ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಕಾರಣ ಕುಟುಂಬಸ್ಥರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಿ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಸ್ಥಳಾಂತರಿಸಲು ಸಿದ್ದತೆಗಳು ಭರದಿಂದ ಸಾಗಿದ್ದು ಏರ್ ಆಂಬುಲೆನ್ಸ್ ಮೂಲಕ ಸ್ಥಳಾಂತರಿಸಲು ತಯಾರಿಗಳು ನಡೆದಿವೆ.
ಒಂದು ವೇಳೆ ದೆಹಲಿಯಲ್ಲು ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದೇ ಇದ್ದಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗುವುದು ಎಂದು ಪುತ್ರ ತೇಜಸ್ವಿ ಯಾದವ್ ತಿಳಿಸಿದ್ದಾರೆ.