• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

ಡಿಕೆ ಶಿವಕುಮಾರ್‌ಗೆ ಕೊಟ್ಟ ಮಾತನ್ನು ನೆನಪಿಸಿಕೊಟ್ಟ ಸಚಿವ ರಾಮಲಿಂಗಾರೆಡ್ಡಿ..

ಪ್ರತಿಧ್ವನಿ by ಪ್ರತಿಧ್ವನಿ
June 4, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

Ramalinga Reddy Disappointment On DKS

Share on WhatsAppShare on FacebookShare on Telegram

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿಕೆ ಶಿವಕುಮಾರ್‌ ಅವರಿಗೆ ಹೊಸ ತಲೆನೋವು ಶುರುವಾಗಿದೆ. ಪ್ರಬಲ ಖಾತೆಗಳಲ್ಲಿ ಒಂದಾಗಿರುವ ಬೆಂಗಳೂರು ನಗರಾಭಿವೃದ್ದಿ ಮೇಲೆ ಇಬ್ಬರು ಸಚಿವರ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ.

ADVERTISEMENT
CM DK Shivakumar Meeting : ಆತ್ಮ ಸಾಕ್ಷಿಗೆ ತಕ್ಕಂತೆ ಕೆಲಸ ಮಾಡುವಂತೆ ತಾಕೀತು..! #police #karnataka

ಹೀಗಾಗಿ ಈ ವಿಚಾರ ಇದೀಗ ಡಿಕೆ ಶಿವಕುಮಾರ್‌ ಅವರಿಗೆ ಖಾತೆ ಹಂಚಿಕೆ ವಿಚಾರದಲ್ಲಿ ಹೊಸ ಕಗ್ಗಂಟು ಎದುರಾಗಿದೆ. ಹಿರಿಯ ಶಾಸಕ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ದಿ ಖಾತೆಯ ಮೇಲೆ ಹೆಚ್ಚಿನ ಒಲವು ಇದ್ದರೂ ಸಹ ಅದು ಅವರಿಗೆ ದಕ್ಕುವ ಸಾಧ್ಯತೆಗಳಿಲ್ಲ. ಸದ್ಯ ಮಾಜಿ ಸಚಿವ ಕೃಷ್ಣಭೈರೇಗೌಡ, ಕೆ.ಜೆ. ಜಾರ್ಜ್‌ ಹಾಗೂ ರಾಮಲಿಂಗಾ ರೆಡ್ಡಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.

ಇನ್ನೂ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿಯೂ ಇದೇ ಖಾತೆಯ ಮೇಲೆ ಕಣ್ಣಿಟ್ಟಿದ್ದ ರಾಮಲಿಂಗಾರೆಡ್ಡಿ ಆಗಲೂ ಅಸಮಾಧಾನ ಹೊರಹಾಕಿದ್ದರು. ಆದರೆ ಖುದ್ದು ಅಂದಿನ ಡಿಸಿಎಂ ಡಿಕೆ ಶಿವಕುಮಾರ್‌ ರಾಮಲಿಂಗಾರೆಡ್ಡಿ ನಿವಾಸಕ್ಕೆ ತೆರಳಿ ಮನವೊಲಿಸಿದ್ದರು. ಅಲ್ಲದೆ ಮುಂದಿನ ಬಾರಿ ನಿಮಗೆ ಈ ಖಾತೆಯನ್ನು ಬಿಟ್ಟುಕೊಡುವುದಾಗಿ ಮಾತು ಕೊಟ್ಟಿದ್ದರು ಎನ್ನಲಾಗಿದೆ.

ಇದನ್ನೂ ಓದಿ : ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

ಈ ಕಾರಣಕ್ಕಾಗಿಯೇ ಇದೀಗ ರಾಮಲಿಂಗಾರೆಡ್ಡಿ ಕೊಟ್ಟ ಮಾತನ್ನು ನೆನಪಿಸಿಕೊಂಡು ಬೆಂಗಳೂರು ನಗರಾಭಿವೃದ್ದಿ ಖಾತೆಗಾಗಿ ಹಠ ಹಿಡಿದಿದ್ದಾರೆ. ಇನ್ನೂ ಈ ಬಗ್ಗೆ ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಖಾತೆ ಹಂಚಿಕೆ ವಿಚಾರದ ಚರ್ಚೆಯಾಗಿದ್ದು, ಇದರಲ್ಲಿ ಬೇಸರಗೊಂಡು ಸಭೆಯಿಂದ ಅರ್ಧಕ್ಕೆ ರಾಮಲಿಂಗಾರೆಡ್ಡಿ ಎದ್ದು ಹೊರನಡೆದಿದ್ದಾರೆ.

ನನಗೆ ಕೊಡುವುದಾದರೆ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನು ನೀಡಬೇಕು. ಈ ಬಗ್ಗೆ ಮೂರು ವರ್ಷಗಳ ಹಿಂದೆಯೇ ಹೇಳಿದ್ದರು ಎಂದು ರಾಮಲಿಂಗಾರೆಡ್ಡಿ ಬೇಸರ ಹೊರಹಾಕಿದ್ದಾರೆ. ಅಲ್ಲದೆ ಬೇಕಾದ ಖಾತೆ ಸಿಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆಯ ನೀಡುವ ಮಾತುಗಳನ್ನಾಡಿದ್ದಾರೆ.

ಆದರೆ ಪ್ರಮಾಣ ವಚನ ಸ್ವೀಕರಿಸಿದ ಒಂದೇ ದಿನದಲ್ಲಿ ಒಬ್ಬ ಹಿರಿಯ ನಾಯಕರಾಗಿ ರಾಮಲಿಂಗಾರೆಡ್ಡಿಯವರು ರಾಜೀನಾಮೆಯ ಬಗ್ಗೆ ಮಾತನಾಡುತ್ತಿರುವುದು ಎಷ್ಟು ಸರಿ? ಯಾವುದೇ ಖಾತೆಯಾದರೂ ಸಹ ಅದಕ್ಕೆ ತನ್ನದೆ ಆದ ಒಂದು ಗೌರವ ಇದ್ದೇ ಇರುತ್ತದೆ. ಆದರೆ ಸದ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆಯುತ್ತಿರುವ ಹಗ್ಗ – ಜಗ್ಗಾಟ ಯಾವ ಹಂತಕ್ಕೆ ಹೋಗಿ ತಲುಪುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

Tags: Bangalore Urban Development DepartmentBenglore newsCM DK Shivakumarcongress karnatakaCongress PartyK J GeorgeKarnataka PoliticsKrishna Byre GowdaMinister Ramlinga ReddySenior Congress leadersiddaramaiah
Previous Post

ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

Next Post

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

Related Posts

ಜೈಲಿನಲ್ಲಿದ್ದ ದರ್ಶನ್  ವೈರಲ್ ವಿಡಿಯೋ ನೋಡಿ ಭಾವುಕರಾದ ಅಭಿಮಾನಿಗಳು!
Top Story

ಜೈಲಿನಲ್ಲಿದ್ದ ದರ್ಶನ್  ವೈರಲ್ ವಿಡಿಯೋ ನೋಡಿ ಭಾವುಕರಾದ ಅಭಿಮಾನಿಗಳು!

by ಪ್ರತಿಧ್ವನಿ
June 4, 2026
0

ನಟ ದರ್ಶನ್ ಜೈಲಿನಲ್ಲಿರುವ ನಡುವೆಯೂ ಅವರ ಅಭಿಮಾನಿಗಳ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. "ನಮ್ಮ ಬಾಸ್ ಎಲ್ಲಿದ್ದರೂ ಬಾಸೇ" ಎಂಬ ಅಭಿಯಾನದ ಮೂಲಕ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ತಾಯಿಯ ಆಶಯದಿಂದ ಮುಖ್ಯಮಂತ್ರಿ ಹುದ್ದೆಯವರೆಗೆ; ಡಿಕೆಶಿಯ ಭಾವನಾತ್ಮಕ ಕಥೆ ಇಲ್ಲಿದೆ

ತಾಯಿಯ ಆಶಯದಿಂದ ಮುಖ್ಯಮಂತ್ರಿ ಹುದ್ದೆಯವರೆಗೆ; ಡಿಕೆಶಿಯ ಭಾವನಾತ್ಮಕ ಕಥೆ ಇಲ್ಲಿದೆ

June 4, 2026
ವಂದೇ ಭಾರತ್ ಪ್ರಾಯೋಗಿಕ ಸಂಚಾರ ರದ್ದು; ಕಾರಣವೇನು ?

ವಂದೇ ಭಾರತ್ ಪ್ರಾಯೋಗಿಕ ಸಂಚಾರ ರದ್ದು; ಕಾರಣವೇನು ?

June 4, 2026
ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

June 4, 2026
ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

June 4, 2026
Next Post
ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada