ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ ಸರಣಿ ಅಪಘಾತವಾಗಿದೆ. 7 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿವಿಧ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬೆಂಗಳೂರು ವಿಮಾನ ನಿಲ್ದಾಣದ ಸಮೀಪವೇ ನಡೆದ ಅಪಘಾತದಲ್ಲಿ 9 ವಾಹನಗಳು ಜಖಂಗೊಂಡಿವೆ.
ಈ ಸರಣಿ ಅಪಘಾತದಲ್ಲಿ 7 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ಕಲ್ಲು, ಮಣ್ಣು ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಮೊದಲು ಕಾರಿಗೆ ಡಿಕ್ಕಿ ಹೊಡೆದಿದೆ. ಆ ಕಾರು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಇದರಿಂದಾಗಿ ಸರಣಿ ಅಪಘಾತ ನಡೆದಿದೆ.
ಲಾರಿ ಕಾರಿಗೆ, ಕಾರು ಬೈಕ್ಗಳಿಗೆ ಡಿಕ್ಕಿಯಾಗಿದೆ. ಲಾರಿಯ ಚಾಲಕ ಸ್ಥಳದಲ್ಲೇ ಇದ್ದು, ವಾಹನ ಸವಾರರು ಆತನನ್ನು ತರಾಟೆಗೆ ತೆಗೆದುಕೊಂಡರು. ಸರಣಿ ಅಪಘಾತದಿಂದಾಗಿ ಹಲವು ವಾಹನಗಳು ರಸ್ತೆಯಲ್ಲಿ ನಿಂತಿದ್ದು, ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.