ನಿರ್ದೇಶಕ ಟಿಎನ್ ಸೀತಾರಾಮ್ ಅವರ ಬಹುತೇಕ ಧಾರವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದ ಭಾರ್ಗಿ ಖ್ಯಾತಿಯ ಕಿರುತೆರೆ ಕಲಾವಿದ ರವಿ ಪ್ರಸಾದ್ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಂಡ್ಯ ಮೂಲದ ರವಿ ಪ್ರಸಾದ್ ಬೆಂಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಮೀಪವರ್ತಿಗಳು ಫೇಸ್ ಬುಕ್ ಗಳಲ್ಲಿ ಪೋಸ್ಟ್ ಹಾಕಿದ್ದಾರೆ.
ಟಿಎನ್ ಸೀತಾರಾಮ್ ಅವರ ಮಾಯಾಮೃಗ, ಮುಕ್ತ ಹಾಗೂ ಮಗಳು ಜಾನಕಿ ಧಾರವಾಹಿಗಳಲ್ಲಿ ನಟಿಸಿದ್ದ ರವಿ ಪ್ರಸಾದ್ ಅರ್ಧಾಂಗಿ ಹಾಗೂ ವರಮಹಾಲಕ್ಷ್ಮೀ ಮುಂತಾದ ಧಾರವಾಹಿಗಳಲ್ಲಿ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದರು. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ಆದರೆ ಮಂಡ್ಯ ರವಿ ಸತ್ತಿಲ್ಲ. ಜಾಂಡಿಸ್ ನಿಂದ ಬಳುತ್ತಿದ್ದ ಅವರಿಗೆ ಕಿಡ್ನಿ ಸಮಸ್ಯೆ ಉಂಟಾಗಿದ್ದು, ಮಂಡ್ಯಗೆ ಕರೆದೊಯ್ಯಲಾಗುತ್ತಿದೆ ಎಂದು ಅವರ ತಂದೆ ಸ್ಪಷ್ಟನೆ ನೀಡಿದ್ದಾರೆ. ಆದರೆ ಮಂಡ್ಯಗೆ ಕರೆದೊಯ್ದ ನಂತರ ಅವರು ಅಸುನೀಗಿದ್ದಾರೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.