![](https://pratidhvani.com/wp-content/uploads/2024/06/World_Suicide_Day.jpg)
ನಾಲ್ವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ 23 ವರ್ಷದ ಸಂತ್ರಸ್ತ ಆತ್ಮಹತ್ಯೆ ಗೆ ಶರಣು. ಗೋರಖ್ಪುರ ಉತ್ತರ ಪ್ರದೇಶದಲ್ಲಿ ನಾಲ್ವರು ಪುರುಷರಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ 23 ವರ್ಷದ ಪುರುಷನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಇವರೆಲ್ಲರೂ ಸಾಮಾಜಿಕ ಮಾಧ್ಯಮದ ಮೂಲಕ ಪರಸ್ಪರ ಸಂಪರ್ಕಕ್ಕೆ ಬಂದಿದ್ದರು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಆರೋಪಿಗಳು ಗುರುವಾರ ಹೋಟೆಲ್ನಲ್ಲಿ ನಡೆಸಿದ ಲೈಂಗಿಕ ಹಲ್ಲೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ ಮತ್ತು ಸಂತ್ರಸ್ತನಿಂದ ಹಣ ಸುಲಿಗೆಗೆ ಒತ್ತಾಯಿಸಿದ್ದಾರೆ, ಇಲ್ಲದಿದ್ದರೆ ವೀಡಿಯೊವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅವರು ಹೇಳಿದರು.
![](https://pratidhvani.com/wp-content/uploads/2024/06/arrest-1024x576.webp)
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿದ ಕೆಲವೇ ಗಂಟೆಗಳ ನಂತರ ಸಂತ್ರಸ್ತ ಶುಕ್ರವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಅವರ ಮೃತದೇಹ ಕುಟುಂಬಸ್ಥರಿಗೆ ನೀಡಲಾಗಿದೆ.
ಪೊಲೀಸರು ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದು, ನಾಲ್ಕನೇ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಚಿಲುತಾಲ್ ನಿವಾಸಿ ಕರಣ್ ಅಲಿಯಾಸ್ ಅಶುತೋಷ್ ಮಿಶ್ರಾ(26), ದೇವೇಶ್ ರಾಜನಂದ್(24), ಚಿಲುವಾಟಾಲ್ ನಿವಾಸಿ ಅಂಗದ್ ಕುಮಾರ್(21) ಎಂಬ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು ಮೋಹನ್ ಪ್ರಜಾಪತಿ, 20, ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನಿಗಾಗಿ ಹುಡುಕಾಟ ನಡೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಪೋಲೀಸರ ಪ್ರಕಾರ, ಆದಿತ್ಯ ಎಂಬ ಸಂತ್ರಸ್ಥನನ್ನು ಚಿಲುವಾಟಾಲ್ ಪ್ರದೇಶದ ಹೋಟೆಲ್ ಕೋಣೆಯಲ್ಲಿ ಒತ್ತೆಯಾಳಾಗಿ ಇರಿಸಲಾಗಿತ್ತು, ಅಲ್ಲಿ ಲೈಂಗಿಕವಾಗಿ ಹಲ್ಲೆ ನಡೆಸಲಾಯಿತು ಮತ್ತು ನಾಲ್ವರು ಬೆಲ್ಟ್ನಿಂದ ಹೊಡೆದು ತೀವ್ರ ಹಲ್ಲೆ ಮಾಡಿದ್ದರು. ಸಂತ್ರಸ್ಥನು ತನ್ನ ಸಹೋದರನೊಂದಿಗೆ ಬಾಡಿಗೆ ಮನೆಯಲ್ಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ಜಿತೇಂದ್ರ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.
ಸಂತ್ರಸ್ತ ಒಂದು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಒಬ್ಬ ಆರೋಪಿ ಕರಣ್ ಜೊತೆ ಮಾತನಾಡಲು ಪ್ರಾರಂಭಿಸಿದ ಎಂದು ಎಸ್ಪಿ ಹೇಳಿದರು. ಕರಣ್ ಸಂತ್ರಸ್ಥನನ್ನು ಚಿಲುತಾಲ್ನಲ್ಲಿರುವ ತನ್ನ ಮನೆಗೆ ಆಹ್ವಾನಿಸಿದ. ಗುರುವಾರ, ಕರಣ್ ಆದಿತ್ಯನನ್ನು ಚಿಲುತಾಲ್ನ ರೈಲ್ ವಿಹಾರ್ನಲ್ಲಿರುವ ಹೋಟೆಲ್ಗೆ ಕರೆದೊಯ್ದರು, ಅಲ್ಲಿ ಕರಣ್ನ ಮೂವರು ಸಹಚರರು ಸೇರಿಕೊಂಡು ಹಲ್ಲೆ ನಡೆಸಿದರು ಎಂದು ಅವರು ಹೇಳಿದರು.
![](https://pratidhvani.com/wp-content/uploads/2024/06/images-7-1.jpeg)
ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ವಿರೋಧಿಸಿದಾಗ ಬೆಲ್ಟ್ನಿಂದ ಹೊಡೆದಿದ್ದಾರೆ ಎಂದು ಶ್ರೀವಾಸ್ತವ ಹೇಳಿದ್ದಾರೆ. ಅವರು ಹಲ್ಲೆಯನ್ನು ರೆಕಾರ್ಡ್ ಮಾಡಿದ್ದಾರೆ, ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದರು ಮತ್ತು ಬದಲಾಗಿ ಹಣಕ್ಕಾಗಿ ಒತ್ತಾಯಿಸಿದರು. ಅವರು ಸಂತ್ರಸ್ತನ ಫೋನ್ನಿಂದ ಯುಪಿಐ ಮೂಲಕ ಹಣವನ್ನು ವರ್ಗಾಯಿಸಿದ್ದಾರೆ ಮತ್ತು ಬಿಯರ್ ಖರೀದಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.
ಸಂತ್ರಸ್ತ ಆರಂಭದಲ್ಲಿ ಶಹಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಪ್ರಯತ್ನಿಸಿದರು, ಆದರೆ ಚಿಲುತಾಲ್ ಮತ್ತು ಶಹಪುರ್ ನಡುವಿನ ವ್ಯಾಪ್ತಿಯ ಸಮಸ್ಯೆಗಳಿಂದಾಗಿ ಎಫ್ಐಆರ್ ಅನ್ನು ತಕ್ಷಣವೇ ದಾಖಲಿಸಲಾಗಿಲ್ಲ ಎಂದು ಶ್ರೀವಾಸ್ತವ ಹೇಳಿದರು. ಶುಕ್ರವಾರ, ಅಂತಿಮವಾಗಿ ಎಫ್ಐಆರ್ ಅನ್ನು ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು), 384 (ಸುಲಿಗೆ), 506 (ಕ್ರಿಮಿನಲ್ ಬೆದರಿಕೆ) ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಎಸ್ಪಿ ಹೇಳಿದರು. ಅಂದು ತಡರಾತ್ರಿ 1 ಗಂಟೆ ಸುಮಾರಿಗೆ ಸಂತ್ರಸ್ತ ತನ್ನ ಸೋದರಳಿಯ ಜೊತೆ ಮಾತನಾಡಿದ್ದಾನೆ. ಎಲ್ಲರೂ ನಿದ್ರೆಗೆ ಜಾರಿದ ಬಳಿಕ ಆತ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ. ಶನಿವಾರ ಬೆಳಗ್ಗೆ ಆತನ ಶವವನ್ನು ಕುಟುಂಬಸ್ಥರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
![](https://pratidhvani.com/wp-content/uploads/2024/06/images-8.jpeg)
ನಾಲ್ವರು ಆರೋಪಿಗಳ ವಿರುದ್ಧ ಗಂಭೀರ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಶ್ರೀವಾಸ್ತವ ತಿಳಿಸಿದ್ದಾರೆ. ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ.