• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಟಿ ರವಿ ಕಮ್ಯೂನಲ್‌ ಫೆಲೋ : ಮಾಜಿ ಸಿಎಂ ಸಿದ್ದರಾಮಯ್ಯ

Any Mind by Any Mind
November 29, 2022
in ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಬೊಮ್ಮಾಯಿ ಅವರು ಉಂಡಾಡಿ ಗುಂಡನಂತೆ ಮೈಗಳ್ಳರಾಗಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಅವನ್ಯಾವನೋ ಒಬ್ಬ ಸುನಿಲ, ಡಕಾಯಿತಿ ಮರ್ಡರ್ ಕೇಸ್ ನಲ್ಲಿ ಇದ್ದವನ ಜೊತೆ ಬಿಜೆಪಿ ಮುಖಂಡರೆಲ್ಲಾ ಸೇರಿಕೊಂಡಿದ್ದರು. ಇವರು ನೀತಿ ಹೇಳೋದು ಬದನೆಕಾಯಿ ತಿನ್ನೋಕಾ..? ಸಿಸಿಬಿ ಅವರು ಅವನನ್ನ ಹುಡುಕ್ತಾ ಇದ್ದಾರೆ. ಅವನು ಬಿಜೆಪಿ ಮುಖಂಡರ ಜೊತೆಗೆ ಇದ್ದ. ಪೊಲೀಸರಿಗೆ ಆತನನ್ನ ಅರೆಸ್ಟ್ ಮಾಡೋಕೆ ಹೇಗೆ ಧೈರ್ಯ ಬರುತ್ತೆ..? ಆಡಳಿತ ರೂಢ ಬಿಜೆಪಿ ಶಾಸಕರು ಸಂಸದರು ಅವರ ಜೊತೆಗಿದ್ರೆ ಹೆಂಗ್ ಪೊಲೀಸ್ ಅರೆಸ್ಟ್ ಮಾಡುತ್ತಾರೆ..? ಬಿಜೆಪಿಯವರು ಹೇಳೋದೊಂದು ಮಾಡೋದೊಂದು. ನಲಪಾಡ್ ಮೇಲೆ ಒಂದು ಕೇಸ್ ಇದೆ ಅದರ ಬಿಜೆಪಿ ನಾಯಕರ ಮೇಲೆ ಎಷ್ಟು ಕ್ರಿಮಿನಲ್ ಕೇಸ್ಗಳಿವೆ..? ಅಮಿತ್ ಶಾ ಮೇಲೆ ಮರ್ಡರ್ ಕೇಸ್ ಇತ್ತು, ಗಡಿಪಾರು ಆದೇಶದಲ್ಲಿತ್ತು. ಬಿಜೆಪಿಗೆ ಏನು ನೈತಿಕತೆ ಇದೆ ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ADVERTISEMENT

ಚುನಾವಣಾ ಆಯೋಗದ ಆಯುಕ್ತರ ನೇಮಕಾತಿಯಲ್ಲಿ ಪಾರದರ್ಶಕತೆ ಇಲ್ಲ, ಕೇಂದ್ರ ಸರ್ಕಾರದ ಹಸ್ತಕ್ಷೇಪದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆ ಹಾಗೂ ಸ್ವತಂತ್ರವಾದದ್ದು. ಅದರಲ್ಲಿ ಆಡಳಿತ ಪಕ್ಷದವರು ಹಾಗೂ ವಿರೋಧ ಪಕ್ಷದವರು ಇಬ್ಬರು ಇರಬೇಕು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ ಎಂದರು. ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ಸಿನಿಮಾ ಮಾಡಲು ಹೊರಟಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಯಾರೋ ಸಿನಿಮಾ ಮಾಡಲು ಬಂದಿದ್ರು. ಕನಕಗಿರಿ ಕ್ಷೇತ್ರದವರಂತೆ, ನಿಮ್ಮ ಸಿನಿಮಾ ಮಾಡ್ತೀನಿ ಅಂತ ಹೇಳಿದ್ರು, ನಾನೇನು ನಟನೆ ಮಾಡುತ್ತಿಲ್ಲಪ್ಪ, ನನಗೆ ಆಕ್ಟಿಂಗ್ ಬರಲ್ಲ ಎಂದು ಹೇಳಿದ್ದಾರೆ.

