• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಆಯವ್ಯದಲ್ಲಿ ಸ್ಟಾರ್ಟಪ್‌ ಉತ್ತೇಜನಕ್ಕೆ ಹಲವಾರು ಕ್ರಮ ಕೈಗೊಳ್ಳಲಾಗಿದೆ ; ಪ್ರಿಯಾಂಕ ಖರ್ಗೆ

Any Mind by Any Mind
July 11, 2023
in ಇದೀಗ, ಕರ್ನಾಟಕ, ರಾಜಕೀಯ
0
ವಿಜಯ ಸಂಕಲ್ಪ ಯಾತ್ರೆಯಲ್ಲ, 40% ಕಮಿಷನ್ ಹೊಡೆಯುವ ಸಂಕಲ್ಪ ಜಾತ್ರೆ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ
Share on WhatsAppShare on FacebookShare on Telegram

ಆಯವ್ಯದಲ್ಲಿ ಸ್ಟಾರ್ಟಪ್‌ ಉತ್ತೇಜನಕ್ಕೆ ಹಲವಾರು ಕ್ರಮಗಳನ್ನು ಪ್ರಕಟಿಸಲಾಗಿದ್ದು, ವಿಶ್ವದರ್ಜೆಯ ಪರಿಪೋಷಣ ಕೇಂದ್ರ (ಇನ್ಕ್ಯುಬೇಷನ್‌ ಕೇಂದ್ರ) ಇನೋವರ್ಸ್‌ (INNOVERSE) ಸ್ಥಾಪನೆ ಮಾಡಲಾಗುವುದು  ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಶ್ರೀ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. 50 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸ್ಥಾಪನೆಯಾಗಲಿದ್ದು,  ಇದು ಸ್ಟಾರ್ಟ್‌‌ ಅಪ್ ಸಂಸ್ಥೆಗಳಿಗೆ ಅತ್ಯುನ್ನತ ತಾಂತ್ರಿಕ ನೆರವು ನೀಡುವ ಗುರಿಯನ್ನು ಹೊಂದಿದೆ.

ADVERTISEMENT

ಕರ್ನಾಟಕವು ಭಾರತದ ನಾವೀನ್ಯತೆಯ ಕೇಂದ್ರವಾಗಿದ್ದು, ಬ್ಲಾಕ್ ಚೈನ್, ಐಒಟಿ (ಇಂಟರ್ನೆಟ್‌ ಆಫ್‌ ಥಿಂಗ್ಸ್) ಕೃತಕ ಬುದ್ಧಿಮತ್ತೆ, ನ್ಯಾನೋ ತಂತ್ರಜ್ಞಾನ, ಯಂತ್ರ ಕಲಿಕೆ, ಸೈಬರ್ ಭದ್ರತೆ, ರೊಬೊಟಿಕ್ಸ್, ಜೆನೆಟಿಕ್ ಎಂಜಿನಿಯರಿಂಗ್ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಕಳೆದ 3 ವರ್ಷಗಳಿಂದ ಸತತವಾಗಿ ಭಾರತದ ನಾವೀನ್ಯತೆ ಸೂಚ್ಯಂಕ ಶ್ರೇಣಿಯಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವ ಶ್ರೀ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಇದರೊಂದಿಗೆ ಕರ್ನಾಟಕ ರಾಜ್ಯವು ಭಾರತೀಯ ತಂತ್ರಜ್ಞಾನ ಉದ್ಯಮದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದ್ದು, ವಿಶೇಷವಾಗಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ, ಏರೋಸ್ಪೇಸ್ ಮತ್ತು ಉದಯೋನ್ಮುಖ ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಅಗ್ರ ಸ್ಥಾನದಲ್ಲಿದೆ ಎಂದೂ ಸಚಿವರು ತಿಳಿಸಿದ್ದಾರೆ.

ಕಳೆದ ಎರಡು ದಶಕಗಳಲ್ಲಿ ಕರ್ನಾಟಕ ತಂತ್ರಜ್ಞಾನ ಮತ್ತು ನಾವೀನ್ಯತೆ ಆಧಾರಿತ ಸ್ಟಾರ್ಟ್‌ಅಪ್‌ಗಳಿಗೆ ಜಾಗತಿಕ ಹಾಟ್‌ಸ್ಪಾಟ್‌ ಆಗಿ ಯಶಸ್ವಿಯಾಗಿ ರೂಪಾಂತರಗೊಂಡಿದೆ, ಮಾಹಿತಿ ತಂತ್ರಜ್ಞಾನ, ಉದ್ಯಮಶೀಲ ಮಾನವ ಸಂಪನ್ಮೂಲ ಮತ್ತು ಮೂಲಸೌಕರ್ಯದಲ್ಲಿನ ಹೂಡಿಕೆಗಳು ನಿರ್ಣಾಯಕ ಪಾತ್ರವನ್ನು ವಹಿಸಿವೆ ಎಂದು ಹೇಳಿರುವ ಸಚಿವರು 15000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಎಂಟರ್‌ಪ್ರೈಸ್ ಟೆಕ್, ಹೆಲ್ತ್-ಟೆಕ್, ಎಡ್ಯೂ-ಟೆಕ್, ಟ್ರಾನ್ಸ್‌ಪೋರ್ಟ್ ಟೆಕ್, ಲಾಜಿಸ್ಟಿಕ್ಸ್, ರಿಯಲ್ ಎಸ್ಟೇಟ್ ಟೆಕ್, ಟ್ರಾವೆಲ್ ಟೆಕ್, ಇ-ಕಾಮರ್ಸ್, ಫುಡ್ ಟೆಕ್, ಫಿನ್‌ಟೆಕ್, ಡೀಪ್ ಟೆಕ್, ಸ್ಪೇಸ್ ಟೆಕ್, ಸುಸ್ಥಿರತೆ ಮುಂತಾದ ಕ್ಷೇತ್ರಗಳಲ್ಲಿ ನಿರತವಾಗಿವೆ;  ಸಾಹಸೋದ್ಯಮ ಬಂಡವಾಳ ನೆಟ್‌ವರ್ಕ್, ಸ್ಟಾರ್ಟಪ್ ಪರಿಸರ ವ್ಯವಸ್ಥೆಯ ಮತ್ತಷ್ಟು ರಚನೆ ಮತ್ತು ಟೆಕ್ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲು ರಾಜ್ಯವು ಉತ್ತಮ ಭೂಮಿಕೆಯಾಗಿದ್ದು, ಸ್ಟಾರ್ಟ್‌ಅಪ್‌ಗಳ ಉತ್ತೇಜನಕ್ಕಾಗಿ ಹೈಟೆಕ್ ಸೌಲಭ್ಯಗಳೊಂದಿಗೆ ಅತ್ಯಾಧುನಿಕ ಇನ್‌ಕ್ಯುಬೇಶನ್ ಸೆಂಟರ್ ʼಇನ್ನೋವರ್ಸ್ʼ ಸ್ಥಾಪಿಸಲು ಯೋಜಿಸಲಾಗಿದೆ.

ʼಇನ್ನೋವರ್ಸ್‌ʼ ಇನ್ಕ್ಯುಬೇಶನ್ ಕೇಂದ್ರವು ಮೂಲಮಾದರಿಯ ಪರಿಹಾರಗಳ ಅಭಿವೃದ್ಧಿ, ಮಾರುಕಟ್ಟೆ ಸಿದ್ಧತೆ, ಸ್ಕೇಲೆಬಲ್ ಉತ್ಪನ್ನಗಳ ಅಭಿವೃದ್ಧಿ, ತಂತ್ರಜ್ಞಾನ ಮತ್ತು ನಾವೀನ್ಯತೆಗೆ ಪೂರಕವಾದ ಪರಿಸರ ವ್ಯವಸ್ಥೆ ಒದಗಿಸಲು ಅನುಕೂಲ ಮಾಡಿಕೊಡುತ್ತದೆ.

ಕೇಂದ್ರವು ಹೈಟೆಕ್ ಮೂಲಸೌಕರ್ಯಗಳಾದ ಪ್ಲಗ್ ಮತ್ತು ಪ್ಲೇ ಸೌಲಭ್ಯಗಳು, ಸಭೆ, ಕಾನ್ಫರೆನ್ಸ್ ಕೊಠಡಿಗಳು, ಕಚೇರಿ ಸ್ಥಳ ಮತ್ತು ಹಂಚಿಕೆಯ ಸೇವೆಗಳು, ಹೈಸ್ಪೀಡ್ ಇಂಟರ್ನೆಟ್ ಪ್ರವೇಶ ಮುಂತಾದವುಗಳನ್ನು ಒದಗಿಸುತ್ತದೆ. ಮಾರ್ಗದರ್ಶನ, ತರಬೇತಿ ಮುಂತಾದ ಸ್ಟಾರ್ಟ್‌ಅಪ್‌ಗಳಿಗೆ ಅವಶ್ಯವಾದ ವಿಶ್ವ ದರ್ಜೆಯ ಸೇವೆಗಳನ್ನು ಕೇಂದ್ರ ನೀಡುತ್ತದೆ. ಮೂಲ ಹಣಕಾಸು ನೆರವು, ಕಾನೂನು ಸೇವೆಗಳು, ಅಕೌಂಟೆನ್ಸಿ ಸೇವೆಗಳು, ತಾಂತ್ರಿಕ ನೆರವು, ನೆಟ್‌ವರ್ಕಿಂಗ್ ಚಟುವಟಿಕೆಗಳು, ಮಾರ್ಕೆಟಿಂಗ್ ನೆರವು, ಲ್ಯಾಬ್‌ಗಳಿಗೆ ಪ್ರವೇಶ, ಉತ್ಪಾದನಾ ಸೌಲಭ್ಯಗಳು, ಔಟ್‌ರೀಚ್ ಮತ್ತು ಹೂಡಿಕೆದಾರರ ಸಂಪರ್ಕ, ವಾಣಿಜ್ಯೋದ್ಯಮಿ ಟೂಲ್ ಕಿಟ್  ಮುಂತಾದ ಸೌಲಭ್ಯಗಳನ್ನು ಕೇಂದ್ರ ಒದಗಿಸುತ್ತದೆ.

ಪ್ರಸ್ತಾವಿತ ಇನ್‌ಕ್ಯುಬೇಶನ್ ಸೆಂಟರ್ ರಾಜ್ಯದಲ್ಲಿ ಯುವಜನರಲ್ಲಿ ಉದ್ಯಮಶೀಲತೆ ಮತ್ತು ಹೊಸ ಉತ್ಸಾಹವನ್ನು ಮೂಡಿಸಲಿದೆಯಲ್ಲದೆ, ಕರ್ನಾಟಕವನ್ನು ಸ್ಟಾರ್ಟ್‌ಅಪ್‌ ಕ್ಷೇತ್ರದಲ್ಲಿ ಚಾಂಪಿಯನ್ ರಾಜ್ಯವನ್ನಾಗಿ ಮಾಡಲಿದೆ ಎಂದು ತಿಳಿಸಿರುವ ಸಚಿವರು ಭವಿಷ್ಯದಲ್ಲಿ 25,000ಕ್ಕೂ ಹೆಚ್ಚು ನೂತನ ಸ್ಟಾರ್ಟ್‌ ಅಪ್‌ಗಳನ್ನು ಆರಂಭಿಸುವ ದೂರದೃಷ್ಟಿಯನ್ನು ಇರಿಸಿಕೊಂಡು  ಆರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Tags: CMSiddaramaiahCongress GovernmentDKShivakumarPriyank Kharge
Previous Post

ಮಹಿಷ ಈ ನೆಲದ ಮಹಾಪುರುಷ ; ಪ್ರೊ.ಕೆ.ಎಸ್. ಭಗವಾನ್

Next Post

ಇಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಸೇವಾವಧಿ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ಇಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಸೇವಾವಧಿ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

ಇಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಸೇವಾವಧಿ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada