳಿಸಿದೆ.
ಹೌದು, ಈ ಕುರಿತು ಆದೇಶ ಹೊರಡಿಸಿರುವ ಇಲಾಖೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯ 8 ಜಿಲ್ಲೆಗಳಾದ
ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿನ 15,29,713 ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ ಕೊಡಲಾಗುವುದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕೆ ಕೊಡಲು ಸೂಚನೆ ನೀಡಿದೆ.

ಈ ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಿರುವ ಕಾರಣದಿಂದ ಪೌಷ್ಟಿಕಾಂಶ ಆಹಾರದ ಜೊತೆ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ 11 ವಾರಗಳ ಕಾಲ, ಅಕ್ಟೋಬರ್ ನಿಂದ ಫೆಬ್ರವರಿ ವರೆಗೆ 13 ವಾರ, ಒಟ್ಟು 24 ವಾರ ಮೊಟ್ಟೆ ಕೊಡಲಾಗುವುದು. ಇದಕ್ಕೆ 4494.29 ಲಕ್ಷ ಈ ಯೋಜನೆಗೆ ಮೀಸಲಿರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್ ವಿಶಾಲ್ ಅವರಿಂದ ಆದೇಶದಲ್ಲಿ ತಿಳಿಸಲಾಗಿದೆ.