ನನಗೆ ಎಲ್ಲಾ ಕಡೆ ಕರೀತಾ ಇದ್ದಾರೆ, ಕೋಲಾರದಲ್ಲಿ ಕೆ.ಎಚ್‌.ಮುನಿಯಪ್ಪ ಸೇರಿ ಹಲವರು ಒತ್ತಾಯ ಮಾಡುತ್ತಿದ್ದಾರೆ. ವರುಣ ಕ್ಷೇತ್ರ ಬಾದಾಮಿ ಚಾಮರಾಜಪೇಟೆ ಹೆಬ್ಬಾಳ ಕೊಪ್ಪಳ ಎಲ್ಲಾ ಕಡೆಯಿಂದಲೂ ಕರೆತಿದ್ದರು. ಚಿಕ್ಕನಾಯಕನಹಳ್ಳಿಯಲು ಕರಿತಿದ್ದಾರೆ. ಹೈಕಮಾಂಡ್ ಅವರು ಎಲ್ಲಿ ನಿಲ್ಲಬೇಕು ಅಂತ ಹೇಳ್ತಾರೋ ಅಲ್ಲಿ ನಿಲ್ತೀನಿ, ನನ್ನ ಆಸಕ್ತಿ ಇಲ್ಲ, ಹೈಕಮಾಂಡ್ಗೆ ಬಿಟ್ಬಿಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಅಭ್ಯರ್ಥಿ ಸ್ಥಾನಕ್ಕೆ ಅರ್ಜಿ ಯಾಕೆ ಹಾಕಬೇಕು..? ನಾವು ಪಕ್ಷದ ಪ್ರಾಮಾಣಿಕರು ಎಂದು ಶಾಮನೂರು ಶಿವಶಂಕರಪ್ಪ ಮಗ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಕ್ಷಕ್ಕೂ ದುಡ್ಡು ಬೇಕಲ್ರಿ ಮಲ್ಲಿಕಾರ್ಜುನ್ ಯಾವ ಸಂದರ್ಭದಲ್ಲಿ ಗೊತ್ತಿಲ್ಲ ಕೇಳ್ತೀನಿ ಅವರ ತಂದೆ ಶಿವಶಂಕರಪ್ಪ ಕೂಡ ಅರ್ಜಿ ಹಾಕಿದ್ದಾರೆ. ಸಾಮಾಜಿಕ ನ್ಯಾಯದ ಜೊತೆಗೆ ಗೆಲ್ಲುವ ಅಭ್ಯರ್ಥಿಯು ಮುಖ್ಯ. ಮನುವಾದಿ ಬಿಜೆಪಿ ಪಕ್ಷವನ್ನು ತೆಗಿಬೇಕು ನಮ್ಮ ಕಾಂಗ್ರೆಸ್ಸಿನ ಎಲ್ಲಾ ಕಾರ್ಯಕರ್ತರು ಕೂಡ ಅದೇ ಅಭಿಪ್ರಾಯದಲ್ಲಿದ್ದಾರೆ. ಯಾರಿಗೆ ಟಿಕೆಟ್ ನೀಡಿದರು ನಮ್ಮ ಕಾರ್ಯಕರ್ತರು ಸಪೋರ್ಟ್ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಅದೊಂದು ಮದುವೆ ಕಾರ್ಯಕ್ರಮವಾಗಿದ್ದು ಅಲ್ಲಿ 40,000 ಜನ ಸೇರಿದ್ರು. ಅಲ್ಲಿ ನೆರದಿದ್ದವರು ರಾಜಕೀಯದ ಬಗ್ಗೆ ಮಾತಾಡಿ ಅಂತ ಹೇಳಿದ್ರು ಕೊಪ್ಪಳದಲ್ಲಿ ಎಲ್ಲ ಯೋಗ್ಯ ಅಭ್ಯರ್ಥಿಗಳಿದ್ದಾರೆ, ಎಲ್ಲರೂ ಸಹಾಯ ಮಾಡಿ ಅಂತ ಹೇಳಿದ್ದೆ ಅಷ್ಟೇ ಎಂದರು. ಸಿಟಿ ರವಿ ಕ್ರಿಮಿನಲ್ ಫೆಲೋ ಅವನಿಗೆ ಉತ್ತರ ಕೊಡಕ್ಕಾಗಲ್ಲ he is the most criminal fellow. ಆತನಿಗೆ ಜಾತ್ಯತೀತ ತತ್ವ ಅರ್ಥ ಆಗಲ್ಲ ಅವರಿಗೆಲ್ಲ ಉತ್ತರ ಕೊಡ್ತಾ ಕೂರೋದಕ್ಕೆ ಆಗಲ್ಲ. ಸಂವಿಧಾನ ಅವರಿಗೆ ಅರ್ಥ ಆಗಲ್ಲ ಎಂದರು.

ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು ಇಟ್ಟುಕೊಂಡು ಮಾಡಿದ ಮಲೆನಾಡು ಜನಕ್ರೋಶ ಕಾರ್ಯಕ್ರಮ ತುಂಬಾ ಚೆನ್ನಾಗಿ ಆಗಿದೆ. ಸಾಕಷ್ಟು ಜನ ಸೇರಿದ್ರು ಕಾರ್ಯಕ್ರಮ ಮುಖ್ಯವಾಗಿ ಇದ್ದರು. ಸಂತ್ರಸ್ತರ ಸಮಸ್ಯೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿರುವುದನ್ನು ಗಮನಿಸಿದೆ. ಇಷ್ಟು ವರ್ಷದಿಂದ ಕಾಂಗ್ರೆಸ್ ಗೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಇದೇ ಜಿಲ್ಲೆಯವರು. 2008ರಿಂದ ಬಿಜೆಪಿ ಸರ್ಕಾರದ ಅಧಿಕಾರದಲ್ಲಿತ್ತು. ಈ ಮೂರೂವರೆ ವರ್ಷದಲ್ಲಿ ಏನು ಮಾಡಿದ್ದಾರೆ ಅದಕ್ಕೆ ಉತ್ತರ ಇದೆಯಾ..? ನನಗೆ 2015 ರಲ್ಲಿ ಈ ವಿಷಯವನ್ನು ಗಮನಕ್ಕೆ ತಂದ್ರು. ನಾನು ಆಗ ಫಾರೆಸ್ಟ್ ಪ್ರಿನ್ಸಿಪಲ್ ಸೆಕ್ರೆಟರಿ ಆಗಿದ್ದ ಮದನ್ ಗೋಪಾಲ್ ಅವರನ್ನು ನೇಮಕ ಮಾಡಿ ಸರ್ವೇ ಮಾಡಿಸಿ ಸುಮಾರು ಐವತ್ತಾರು ಡಿ ನೋಟಿಫಿಕೇಶನ್ ಮಾಡಿದೆ. ಒಂದು ಡಿ ನೋಟಿಫಿಕೇಶನ್ ಮೇಲೆ ಗಿರೀಶ್ ಆಚಾರ್ ಎಂಬಾತ ಹೈಕೋರ್ಟ್ ನಲ್ಲಿ ದಾವೆ ಹೊಡಿದ. ಹೈ ಕೋರ್ಟ್ ಎಲ್ಲಾ ಆದೇಶವನ್ನು ರದ್ದು ಮಾಡಿತ್ತು. ಆತ ಒಂದು ಡಿ ನೋಟಿಫಿಕೇಶನ್ ಮೇಲೆ ಪ್ರಕರಣ ಓಡಿದ್ದರೆ ಸರ್ಕಾರ ಎಲ್ಲಾ ಆದೇಶಗಳನ್ನು ರದ್ದು ಮಾಡಿತ್ತು. ಬಿಜೆಪಿ ಸರ್ಕಾರ ಶರಾವತಿ ಸಂತ್ರಸ್ತರ ವಿಚಾರದಲ್ಲಿ ಏನೂ ಮಾಡಿಲ್ಲ ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ

Next Post

ಮಂಡ್ಯ; ಜೆಡಿಎಸ್ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಬಿಜೆಪಿ ಮುಖಂಡ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಮಂಡ್ಯ; ಜೆಡಿಎಸ್ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಬಿಜೆಪಿ ಮುಖಂಡ

ಮಂಡ್ಯ; ಜೆಡಿಎಸ್ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಬಿಜೆಪಿ ಮುಖಂಡ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada