• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

ಪ್ರತಿಧ್ವನಿ by ಪ್ರತಿಧ್ವನಿ
July 14, 2026
in Top Story, ಕರ್ನಾಟಕ, ರಾಜಕೀಯ
0
Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ADVERTISEMENT
Bidadi township: ಸರ್ವೆಗೆ ಬಂದ ಅಧಿಕಾರಿಗಳ ಮೇಲೆ ಹಲ್ಲೆ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ರಿಯಾಕ್ಷನ್

ರಾಮಚಂದ್ರೇಗೌಡರು ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹೋದ್ಯೋಗಿಯಾಗಿದ್ದ ಅವರು ಪಕ್ಷದ ಸಂಘಟನೆಯಲ್ಲಿ ಹಲವು ವರ್ಷಗಳ ಕಾಲ ಸಕ್ರಿಯರಾಗಿದ್ದರು.

ಆರ್‌ಎಸ್‌ಎಸ್‌ ಹಿನ್ನೆಲೆಯ ರಾಮಚಂದ್ರೇಗೌಡರು 1953ರಲ್ಲಿ ಸಂಘವನ್ನು ಸೇರಿದ್ದು, 1970ರಲ್ಲಿ ರಾಜಕೀಯ ಪ್ರವೇಶ ಮಾಡಿದರು. ಬಿಜೆಪಿ ಹಿಂದಿನ ರೂಪವಾದ ಭಾರತೀಯ ಜನಸಂಘದ ಅಭ್ಯರ್ಥಿಯಾಗಿ ಬೆಂಗಳೂರು ನಗರ ನಿಗಮಕ್ಕೆ ಆಯ್ಕೆಯಾದ ಮೊದಲ ಕಾರ್ಪೊರೇಟರ್ ಎಂಬ ಹೆಗ್ಗಳಿಕೆ ಅವರದ್ದಾಗಿದೆ. ಅವರು ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

Bidadi Township : ಪೊಲೀಸ್ ಹಾಗೂ ಸರ್ವೆ ಅಧಿಕಾರಿಗಳೊಂದಿಗೆ ರೈತರ ವಾಗ್ದಾಳಿ.! #pratidhvani

2010ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಹೈಕೋರ್ಟ್‌ ಪ್ರಕರಣದಲ್ಲಿ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಸುಮಾರು ಐದು ದಶಕಗಳ ಕಾಲ ರಾಜಕೀಯದಲ್ಲಿ ಸೇವೆ ಸಲ್ಲಿಸಿದ ರಾಮಚಂದ್ರೇಗೌಡರು 2018ರಲ್ಲಿ ಸಕ್ರಿಯ ರಾಜಕೀಯದಿಂದ ನಿವೃತ್ತರಾಗಿದ್ದರು. ಅವರ ನಿಧನಕ್ಕೆ ಬಿಜೆಪಿ ನಾಯಕರು ಹಾಗೂ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Bidadi Township between farmers and officials : ಬಿಡದಿಯಲ್ಲಿ ರೊಚ್ಚಿಗೆದ್ದ ರೈತ ಮಹಿಳೆಯರು.! #pratidhvani

ಮಾಜಿ ಸಚಿವ ರಾಮಚಂದ್ರೇಗೌಡ ಅವರ ಅಗಲಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ಶ್ರೀ ರಾಮಚಂದ್ರ ಗೌಡರ ನಿಧನದ ವಾರ್ತೆ ತಿಳಿದು ಬಹಳ ದುಃಖವಾಯಿತು. ಶ್ರೀಯುತರು ನನ್ನ ಆತ್ಮೀಯರಾಗಿದ್ದರು ಹಾಗೂ ಮೊದಲ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಂಪುಟ ಸದಸ್ಯರಾಗಿದ್ದರು. ಅವರು ಸ್ನೇಹಶೀಲರು, ಸರಳ ಸಜ್ಜನಿಕೆಯ ಸಾಕಾರಮೂರ್ತಿ ಆಗಿದ್ದರು.ಶ್ರೀ ರಾಮಚಂದ್ರ ಗೌಡರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರು, ಅಭಿಮಾನಿಗಳು ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Tags: BJPcongressHD KumaraswamyJDSKarnatakaKarnataka PoliticsRamachandregowda
Previous Post

ರೈಲಿನಲ್ಲಿ ಪೂಜೆ ನಡೆಸಲು ಅವಕಾಶ ಇದೆಯೇ? ವೈರಲ್ ವಿಡಿಯೊಗೆ  ರೈಲ್ವೆ ಇಲಾಖೆ ಸ್ಪಷ್ಟನೆ ಇಲ್ಲಿ

Next Post

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

Related Posts

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?
Top Story

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

by ಪ್ರತಿಧ್ವನಿ
July 14, 2026
0

ನವದೆಹಲಿ: ಮಾಸಿಕ ₹1,100 ಪಿಂಚಣಿ ಪಡೆಯಲು ಬ್ಯಾಂಕ್‌ಗೆ ತೆರಳಿದ್ದ ವೃದ್ಧರೊಬ್ಬರ ಖಾತೆಯಲ್ಲಿ ಏಕಾಏಕಿ ಸುಮಾರು ₹760 ಕೋಟಿ ಹಣ ಕಾಣಿಸಿಕೊಂಡಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ...

Read moreDetails
ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

July 14, 2026
ರೈಲಿನಲ್ಲಿ ಪೂಜೆ ನಡೆಸಲು ಅವಕಾಶ ಇದೆಯೇ? ವೈರಲ್ ವಿಡಿಯೊಗೆ  ರೈಲ್ವೆ ಇಲಾಖೆ ಸ್ಪಷ್ಟನೆ ಇಲ್ಲಿ

ರೈಲಿನಲ್ಲಿ ಪೂಜೆ ನಡೆಸಲು ಅವಕಾಶ ಇದೆಯೇ? ವೈರಲ್ ವಿಡಿಯೊಗೆ  ರೈಲ್ವೆ ಇಲಾಖೆ ಸ್ಪಷ್ಟನೆ ಇಲ್ಲಿ

July 14, 2026
ಸಿಜೆಐ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ಅವಾಚ್ಯ ಪದ: ಸುಪ್ರೀಂ ಕೋರ್ಟ್‌ನಲ್ಲಿ ನಡೆದದ್ದೇನು?

ಸಿಜೆಐ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ಅವಾಚ್ಯ ಪದ: ಸುಪ್ರೀಂ ಕೋರ್ಟ್‌ನಲ್ಲಿ ನಡೆದದ್ದೇನು?

July 14, 2026
ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

July 14, 2026
Next Post
ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada