• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹತ್ತು ದಿನಗಳ ಅಂತರದಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ವಿರುದ್ದ 2ನೇ ಪ್ರಕರಣ ದಾಖಲು

Any Mind by Any Mind
June 18, 2021
in ರಾಜಕೀಯ
0
ಹತ್ತು ದಿನಗಳ ಅಂತರದಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ವಿರುದ್ದ 2ನೇ ಪ್ರಕರಣ ದಾಖಲು
Share on WhatsAppShare on FacebookShare on Telegram

ಇತ್ತೀಚಿಗಷ್ಟೇ ಭ್ರಷ್ಟಾಚಾರ ಆರೋಪದ ಮೇಲೆ ದೇಶದೆಲ್ಲೆಡೆ ಸುದ್ದಿಯಾಗಿದ್ದ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ಬಿಜೆಪಿ ಮೈತ್ರಿಕೂಟವನ್ನು ಸೇರಿ ಚುನಾವಣೆಗೆ ಸ್ಪರ್ಧಿಸುವಂತೆ ಬುಡಕಟ್ಟು ಜನಾಂಗದ ಮುಖಂಡರೊಬ್ಬರಿಗೆ ಲಂಚ ನೀಡಿರುವ ಕುರಿತು ಆರೋಪಗಳು ಕೇಳಿ ಬಂದಿವೆ.

ADVERTISEMENT
ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ದ ಪ್ರಕರಣ ದಾಖಲು

ಈ ಕುರಿತಾಗಿ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಮುಸ್ಲಿಂ ವಿದ್ಯಾರ್ಥಿ ಒಕ್ಕೂಟದ ನಾಯಕರಾಗಿರುವ ಪಿ ಕೆ ನವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲು ಅನುಮತಿ ಕೋರಿದ್ದರು. ಆಡಿಯೋ ಕ್ಲಿಪ್ ಗಳ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲು ಕೋರ್ಟ್ ಸಮ್ಮತಿಯನ್ನು ಸೂಚಿಸಿತ್ತು.

ಸುರೇಂದ್ರನ್ ಅವರು ಸ್ಥಳಿಯ ಬುಡಕಟ್ಟು ಜನಾಂಗದ ಮುಖಂಡರಾದ ಸಿ ಕೆ ಜಾನು ಅವರಿಗೆ ಬಿಜೆಪಿ ಪರವಾಗಿ ಚುನವಣೆಯಲ್ಲಿ ಸ್ಪರ್ಧಿಸಲು ರೂ. ಹತ್ತು ಲಕ್ಷದಷ್ಟು ಮೊತ್ತವನ್ನು ಲಂಚವಾಗಿ ನೀಡಿದ್ದರು ಎಂದು ಆರೋಪಿಸಲಾಗಿದೆ. ಹಿಂದಿನಂತೆಯೇ ಈ ಬಾರಿಯೂ ಸುರೇಂದ್ರನ್ ಅವರು ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಮಿಜೊರಾಂ ಮಾಜಿ ರಾಜ್ಯಪಾಲ ಹಾಗೂ ಕೇರಳ ಬಿಜೆಪಿ ಮುಖಂಡ ಕುಮ್ಮನಮ್ ರಾಜಶೇಖರನ್ ಅವರು, ಇದು ಸುರೇಂದ್ರನ್ ಅವರ ಘನತೆಗೆ ಚ್ಯುತಿ ತರಲು ಮಾಡುತ್ತಿರುವ ಸುಳ್ಳು ಆರೋಪಗಳು. ಕಾಂಗ್ರೆಸ್, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಜತೆ ಸೇರಿ ಈ ಷಡ್ಯಮತ್ರ ರಚಿಸಿವೆ, ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ವಿಜಯರಾಘವನ್ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಕೆಲಸ ಮಾಡಬೇಕಿದೆ. ಆದರೆ, ಅವರ ಅಕ್ರಮಗಳು ಕೇರಳ ಜನರ ಮುಂದೆ ಜಗಜ್ಜಾಹೀರಾಗಿದೆ, ಎಂದು ಹೇಳಿದ್ದಾರೆ.

ಈ ಹಿಂದೆ ಸುರೇಂದ್ರನ್ ಅವರು ಮಂಜೇಶ್ವರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿ ಎಸ್ ಪಿ ಮುಖಂಡ ಕೆ ಸುಂದರ ಅವರು ನಾಮ ಪತ್ರ ಹಿಂಪಡೆಯಲು ಎರಡೂವರೆ ಲಕ್ಷ ಲಂಚ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

Previous Post

ರಾಮನ ಹೆಸರು ಹೇಳಲೂ ಇವರಿಗೆ ಯೋಗ್ಯತೆ ಇಲ್ಲ, ಯಡಿಯೂರಪ್ಪ ನಂಬರ್‌ ಒನ್ ಬಕಾಸುರ: ವಿ ಎಸ್‌ ಉಗ್ರಪ್ಪ

Next Post

ಪ್ರತಿರೋಧದ ದನಿಗಳಿಗೆ ನ್ಯಾಯಾಂಗದ ಆಕ್ಸಿಜನ್

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ಪ್ರತಿರೋಧದ ದನಿಗಳಿಗೆ ನ್ಯಾಯಾಂಗದ ಆಕ್ಸಿಜನ್

ಪ್ರತಿರೋಧದ ದನಿಗಳಿಗೆ ನ್ಯಾಯಾಂಗದ ಆಕ್ಸಿಜನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada