• Home
  • About Us
  • ಕರ್ನಾಟಕ
Wednesday, November 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ

ಪ್ರತಿಧ್ವನಿ by ಪ್ರತಿಧ್ವನಿ
October 15, 2025
in Top Story, ಕರ್ನಾಟಕ, ರಾಜಕೀಯ
0
ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ
Share on WhatsAppShare on FacebookShare on Telegram

ಯಾದಗಿರಿ ಜಿಲ್ಲೆಯ ವಿವಿಧ ಅಸಂಘಟಿತ ವರ್ಗದ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್‌

ADVERTISEMENT

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು.

Satish Jarkiholi Reacts On CM Post, Says He Is Out Of The Race | ಸಿಎಂ ರೇಸ್​ನಿಂದ ನಾನು ಹೊರಗೆ

ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್ ಹಾಲ್ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಯಾದಗಿರಿ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೂರಾರು ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸುಮಾರು 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ತಕ್ಷಣ ಉಚಿತವಾಗಿ ನೋಂದಾಯಿಸಿಕೊಂಡು, ಸ್ಮಾರ್ಟ್ ಕಾರ್ಡ್ ಪಡೆದು ಸವಲತ್ತುಗಳ ಲಾಭ ಪಡೆಯುವಂತೆ ಸಲಹೆ ನೀಡಿದರು.

ರಾಜ್ಯದ ದುಡಿಯುವ ಜನರಲ್ಲಿ ಅಸಂಘಟಿತ ವಲಯದ ಪ್ರತಿಶತ 85 ರಷ್ಟು ಕಾರ್ಮಿಕರಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ ಯನ್ನುಅನುಷ್ಠಾನಗೊಳಿಸಲಾಗಿದೆ ಎಂದರು.

ಈ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 35 ಲಕ್ಷ ಕಾರ್ಮಿಕರು ಒಳಗೊಂಡಿದ್ದಾರೆ. ಅವರಿಗೆ ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ ಎಂದರು.

ಯಾದಗಿರಿ ಜಿಲ್ಲೆಯಲ್ಲಿ 59,493 ಕಾರ್ಮಿಕರು ನೊಂದಣಿಯಾಗಿದ್ದು ಅವರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇಂತಹ ಅಸಂಘಟಿತ ಕಾರ್ಮಿಕರ ಅಪಘಾತ ಸಂಭವಿಸಿದಲ್ಲಿ 1 ಲಕ್ಷ ಪರಿಹಾರ ನೀಡಲಾಗುವುದು. ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ 4 ಲಕ್ಷದವರೆಗೆ ವಿಮಾ ಸೌಲಭ್ಯ ನೀಡಲಾಗುವುದು. ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಉದ್ಯೋಗದಾತರು, ಉದ್ದಿಮೆದಾರರು ಉದ್ಯೋಗ ನೀಡಿದಲ್ಲಿ ಶೇ.50 ರಷ್ಟು ವೇತನ ಕಾರ್ಮಿಕ ಇಲಾಖೆಯಿಂದಲೇ ಭರಿಸಲಾಗುವುದೆಂದರು.

ಮೋಟಾರು ಸಾರಿಗೆ ಹಾಗೂ ಸಂಬಂಧಿತ ಕಾರ್ಮಿಕರಿಗೆ ಮತ್ತು ಸಿನಿ ಪರದೆ ಹಿಂದೆ ದುಡಿಯುವ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರಿಗೆ, ಕಲಾವಿದರಿಗೆ, ಸಾಮಾಜಿಕ ಭದ್ರತೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ) ಅಧಿನಿಯಮ ರೂಪಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.

ದೇಶದಲ್ಲಿ ಅದರಲ್ಲಿಯೂ ಕರ್ನಾಟಕದಲ್ಲಿ ಬದಲಾವಣೆ ತರಲು ಸರ್ಕಾರ ಪಂಚಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ.ಪ್ರತಿ ವರ್ಷ 60 ಸಾವಿರ ಕೋ ರೂ ಗಳಂತೆ ಒಟ್ಟು 5 ವರ್ಷದಲ್ಲಿ 5 ಲಕ್ಷ.ಕೋ.ರೂ ಒದಗಿಸುತ್ತಿದೆ. ಅಭಿವೃದ್ಧಿ, ಯೋಜನೆ, ಯೋಜನೆತರ, ಪೆನ್ಷನ್ ಯೋಜನೆಗಳಿಗೂ ಅನುದಾನ ಒದಗಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪರ್ ಕ್ಯಾಪಿಟಾ ಇನ್ಕಮ್ ಹಾಗೂ ಜಿಡಿಪಿ ಯಲ್ಲಿ ರಾಷ್ಟ್ರ ದಲ್ಲಿ ಮುಂಚೂಣಿ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.500 ಕೋ.ಜನರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ವಿಶ್ವದ ಏಕೈಕ ರಾಜ್ಯ ಕರ್ನಾಟಕ ವಾಗಿದೆ ಎಂದು ಹೇಳಿದರು.

ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸಹಾಯಹಸ್ತ ಚಾಚಿ ಅವರಿಗೆ ಮುಖ್ಯ ವಾಹಿನಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ನೋಂದಣಿ ಮಾಡಿಕೊಳ್ಳುವದು ಮುಖ್ಯ ಎಂದ ಅವರು ಈ ಭಾಗದ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಭೀ.ಗುಡಿಗೆ ವಸತಿ ಶಾಲೆಯೊಂದು ಮಂಜೂರು ಆಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.ಅದರಂತೆ ಈ ಭಾಗದ ಸಮಸ್ಯೆಯಾಗಿರುವ ಕಾರ್ಮಿಕರ ಗುಳೆ ಸಮಸ್ಯೆ ಪರಿಹರಿಸಲು ಎಲ್ಲರೂ ಸಂಘಟಿತರಾಗಿ ಶ್ರಮಿಸುವುದು ಮುಖ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್, ವಿಧಾನ ಪರಿಷತ್ ಸದಸ್ಯ ಶ್ರೀ ತಿಪ್ಪಣ್ಣ ಕಮತನೂರ್, ಶಾಸಕ ಶರಣಗೌಡ ಕಂದಕೂರ ಅವರು ಕಾರ್ಮಿಕ ಸಚಿವ ಶ್ರೀ ಸಂತೋಷ್ ಲಾಡ್ ಅವರು ಕಾರ್ಮಿಕರ ಪರ ಕಾರ್ಯ ವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವಡಗೇರಾ ಹಾಗೂ ಗುರುಮಠಕಲ್ ಗೆ ಕಾರ್ಮಿಕ ಮಕ್ಕಳಿಗಾಗಿ ವಸತಿ ಶಾಲೆ ಮಂಜೂರು ಮಾಡುವಂತೆ ಸಚಿವರಿಗೆ ಕೋರಿದರು.

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕ ರಾಜಾ ವೇಣುಗೋಪಾಲ್ ನಾಯಕ, ನಗರಸಭೆ ಅಧ್ಯಕ್ಷ ಲಲಿತಾ ಅನಪುರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್,
ಡಿಸಿ ಹರ್ಷಲ್ ಭೋಯರ್,ಜಿ.ಪಂ.ಸಿಇಓ ಲವೀಶ್ ಒರಡಿಯಾ,ಎಸ್.ಪಿ ಪೃಥ್ವಿಕ್ ಶಂಕರ್, ಲಿಡ್ಕರ್ ಸಂಸ್ಥೆ ಅಧ್ಯಕ್ಷ ಮುಂಡರಗಿ ನಾಗರಾಜ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಜಂಟಿ ಆಯುಕ್ತ ರವಿಕುಮಾರ್, ಇತರೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಆಶಾದೀಪ ಯೋಜನೆಯಡಿ ವೇತನ ಮರುಪಾವತಿ ಚೆಕ್ ವಿತರಣೆ, ಖಾಸಗಿ ವಾಹನ ಚಾಲಕರ ಅಪಘಾತ ಮರಣ ಪರಿಹಾರ ಧನ ಸಹಾಯ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.

Tags: minister santosh ladSantosh Ladsantosh lad agesantosh lad congresssantosh lad dharwadsantosh lad gstsantosh lad interviewsantosh lad latestsantosh lad livesantosh lad ministersantosh lad mlasantosh lad newssantosh lad on modisantosh lad on pm modisantosh lad reactionsantosh lad speechsantosh lad statussantosh lad talksantosh lad trendingsantosh lad videosantosh lad viralsantosh lad vs bjpsantosh lad vs pm modisantosh lad with ajit
Previous Post

ಕಾರ್ಮಿಕ ಆಯವ್ಯಯ ಸಿದ್ಧಪಡಿಸಲುಗ್ರಾಮಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Next Post

ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿ ತಾ.ನಲ್ಲಿ ₹400 ಕೋಟಿ ಹೂಡಿಕೆ: M. B Patil

Related Posts

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ
Top Story

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

by ಪ್ರತಿಧ್ವನಿ
November 12, 2025
0

ಬೆಂಗಳೂರು: ಅಮೇರಿಕಾ ಹಾಗೂ ಇನ್ನಿತರೆ ದೇಶಗಳಲ್ಲಿ ಸ್ವಿಜರ್‌ಲ್ಯಾಂಡ್‌ನಲ್ಲಿರುವ ಕ್ವಾಂಟಮ್‌ ತಂತ್ರಜ್ಞಾನದ ಬಗ್ಗೆ ಸಮಗ್ರ ಮಾಹಿತಿಯನ್ನು ತಿಳಿಸಲು ಸಿದ್ಧಪಡಿಸಿರುವ ʼಸ್ವಿಸ್‌ನೆಕ್ಸ್‌ ಕ್ವಾಂಟಮ್‌ ಮ್ಯಾಪ್‌ʼನ ಮಾದರಿಯಲ್ಲಿ, ʼಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌...

Read moreDetails
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

November 12, 2025
ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

November 12, 2025
ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

November 12, 2025
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

November 12, 2025
Next Post
ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿ ತಾ.ನಲ್ಲಿ ₹400 ಕೋಟಿ ಹೂಡಿಕೆ: M. B Patil

ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿ ತಾ.ನಲ್ಲಿ ₹400 ಕೋಟಿ ಹೂಡಿಕೆ: M. B Patil

Recent News

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ
Top Story

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

by ಪ್ರತಿಧ್ವನಿ
November 12, 2025
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು
Top Story

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

by ಪ್ರತಿಧ್ವನಿ
November 12, 2025
ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ
Top Story

ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

by ಪ್ರತಿಧ್ವನಿ
November 12, 2025
ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ
Top Story

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

by ಪ್ರತಿಧ್ವನಿ
November 12, 2025
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ
Top Story

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

by ಪ್ರತಿಧ್ವನಿ
November 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

November 12, 2025
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

November 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada