ಬೆಂಗಳೂರು: ನಗರದ ಎರಡನೇ ವಿಮಾನ ನಿಲ್ದಾಣ ಬೆಂಗಳೂರು ದಕ್ಷಿಣದಲ್ಲೇ ಆಗಲಿದ್ದು, ಊರುಗಳನ್ನು ಸ್ಥಳಾಂತರ ಮಾಡದಂತೆ ಜಾಗ ಹುಡುಕಲು ಸೂಚನೆ ನೀಡಲಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಎರಡನೇ ವಿಮಾನ ನಿಲ್ದಾಣ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಎರಡನೇ ವಿಮಾನ ನಿಲ್ದಾಣ ಸಂಬಂಧ ಇದುವರೆಗೂ ಏನೆಲ್ಲಾ ಆಗಿದೆ ಎಂಬ ಪ್ರಸ್ತಾವನೆ ನೀಡಿದ್ದಾರೆ. ಊರುಗಳು ಒಕ್ಕಲೆಬ್ಬಿಸದೇ ಗುಡ್ಡಗಳು ಇಲ್ಲದಿರುವ ಕಡೆ, ಕಡಿಮೆ ಜಾಗದಲ್ಲಿ ತಾಂತ್ರಿಕವಾಗಿ ಕಾರ್ಯಸಾಧುವಾಗಿರುವ ಜಾಗ ನೋಡುವಂತೆ ಸೂಚಿಸಿದ್ದೇನೆ. ನಂತರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆʼ ಎಂದು ತಿಳಿಸಿದರು.

ಯಾವ ಜಾಗದಲ್ಲಿ ನಗರದ ಎರಡನೇ ವಿಮಾನ ನಿಲ್ದಾಣ ಮಾಡಲಾಗುವುದು ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ʼಬಹುತೇಕ ಬೆಂಗಳೂರು ದಕ್ಷಿಣದಲ್ಲೇ ಆಗಲಿದೆ. ಈಗ ಕೊಟ್ಟಿರುವ ಪ್ರಸ್ತಾವನೆಗಳು ದಕ್ಷಿಣದ್ದೇ ಆಗಿವೆ. ಭೂಮಿ ಬೆಲೆ ಕಡಿಮೆ ಇರಬೇಕು, ಸರ್ಕಾರಕ್ಕೆ ಹೆಚ್ಚಿನ ಹೊರೆ ಆಗಬಾರದುʼ ಎಂದು ಹೇಳಿದರು.







