Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸೆ.26, ಬೆಂಗಳೂರು ಬಂದ್‌: ಮು.ಚಂದ್ರು , ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೂಪುರೇಷೆ ನಿರ್ಧಾರ..!

ಪ್ರತಿಧ್ವನಿ

ಪ್ರತಿಧ್ವನಿ

September 25, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಕೇಂದ್ರ vs ರಾಜ್ಯ: ಇಡಿ ಕಛೇರಿಯಲ್ಲಿ ತಮಿಳುನಾಡು ಪೊಲೀಸರಿಂದ ಶೋಧ ಕಾರ್ಯ

ಪಕ್ಷ ತೊರೆದರೂ ಶೆಟ್ಟರ್‌ ಮೇಲಿನ ಬಿಜೆಪಿ ನಾಯಕರ ಅಭಿಮಾನಕ್ಕಿಲ್ಲ ಭಂಗ!

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ


ಬೆಂಗಳೂರು: ಸೆ.26ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಶಾಂತಿಯುತವಾಗಿ ಬಂದ್‌ ನಡೆಸುತ್ತೇವೆ. ನಗರದ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್‌ ವರೆಗೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲಿದ್ದೇವೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿವರಿಸಿದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ಖಂಡಿಸಿ ಸೆ.26ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್‌ ವಿಚಾರವಾಗಿ ಮು.ಚಂದ್ರು ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಭಾನುವಾರ ಮಹತ್ವದ ಸುದ್ದಿಗೋಷ್ಠಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ಮು.ಚಂದ್ರು ಅವರು ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು. ಕೂಡಲೇ ರಾಜ್ಯ ಸರ್ಕಾರ ವಿಧಾನಸಭೆ ಅಧಿವೇಶನ ಕರೆದು ಚರ್ಚಿಸಿ, ಸಂಕಷ್ಟ ಸೂತ್ರ ಜಾರಿ ಮಾಡುವ ತನಕ ನೀರು ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ಕೇಂದ್ರ ಸರ್ಕಾರ ಮತ್ತು ಕಾವೇರಿ ನೀರು ನಿರ್ವಹಣಾ ಮಂಡಳಿಗೆ ನೀಡಬೇಕು. ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಕೂಡಲೇ ರದ್ದು ಪಡಿಸಿ, ಸ್ವತಂತ್ರ ನೀರು ನಿರ್ವಹಣಾ ಮಂಡಳಿ ರಚಿಸಬೇಕು. ಈ ಮಂಡಳಿಯಲ್ಲಿ ನಾಲ್ಕು ರಾಜ್ಯಗಳ ರೈತ ಪ್ರತಿನಿಧಿಗಳು ಮತ್ತು ಎಲ್ಲರನ್ನು ಒಳಗೊಂಡಂತೆ ಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಒತ್ತಿ ಹೇಳಿದರು.

ಡಿಕೆ ಶಿವಕುಮಾರ್‌ ಲಘು ಹೇಳಿಕೆಗೆ ಖಂಡನೆ

ಬೆಂಗಳೂರು ಬಂದ್‌ ಕುರಿತಾಗಿ ಡಿಸಿಎಂ ಹಾಗೂ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಯನ್ನು ಖಂಡಿಸಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ನಾವು ಆಯ್ಕೆ ಮಾಡಿದಂತ ಸರ್ಕಾರ ನಮ್ಮ ಪರವಾಗಿ ಕೆಲಸ ಮಾಡಬೇಕು. ಆದರೆ ನಮ್ಮ ಸರ್ಕಾರದ ನೀರಾವರಿ ಸಚಿವರು ನಮ್ಮ ಬಂದ್‌ ಬಗ್ಗೆ ಬಹಳ ಲಘುವಾಗಿ ಮಾತನಾಡುತ್ತಾರೆ. ಬೆಂಗಳೂರಿಗೆ ಅಗೌರವ ತರುತ್ತಿದ್ದೇವೆಂದು ದೂರುತ್ತಿದ್ದಾರೆ. ಇದು ಅವರ ಅಧಿಕಾರದ ಘನತೆಗೆ ತಕ್ಕಂತಹ ಮಾತಲ್ಲ. ಬೆಂಗಳೂರಿನ ಜನರ ಕುಡಿಯುವ ನೀರಿನ ಸಮಸ್ಯೆ ಬಗ್ಗೆ, ಅವರ ಬದುಕಿನ ಬಗ್ಗೆ ಕಾಳಜಿ ವಹಿಸಿ ಹೋರಾಟದಲ್ಲಿ ಭಾಗಿಯಾಗಿದ್ದೇವೆ ಎಂದು ಅವಮಾನಕರ ವಿಚಾರ ಹೇಗೆ ಆಗುತ್ತದೆ? ಡಿಕೆ ಶಿವಕುಮಾರ್‌ ಅವರಿಗೆ ಅಧಿಕಾರ ಶಾಶ್ವತ ಅಲ್ಲ. ನೀವೂ ಮೇಕೆದಾಟು ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದ್ದೀರಿ. ಆದರೆ ನಾವು ಹಾಗೆ ಹೋರಾಟ ಮಾಡುವುದಿಲ್ಲ, ನಾವು ಪ್ರಾಮಾಣಿಕವಾದ ಹೋರಾಟ ನಡೆಸುತ್ತಿದ್ದೇವೆ. ಜನತೆಯ ಜೀವನಾಡಿಗಾಗಿ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.

ಕಪ್ಪುಪಟ್ಟಿ ಧರಿಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರು
ಬೆಂಗಳೂರು ಬಂದ್‌ಗೆ ಖಾಸಗಿ ಶಾಲೆಗಳ ಒಕ್ಕೂಟ ಬೆಂಬಲ ಘೋಷಿಸಿದೆ. ತಮ್ಮ ಒಕ್ಕೂಟದ ಎಲ್ಲ ಖಾಸಗಿ ಶಾಲೆಗಳು ಬಂದ್‌ ಮಾಡಲಿದ್ದಾರೆ. ಪರೀಕ್ಷಾ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಒಕ್ಕೂಟದ ಮುಖಂಡರಾದ ಲೋಕೇಶ್‌ ತಾಳಿಕೋಟೆ ತಿಳಿಸಿದರು.

ಐಟಿ ಬಂದ್‌
ಐಟಿ ಕನ್ನಡಿಗರ ಬಳಗ ಮೂರುವರೆ ಸಾವಿರಕ್ಕೂ ಹೆಚ್ಚು ಐಟಿ ಕಂಪನಿಗಳ ನೌಕರರು ಕೆಲಸಕ್ಕೆ ರಜೆ ಹಾಕಿ ಬೈಕ್ ರ್ಯಾಲಿ ನಡೆಸಲಿದ್ದಾರೆ ಎಂದು ಸಂಘಟನೆ ಅಧ್ಯಕ್ಷರಾದ ಶಿವಾನಂದ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪೋಷಕರ ಸಂಘದ ಯೋಗನಂದ, ಕರ್ನಾಟಕ ಟೆಲಿವಿಷನ್ ಕಲಾವಿದರ ಸಂಘದ ಗಣೇಶ್‌ ರಾವ್‌ ಕೇಸರ್‌ ಕರ್‌, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ಕೃಷ್ಣೇಗೌಡ, ಲೋಕೇಶ್ ಗೌಡ ನರಸಿಂಹಮೂರ್ತಿ, ಕರ್ನಾಟಕ ಕಾರ್ಮಿಕ ಪರಿಷತ್ ಮುಖಂಡ ರವಿ ಶೆಟ್ಟಿ ಬಸ್ರೂರು, ಜಯ ಕರ್ನಾಟಕ ಕಾರ್ಯಧ್ಯಕ್ಷ ರಾಮಚಂದ್ರಪ್ಪ, ಕನ್ನಡ ಕ್ರೈಸ್ತ ಸಂಘಟನೆಯ ಸ್ಟ್ಯಾನ್ ಲಿ ಪಿಂಟೋ ಹಾಗೂ ರಸ್ತೆ ಬದಿ ವ್ಯಾಪಾರಿಗಳ ಸಂಘ ಪೀಸ್ ಆಟೋ ಸಂಘಟನೆ, ಓಲಾ ಉಬೇರ್ ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರ ಸಂಘ ಗೂಡ್ಸ್ ವಾಹನಗಳ ಚಾಲಕ ಮತ್ತು ಮಾಲೀಕರ ಸಂಘದ ಮುಖಂಡರು ಹಾಜರಿದ್ದು, ಬಂದ್‌ಗೆ ಬೆಂಬಲ ಘೋಷಿಸಿದರು.


RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಉತ್ತರಖಾಂಡ್‌ನ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ
ದೇಶ

ಉತ್ತರಖಾಂಡ್‌ನ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ

by Prathidhvani
November 28, 2023
ಬೆಂಗಳೂರು ಸಂಪರ್ಕಿಸುವ 3 ರೈಲುಗಳ ಓಡಾಟ ತಾತ್ಕಾಲಿಕ ರದ್ದು
Top Story

ಬೆಂಗಳೂರು ಸಂಪರ್ಕಿಸುವ 3 ರೈಲುಗಳ ಓಡಾಟ ತಾತ್ಕಾಲಿಕ ರದ್ದು

by Prathidhvani
December 1, 2023
SIM Card: ಡಿ.1ರಿಂದ ಹೊಸ ಸಿಮ್‌ ಕಾರ್ಡ್‌ ನಿಯಮಗಳು
Top Story

SIM Card: ಡಿ.1ರಿಂದ ಹೊಸ ಸಿಮ್‌ ಕಾರ್ಡ್‌ ನಿಯಮಗಳು

by ಪ್ರತಿಧ್ವನಿ
November 29, 2023
ಅಕ್ರಮ ಹಣ ವರ್ಗಾವಣೆ ಕೇಸ್ :  ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ದೇಶ

ಅಕ್ರಮ ಹಣ ವರ್ಗಾವಣೆ ಕೇಸ್ : ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

by Prathidhvani
November 28, 2023
ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ
ಕರ್ನಾಟಕ

ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ

by Prathidhvani
November 25, 2023
Next Post
ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ  ಎಐಎಡಿಎಂಕೆ, ಎನ್‌ಡಿಎಗೆ ಶಾಕ್‌..!

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಎಐಎಡಿಎಂಕೆ, ಎನ್‌ಡಿಎಗೆ ಶಾಕ್‌..!

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ

ಗೊಂದಲದ ಬೆಂಗಳೂರು ಬಂದ್​.. ಇದ್ಯಾಕೆ ಈ ರೀತಿಯ ಗೊಂದಲ ಆಗಿದ್ದು..?

ಗೊಂದಲದ ಬೆಂಗಳೂರು ಬಂದ್​.. ಇದ್ಯಾಕೆ ಈ ರೀತಿಯ ಗೊಂದಲ ಆಗಿದ್ದು..?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist