• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಅದ್ಧೂರಿ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ ಸೀಕಲ್‌ ರಾಮಚಂದ್ರಗೌಡ

Any Mind by Any Mind
April 20, 2023
in ರಾಜಕೀಯ
0
ಅದ್ಧೂರಿ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ ಸೀಕಲ್‌ ರಾಮಚಂದ್ರಗೌಡ
Share on WhatsAppShare on FacebookShare on Telegram

ಶಿಡ್ಲಘಟ್ಟದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡರು ಇಂದು ತಮ್ಮ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರ ಜೊತೆಗೂಡಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.  ಬೆಳಗ್ಗೆ ಗೋಪೂಜೆ ಮಾಡಿ, ವೀರಾಪುರದ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ ಅವರು, ನಂತರ ಸೇವಾಸೌಧಕ್ಕೆ ಆಗಮಿಸಿರು.  ಸೇವಾಸೌಧದಿಂದ ತಾಲೂಕು ಕಚೇರಿವರೆಗೂ ಕಣ್ಣು ಹಾಯಿಸಿದಷ್ಟು ದೂರ ಜನವೋ ಜನ, ದಾರಿಯುದ್ದಕ್ಕೂ ಹಾರ ಹಾಕಿ, ಹೂಮಳೆಗರೆದು, ಜಯಘೋಷಗಳನ್ನು ಕೂಗಿ, ತಮಟೆ ಬಾರಿಸಿ, ಪಟಾಕಿ ಸಿಡಿಸಿ, ತಮ್ಮ ನೆಚ್ಚಿನ ನಾಯಕನ ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾದರು.

ADVERTISEMENT

ಕೋಲಾರದ ಸಂಸದರಾದ ಎಸ್. ಮುನಿಸ್ವಾಮಿ ಮತ್ತು ಸೀಕಲ್ ರಾಮಚಂದ್ರ ಗೌಡ, ಎಂ ರಾಜಣ್ಣನವರಿಗೆ 50 ಅಡಿ ಗಾತ್ರದ ಭಾರಿ ಹೂವಿನಹಾರವನ್ನು ಹಾಕಿ ಸಂಭ್ರಮಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಕೇಸರಿ ಬಾವುಟ, ಶಾಲು, ಕಣ್ಣು ಹಾಯಿಸಿದಲ್ಲೆಲ್ಲ ಪಕ್ಷದ ಬಾವುಟ. ಶಿಡ್ಲಘಟ್ಟದಲ್ಲಿ ಈ ಬಾರಿ ಕಮಲ ಅರಳುವ ಬಲವಾದ ಸೂಚನೆ ನೀಡಿದೆ.  ಜನರನ್ನು ಉದ್ದೇಶಿಸಿ ಎಸ್. ಮುನಿಸ್ವಾಮಿ ಅವರು ಮಾತನಾಡಿ, ʻನೀವೆಲ್ಲ ಸೇರಿದ್ದು ಭಾರಿ ಸಂತಸ ತಂದಿದೆ ಎಂದರು.

ಬಳಿಕ  ರಾಜಣ್ಣನವರು ಮಾತನಾಡಿ ನನಗೆ ಆಶೀರ್ವಾದ ಮಾಡಿದಂತೆ ರಾಮಚಂದ್ರ ಗೌಡರಿಗೂ ಆಶೀರ್ವಾದ ಮಾಡಿ, ಮತ ನೀಡುವುದರ ಮೂಲಕ ಅವರನ್ನು, ಪಕ್ಷವನ್ನು ಗೆಲ್ಲಿಸಿ ಎಂದರು. ಸೀಕಲ್ ಆನಂದಗೌಡರನ್ನು ಜನ ಭುಜದ ಮೇಲೆ ಹೊತ್ತುಕೊಂಡು, ಕುಣಿದು ಕುಪ್ಪಳಿಸಿರು. ಸುಡುವ ಬಿಸಿಲನ್ನೂ ಲೆಕ್ಕಿಸದೆ ಆನಂದಗೌಡರು ಎಲ್ಲರ ಜೊತೆಗೂಡಿ ಕುಣಿದು, ಆನಂದಿಸಿದರು. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕರಾದ ಶಿಡ್ಲಘಟ್ಟ ರತ್ನ ಎಂದೇ ಖ್ಯಾತರಾದ ಆರ್.ಚಂದ್ರು ಅವರು ಸಹ ಭಾಗವಹಿಸಿದ್ದರು. ಜೊತೆಗೆ ಮುಖಂಡರಾದ   ನಂದೀಶ್, ಸುರೇಂದ್ರಗೌಡ, ರಮೇಶ್ ಬಾಯರ್, ಕನಕ ಪ್ರಸಾದ್, ಗೋಪಾಲಣ್ಣ, ಮಹಿಳಾ ಮುಖಂಡರಾದ ನರ್ಮದಾ ರೆಡ್ಡಿ, ತ್ರಿವೇಣಿ, ಮಾಲತಿ ರಾಣಿ, ಮುನಿರತ್ನಮ್ಮ, ರತ್ನಮ್ಮ ಮತ್ತು ಅಶ್ವಿನಿ ಎಲ್ಲರೂ ತಮ್ಮ ತಮ್ಮ ಬೆಂಬಲಿಗರು ಮತ್ತು ಕಾರ್ಯಕರ್ತರ ಜೊತೆ ಸೇರಿದ್ದರು.

Tags: #karnatakaassemblyelection #election2023 #shidlaghatta #nomination #sikalramachandragowda #pratidhvani #pratidhvanidigital #pratidhvaninews
Previous Post

ನಾನು ಚುನಾವಣೆಗೆ ನಿಲ್ಲಲ್ಲ.. ಉಪಚುನಾವಣೆಗೆ ಸ್ಪರ್ಧೆ ಮಾಡ್ತೇನೆ – ರವಿಕೃಷ್ಣಾರೆಡ್ಡಿ

Next Post

ಪ್ರತಿ ಬಾರಿಯಂತೆ ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿದ ಸತೀಶ್​ ಜಾರಕಿಹೊಳಿ!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ಪ್ರತಿ ಬಾರಿಯಂತೆ ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿದ ಸತೀಶ್​ ಜಾರಕಿಹೊಳಿ!

ಪ್ರತಿ ಬಾರಿಯಂತೆ ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿದ ಸತೀಶ್​ ಜಾರಕಿಹೊಳಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada