• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

ಪ್ರತಿಧ್ವನಿ by ಪ್ರತಿಧ್ವನಿ
July 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

“500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ಬಣ್ಣಿಸಿದರು.

ADVERTISEMENT

“ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ (DCM DK Shivakumar) ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸೋಮವಾರ ವಿತರಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯತನಕ ಯೋಜನೆಗಳು ಮುಂದುವರೆಯುತ್ತವೆ” ಎಂದರು.

“ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ. ಹಲಾವಾರು ಪಿಂಚಣಿ ಯೋಜನೆಗಳು, ನರೇಗಾ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನಮ್ಮ ಯೋಜನೆಗಳನ್ನು ಬಿಜೆಪಿ ಸೇರಿದಂತೆ ಯಾರೂ ಸಹ ನಿಲ್ಲಿಸಲು ಸಾಧ್ಯವಿಲ್ಲ. ಇವು ಜನರ ಹೃದಯ ಹಾಗೂ ಬದುಕಿಗೆ ಬೇಕಾದಂತಹ ಕಾರ್ಯಕ್ರಮಗಳು. ಇವು ನಿರಂತರವಾಗಿರುತ್ತವೆ” ಎಂದರು.

“ಈ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ಯಾವುದೇ ಖರ್ಚು ಮಾಡದೇ ತಮ್ಮ ಪ್ರೀತಿಪಾತ್ರರ ಮನೆಗಳಿಗೆ ಹೋಗಬಹುದು.‌ ಕೆಲಸಕ್ಕೆ ಹೋಗುವ ಅನೇಕ ಮಹಿಳೆಯರಿಗೆ ಪ್ರತಿ ತಿಂಗಳು 500 ರಿಂದ‌ 1 ಸಾವಿರಕ್ಕೂ ಹೆಚ್ಚು ಹಣ ಉಳಿತಾಯವಾಗುತ್ತಿದೆ” ಎಂದರು.

“ಮಹಿಳೆಯೊಬ್ಬರು ಸಂತೋಷದಿಂದ ನನಗೆ ರೊಟ್ಟಿ, ಶೇಂಗಾ ಹೋಳಿಗೆ ನೀಡಿದರು. ನಮ್ಮ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳು ಕಾಲಕ್ರಮೇಣ ಸತ್ತು ಹೋಗುತ್ತವೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ.‌ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ನಮಗೆ ಹೆಚ್ಚು ಸಂತೋಷವಾಗಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡುರುವ ಶಕ್ತಿಯಿಂದ ನಮಗೆ ಬಲಬಂದಿದೆ” ಎಂದರು.

ಮುಖ್ಯಮಂತ್ರಿಯವರಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು

ಇದಕ್ಕೂ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ, “ರಾಜ್ಯದ ಮುಖ್ಯಮಂತ್ರಿಗಳಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರು ಪತ್ರ ಬರೆದು ತಿಳಿಸಿದ್ದಾರೆ. ಇಂದು ಇಂಡಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೂ ಅತ್ಯಂತ ಪ್ರಮುಖವಾದುದು. 2 ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ನೀರಾವರಿ ಇಲಾಖೆಯಿಂದ ನೀಡಲಾಗುತ್ತಿದೆ” ಎಂದರು.

ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಈ ರಾಜಕಾರಣವನ್ನು ಆನಂತರ ಮಾತನಾಡೋಣ” ಎಂದರು.

Tags: CM Siddaramaiahcongress dk shivakumarDCM DK ShivakumarDK Shivakumardk shivakumar 2025dk shivakumar bengalurudk shivakumar cmdk shivakumar congressdk shivakumar dcmdk shivakumar falldk shivakumar interviewdk shivakumar latest newsdk shivakumar livedk shivakumar memesdk shivakumar newsdk shivakumar next cmdk shivakumar rallydk shivakumar sondk shivakumar speechdk shivakumar supportdk shivakumar today newsdk shivakumar todays newsdk shivakumar updatesdk shivakumar videosIndiShakthi YojanaVijayapura
Previous Post

Dr. Sharan Prakash Patil: ಮಂಗಳವಾರ ಬೆಳಗ್ಗೆ ನೂತನ ತಂತ್ರಜ್ಞಾನದ ಲೋಕಾರ್ಪಣೆ..

Next Post

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada