ಯುವಕನೊಬ್ಬ ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಾಡಿ ಗೆದ್ದಿದ್ದಾನೆ. ಮಧ್ಯಪ್ರದೇಶದ ಜಬಲ್ಪುರದ 19 ವರ್ಷದ ಅಥರ್ವ ಚತುರ್ವೇದಿ ಎಂಬ ದ್ವಿತೀಯ ಪಿಯುಸಿಯ ವಿದ್ಯಾರ್ಥಿ, ವೈದ್ಯನಾಗಬೇಕು ಎಂಬ ಕನಸಿಗಾಗಿ ಆತ ನ್ಯಾಯಾಲಯದ ಮುಂದೆ ನಿಂತು ವಾದ ಮಾಡಿ ಗೆದ್ದಿದ್ದಾನೆ.

ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಎರಡರಲ್ಲೂ ಪಾಸಾಗಿದ್ದರೂ, ಆತ ಜೀವಶಾಸ್ತ್ರವನ್ನು ತೆಗೆದುಕೊಂಡ. ನೀಟ್ ಪರೀಕ್ಷೆಯಲ್ಲಿ ಒಂದಲ್ಲ, ಎರಡು ಬಾರಿ ಪಾಸಾಗಿ. 530 ಅಂಕಗಳನ್ನು ಗಳಿಸಿದ್ದ. ಆದರೆ ಇಡಬ್ಲ್ಯೂಎಸ್ ಕೋಟಾದಡಿಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗಲಿಲ್ಲ. ಎಂಬಿಬಿಎಸ್ ಸೀಟು ಪಡೆಯಲು ಆತನಿಗೆ ಸಾಧ್ಯವಾಗಲಿಲ್ಲ. ಏಕೆಂದರೆ ರಾಜ್ಯವು ಅಲ್ಲಿ ಮೀಸಲಾತಿಯನ್ನು ವಿಸ್ತರಿಸುವ ನೀತಿಯನ್ನು ಜಾರಿಗೆ ತಂದಿರಲಿಲ್ಲ.

ಇಡಬ್ಲ್ಯೂಎಸ್ ಮೀಸಲಾತಿ ಸಂವಿಧಾನಬದ್ಧವಾಗಿದೆ. ಸರ್ಕಾರಿ ಕಾಲೇಜುಗಳಿಗೆ ಮಾತ್ರ ಸೀಮಿತವಾಗದೆ, ನೀತಿ ಜಾರಿಗೆ ಸಂಬಂಧಿಸಿದ ಅನಿಶ್ಚಿತತೆ ವಿದ್ಯಾರ್ಥಿಗಳ ಭವಿಷ್ಯವನ್ನು ಹಾನಿಗೊಳಿಸಬಾರದು. ಅರ್ಹತೆ ಪಡೆದ ವಿದ್ಯಾರ್ಥಿಗೆ ಆಡಳಿತಾತ್ಮಕ ಲೋಪದಿಂದ ಅವಕಾಶ ತಪ್ಪಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ತೀರ್ಪು ಕೇವಲ ಅಥರ್ವನಿಗಷ್ಟೇ ಅಲ್ಲ, ದೇಶದಾದ್ಯಂತ ಇಡಬ್ಲ್ಯೂಎಸ್ ವರ್ಗದ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.






