• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

2014ರಿಂದ ಅದಾನಿ ಅಕ್ರಮದ ಬಗ್ಗೆ ಸೆಬಿಗೆ ತಿಳಿದಿತ್ತು: ರಾಹುಲ್‌ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ದೇಶ, ರಾಜಕೀಯ
0
ರಾಹುಲ್‌ ಗಾಂಧಿ

ರಾಹುಲ್‌ ಗಾಂಧಿ

Share on WhatsAppShare on FacebookShare on Telegram

ಗೌತಮ್‌ ಅದಾನಿ ಕಂಪನಿಯನ್ನು ಆರೋಪ ಮುಕ್ತಗೊಳಿಸಿದ್ದ ಭಾರತದ ಭದ್ರತೆಗಳು ಮತ್ತು ವಿನಿಮಯ ಮಂಡಳಿ (ಸೆಬಿ) ಅಧಿಕಾರಿಯೊಬ್ಬರು ತಿಳಿದಿತ್ತು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ADVERTISEMENT

ಗುರುವಾರ (ಆಗಸ್ಟ್ 31) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅದಾನಿ ಕಂಪನಿಗಳನ್ನು ಆರೋಪ ಮುಕ್ತಗೊಳಿಸಿದ್ದ ಸೆಬಿಯ ಅಧಿಕಾರಿಯೊಬ್ಬರು ಈಗ, ಕಂಪನಿ ಒಡೆತನದ ಸುದ್ದಿ ಚಾನೆಲ್ವೊಂದರ ನಿರ್ದೇಶಕರಾಗಿದ್ದಾರೆ. ಅದಾನಿ ಸಮೂಹ ವಿರುದ್ಧ ತನಿಖೆ ನಡೆಸಿದ್ದ ವ್ಯಕ್ತಿಯೇ ಈಗ ಆ ಕಂಪನಿಯ ಉದ್ಯೋಗಿ. ಪರಿಸ್ಥಿತಿ ಹೀಗಿರುವಾಗ, ತನಿಖೆ ಯಾವ ರೀತಿ ಇರಲಿದೆ ಎಂಬುದನ್ನು ಊಹಿಸಬಹುದು” ಎಂದು ರಾಹುಲ್ ಟೀಕಿಸಿದ್ದಾರೆ.

ಅದಾನಿ ಸಮೂಹವು ಬದಲಿ ಕಂಪನಿಗಳ ಮೂಲಕ ಹಲವು ವರ್ಷಗಳ ಕಾಲ ತನ್ನದೇ ಷೇರುಗಳಲ್ಲಿ ಹೂಡಿಕೆ ಮಾಡಿತ್ತು ಎಂಬ ಆರೋಪಗಳ ಕುರಿತು ಜಂಟಿ ಸದನ ಸಮಿತಿಯಿಂದ (ಜೆಪಿಸಿ) ತನಿಖೆ ನಡೆಸುವಂತೆ ರಾಹುಲ್ ಗಾಂಧಿ ಗುರುವಾರ ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ಮುಂಬೈಗೆ ತೆರಳಿದ್ದ ರಾಹುಲ್, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅದಾನಿ ಸಮೂಹ ಕುರಿತ ಯಾವುದೇ ತನಿಖೆಯನ್ನು ಪ್ರಧಾನಿ ನರೇಂದ್ರ ಮೋದಿ ತಡೆಯುತ್ತಿದ್ದಾರೆ’ ಎಂದು ಆರೋಪಿಸಿದರು.

ಅದಾನಿ ಸಮೂಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ ಉದ್ಯಮಿ ಗೌತಮ್ ಅದಾನಿ ಅವರೊಂದಿಗಿನ ಪ್ರಧಾನಿ ನಂಟಿನ ಬಗ್ಗೆ ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ರಾಹುಲ್, ‘ಅದಾನಿ ಹೆಸರನ್ನು ಪ್ರಸ್ತಾಪಿಸಿದ ಕೂಡಲೇ ಪ್ರಧಾನಿ ಅವರಿಗೆ ಮುಜುಗರವಾಗುತ್ತದೆ’ ಎಂದು ಛೇಡಿಸಿದರು.

`ಭಾರತ ಮತ್ತು ಮೋದಿ ಅವರ ಖ್ಯಾತಿಗೆ ಈಗ ಅಪಾಯ ಎದುರಾಗಿದೆ. ಇನ್ನೊಂದೆಡೆ, ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಿ- 20 ನಾಯಕರು ಭಾರತಕ್ಕೆ ಬರುತ್ತಿದ್ದಾರೆ. ಹಾಗಾಗಿ, ಶೃಂಗಸಭೆ ಆರಂಭವಾಗುವುದಕ್ಕೂ ಮುನ್ನವೇ ಅದಾನಿ ಕಂಪನಿ ಕುರಿತು ಎದ್ದಿರುವ ಸಂಶಯಗಳನ್ನು ಮೋದಿ ನಿವಾರಿಸಬೇಕು’ ಎಂದು ರಾಹುಲ್ ಒತ್ತಾಯಿಸಿದರು.

‘ಕೋಟ್ಯಂತರ ರೂಪಾಯಿ ಭಾರತದಿಂದ ಹೊರಗೆ ಹೋಗಿ, ಮತ್ತೆ ದೇಶದೊಳಗೆ ಹರಿದು ಬಂದಿದೆ. ಈ ರೀತಿ ಬಂದ ಹಣವನ್ನು ದೇಶದ ಮೂಲಸೌಕರ್ಯಗಳ ಖರೀದಿಗೆ ಅದಾನಿ ಸಮೂಹ ಬಳಸಿಕೊಂಡಿರುವುದಾಗಿ ವಿಶ್ವದ ಕೆಲ ಪ್ರಸಿದ್ಧ ವಿತ್ತ ಪತ್ರಿಕೆಗಳು ವರದಿ ಮಾಡಿವೆ’ ಎಂದು ರಾಹುಲ್ ಹೇಳಿದರು.

‘ಈ ಹಣ ಯಾರಿಗೆ ಸೇರಿದ್ದು ಎಂಬ ಪ್ರಶ್ನೆ ಎದುರಾಗಿದೆ. ಇದು ಅದಾನಿ ಅಥವಾ ಬೇರೆಯವರಿಗೆ ಸೇರಿದ ಹಣವೇ’ ಎಂದು ಪ್ರಶ್ನಿಸಿದರು.

`ಗೌತಮ್ ಅದಾನಿ ಅಣ್ಣ ವಿನೋದ್ ಅದಾನಿ, ನಾಸರ್ ಅಲಿ ಶಬನ್ ಅಪ್ಲಿ ಹಾಗೂ ಚೀನಿ ಪ್ರಜೆ ಚಾಂಗ್ ಚುಂಗ್-ಲಿಂಗ್ ಎಂಬುವವರು ಈ ಎಲ್ಲ ವ್ಯವಹಾರಗಳ ಸೂತ್ರಧಾರರಾಗಿದ್ದಾರೆ’ ಎಂದು ಆರೋಪಿಸಿದ ಅವರು, ‘ದೇಶದ ಮೂಲಸೌಕರ್ಯಗಳಲ್ಲಿ ಹೂಡಿಕೆ ಮಾಡಲು ವಿದೇಶಿ ಪ್ರಜೆಗಳಿಗೆ ಏಕೆ ಅನುಮತಿ ನೀಡಲಾಯಿತು’ ಎಂದು ಪ್ರಶ್ನಿಸಿದರು.

‘ಕಂಪನಿಯ ಷೇರುಗಳಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲು ಪ್ರಧಾನಿಗೆ ಆಪ್ತರಾಗಿರುವ ಈ ವ್ಯಕ್ತಿಗೆ (ಗೌತಮ್ ಅದಾನಿ) ಮಾತ್ರ ಏಕೆ ಅವಕಾಶ ನೀಡಲಾಗುತ್ತಿದೆ? ಈ ಬಗ್ಗೆ ಯಾವುದೇ ತನಿಖೆಯಾಗುತ್ತಿಲ್ಲ ಏಕೆ’ ಎಂದು ಪ್ರಶ್ನಿಸಿದ ಅವರು, ‘ಈ ಎಲ್ಲ ಆರೋಪಗಳ ಕುರಿತು ತನಿಖೆಗೆ ಜಂಟಿ ಸದನ ಸಮಿತಿಯನ್ನೇ ರಚಿಸಬೇಕು’ ಎಂದು ಆಗ್ರಹಿಸಿದರು.

‘ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಿ-20 ನಾಯಕರು ಭಾರತಕ್ಕೆ ಬಂದಿಳಿಯಲಿದ್ದಾರೆ. ಅದಾನಿ ಕಂಪನಿಯ ವಿಶೇಷತೆ ಹಾಗೂ ಅದಕ್ಕೆ ಹೆಚ್ಚು ಅನುಕೂಲ ಮಾಡಿಕೊಟ್ಟಿರುವ ಕುರಿತು ಜಿ-20 ನಾಯಕರು ಪ್ರಶ್ನಿಸಬಹುದು. ಹೀಗಾಗಿ, ಅದಾನಿ

ಕಂಪನಿ ವಿರುದ್ಧ ತನಿಖೆಗೆ ಪ್ರಧಾನಿ ಒಲವು ಹೊಂದಿಲ್ಲ’ ಎಂದು ರಾಹುಲ್ ಆರೋಪಿಸಿದರು.

`ಭಾರತದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳು ಸಿಗುತ್ತಿಲ್ಲ. ವಿಮಾನ ನಿಲ್ದಾಣದಿಂದ ಹಿಡಿದು ಸಿಮೆಂಟ್ ಕಾರ್ಖಾನೆಗಳ ವರೆಗೆ ಅದಾನಿ ಏನನ್ನಾದರೂ ಖರೀದಿಸಬಹುದಾಗಿದೆ’ ಎಂದೂ ಟೀಕಿಸಿದರು.

Tags: Goutam AdaniRahul GandhiSEBIಗೌತಮ್‌ ಅದಾನಿರಾಹುಲ್‌ ಗಾಂಧಿ
Previous Post

ಆದಿತ್ಯ-ಎಲ್‌1 ಉಡಾವಣೆ | ಯಶಸ್ಸಿಗೆ ಚೆಂಗಾಲಮ್ಮನಿಗೆ ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್‌ ಪೂಜೆ

Next Post

10 ವರ್ಷಗಳ ನಂತರ ಮತ್ತೆ ನಿರ್ದೇಶನದತ್ತ ಕಿಚ್ಚ ..!

Related Posts

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?
ರಾಜಕೀಯ

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

by ಪ್ರತಿಧ್ವನಿ
February 1, 2026
0

ಜಮಾತೆ-ಇ-ಇಸ್ಲಾಮಿ (ಜೆಇಐ) ಶನಿವಾರ  ಅಮೀರ್ ಡಾ. ಶಫೀಕರ್ ರೆಹಮಾನ್ ಅವರ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಸಾರ್ವಜನಿಕ ಜೀವನ ಮತ್ತು ನಾಯಕತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
sudeep

10 ವರ್ಷಗಳ ನಂತರ ಮತ್ತೆ ನಿರ್ದೇಶನದತ್ತ ಕಿಚ್ಚ ..!

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada