• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಹೆಸರು ನಾಮಕರಣ ಮಾಡಿ: ನೈಜ ಹೋರಾಟಗಾರರ ವೇದಿಕೆ

ಪ್ರತಿಧ್ವನಿ by ಪ್ರತಿಧ್ವನಿ
July 15, 2021
in ಕರ್ನಾಟಕ, ರಾಜಕೀಯ
0
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಹೆಸರು ನಾಮಕರಣ ಮಾಡಿ: ನೈಜ ಹೋರಾಟಗಾರರ ವೇದಿಕೆ
Share on WhatsAppShare on FacebookShare on Telegram

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅಪ್ಪಟ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಹೆಸರು ನಾಮಕರಣ ಮಾಡುವ ಕುರಿತು ನೈಜ ಹೋರಾಟಗಾರರ ವೇದಿಕೆಯ ಹೆಚ್. ಎಂ. ವೆಂಕಟೇಶ್ ಅವರು ಮುಖ್ಯಮಂತ್ರಿಗಳು ಯಡಿಯೂರಪ್ಪನವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.

ADVERTISEMENT

ಅವರ ಪತ್ರದಲ್ಲಿ, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಜಿ ಶಾಸಕರು ಮತ್ತು ವಿರೋಧ ಪಕ್ಷದ ನಾಯಕರು ಆದ ಸಮಾಜವಾದಿ, ಪ್ರಜಾಪ್ರಭುತ್ವದ ಅಪ್ಪಟ ಜನಪ್ರತಿನಿಧಿಯಾಗಿ ಸಾರ್ವಜನಿಕರ ಸೇವೆಯಲ್ಲಿ ತಮ್ಮನ್ನು ಕೊನೆಯವರೆಗೂ ತೊಡಗಿಸಿಕೊಂಡ ಶಾಂತವೇರಿ ಗೋಪಾಲಗೌಡರ ಬಗ್ಗೆ ಶಿವಮೊಗ್ಗ ಜಿಲ್ಲೆಯನ್ನು ಈವರೆವಿಗೂ  ಪ್ರತಿನಿಧಿಸಿದ ಹಲವಾರು ರಾಜಕಾರಣಿಗಳಿಗೆ ತಮ್ಮನ್ನು ಸೇರಿಸಿದಂತೆ ಗೋಪಾಲಗೌಡರ ನೆನಪು ಇರಬಹುದು ಎಂದು ನಾನು ಭಾವಿಸಿದ್ದೇನೆ.

ಸಾರ್ವತ್ರಿಕಚುನಾವಣೆಯ ಸಂದರ್ಭದಲ್ಲಿ ಶಾಂತವೇರಿ ಗೋಪಾಲಗೌಡರ ಹೆಸರನ್ನು ಚುನಾವಣಾ ಪ್ರಚಾರದಲ್ಲಿ  ಬಳಸಿಕೊಳ್ಳದ ಯಾವರಾಜಕಾರಣಿಯೂ ಶಿವಮೊಗ್ಗ ಜಿಲ್ಲೆಯಲ್ಲಿ ಇರಲು ಸಾಧ್ಯವೇ ಇಲ್ಲ. ಅವರ ಹುಟ್ಟೂರಾದ ಶಾಂತವೇರಿ ಎಂಬ ಪುಟ್ಟ ಹಳ್ಳಿಯಲ್ಲಿ ಈವರೆಗೂ ಮೂಲಭೂತ ಸೌಕರ್ಯಗಳಿಲ್ಲದೆ  ಸೊರಗುತ್ತಿರುವ ಹಳ್ಳಿಯಲ್ಲಿ ಕೆಲವೇ ಕೂಗಳತೆಯ ದೂರದಲ್ಲಿರುವ ಆರಗದಲ್ಲಿ ಶಾಂತವೇರಿ ಗೋಪಾಲಗೌಡ ಸಮುದಾಯಭವನ ಸರ್ಕಾರದ ಕೃಪಾಕಟಾಕ್ಷದಿಂದ ಅಸ್ತಿಪಂಜರವಾಗಿ ನಿರ್ಮಾಣಗೊಂಡಿದ್ದು, ಸದರಿ ಕಾಮಗಾರಿಯನ್ನು ಈವರೆಗೂ ಸರ್ಕಾರ ಪೂರ್ಣಗೊಳಿಸದೆ ಇರುವುದು ದುರದೃಷ್ಟಕರ ವಿಷಯವಾಗಿದೆ.

ಶಾಂತವೇರಿ ಗೋಪಾಲಗೌಡರ ಹುಟ್ಟೂರಿನಲ್ಲಿ ಅವರ ವಿಚಾರಧಾರೆಗಳು  ಅಧ್ಯಯನ ಪೀಠವೊಂದು ಈಗಾಗಲೇ ನಿರ್ಮಾಣವಾಗ ಬೇಕಾಗಿತ್ತು ಹಾಗೂ ಆ ಹಳ್ಳಿಯನ್ನು ರಾಜ್ಯದಲ್ಲಿಯೇ ಒಂದು ಮಾದರಿಯ ಹಳ್ಳಿಯಾಗಿ  ಅಭಿವೃದ್ಧಿಪಡಿಸುವಲ್ಲಿ ಈವರೆಗೆ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮತ್ತು ಅಲ್ಲಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಆದರೆ ಅದೇ ತೀರ್ಥಹಳ್ಳಿ ತಾಲೂಕಿನಲ್ಲಿ ವಿವಿಧ ಜಾತಿ, ಸಮುದಾಯ, ಮಠ-ಮಾನ್ಯಗಳಿಗೆ ತಾವು ಸೇರಿದಂತೆ ಜನಪ್ರತಿನಿಧಿಗಳು ಸೇರಿ ಲಕ್ಷ, ಲಕ್ಷ ಕೋಟಿ, ಕೋಟಿ ರೂಪಾಯಿಗಳ ಅನುದಾನವನ್ನು ಅಭಿವೃದ್ಧಿಗೆ ವಿತರಣೆ ಮಾಡಿರುವುದು ನಾವು ಗಮನಿಸಿದ್ದರೆ ಶಾಂತವೇರಿ ಗೋಪಾಲಗೌಡರಿಗೆ ಸರ್ಕಾರ ಮಾಡಿರುವ ತಾರತಮ್ಯ ಮತ್ತು ಅನ್ಯಾಯವೆಂದು ನಾವು ಪರಿಗಣಿಸಬೇಕಾಗುತ್ತದೆ.

ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ಶಾಂತವೇರಿ ಗೋಪಾಲಗೌಡರು ರಾಜ್ಯಕ್ಕೆ ನೀಡಿದ ಸೇವೆಯನ್ನು ಸ್ಮರಿಸುವ ಒಂದು ಸುವರ್ಣಾವಕಾಶ ಈಗ ಸರ್ಕಾರದ ಮುಂದಿದೆ. ಅದೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಾಂತವೇರಿ ಗೋಪಾಲಗೌಡರ ಹೆಸರು ಇಡುವುದು.

 ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಬ್ಬ ಜನಪ್ರತಿನಿಧಿ ಯಾವ ರೀತಿ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು. ಜನಸಾಮಾನ್ಯರ ಬದುಕಿನ ಜೊತೆ ಯಾವರೀತಿ ಒಡನಾಟ ಮಾಡಬೇಕು ಮತ್ತು ಭ್ರಷ್ಟಾಚಾರರಹಿತ ಪ್ರಾಮಾಣಿಕವಾದ ಕೆಲಸಕಾರ್ಯಗಳಲ್ಲಿ ಸತ್ಯ,ನಿಷ್ಠೆಯಿಂದಹೇಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ತಮ್ಮ ಜೀವಿತಾವಧಿಯಲ್ಲಿ ರಾಜಕಾರಣಿಗಳಿಗೆ ಮತ್ತು ರಾಜಕೀಯ ರಂಗ ಪ್ರವೇಶ ಮಾಡುವವರಿಗೆ  ಹೇಳಿಕೊಟ್ಟ  ಅಭೂತಪೂರ್ವ ವ್ಯಕ್ತಿತ್ವವುಳ್ಳ ಸಮಾಜವಾದಿ ರಾಜಕಾರಣಿ ಶಾಂತವೇರಿ ಗೋಪಾಲಗೌಡರು

ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರಿಂದ ಯಾವ ರೀತಿ ನಾವು ಮತವನ್ನು ಅಪೇಕ್ಷಿಸ  ಬೇಕು,  ಒಂದು ಓಟು ಒಂದು ನೋಟು ಎಂಬ ಘೋಷವಾಕ್ಯದೊಂದಿಗೆ  ನಾವು ಹೇಗೆ ಚುನಾವಣೆಯನ್ನು ನಡೆಸಬೇಕು ಎಂಬ ಪಾಠವನ್ನು ಕಲಿಸಿ ಕೊಟ್ಟು ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡರು.

ಉಳುವವನೇ ಹೊಲದೊಡೆಯ ರೈತರ ಪರವಾದ ಹೋರಾಟದಲ್ಲಿ ಗೇಣಿ ರೈತರಿಗೆ ಆಶಾಕಿರಣವಾಗಿ ಹೊರಹೊಮ್ಮಿದ ಧೀಮಂತ ರಾಜಕಾರಣಿ ಶಾಂತವೇರಿ ಗೋಪಾಲಗೌಡ ಇವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣ ಕ್ಕೆ ಇಡುವ ಮೂಲಕ ಶಿವಮೊಗ್ಗ ಜಿಲ್ಲೆ ಸಮಾಜವಾದದ ಹುಟ್ಟೂರು ಎಂಬುದನ್ನು ಶಾಶ್ವತವಾಗಿ ನೆಲೆಯೂರುವಂತೆ ಮಾಡಬೇಕಾಗಿದೆ.

ಈ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ತಾವುಗಳು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಾಂತವೇರಿ ಗೋಪಾಲಗೌಡರ ಹೆಸರ ನ್ನು ಇಡುವ ಮೂಲಕ ರಾಜ್ಯದ ಜನತೆಗೆ ಶಾಂತವೇರಿ ಗೋಪಾಲಗೌಡರ ತತ್ವ, ಆದರ್ಶ ಜೀವನ ನಿರ್ವಹಣೆ, ಸಮಾಜವಾದ ರಾಜಕಾರಣ, ಸತ್ಯ, ನಿಷ್ಠೆ  ಮತ್ತು ಪ್ರಾಮಾಣಿಕತೆಯ ದ್ಯೋತಕವಾಗಿ ಶಿವಮೊಗ್ಗ ಜಿಲ್ಲೆಯನ್ನು ಗುರುತಿಸುವಂತಾಗಬೇಕು.

ದಯಮಾಡಿ ಈ ಪತ್ರ ತಲುಪಿದ ತಕ್ಷಣ ಕಾರ್ಯಪ್ರವೃತ್ತರಾಗಿ ಶಾಂತವೇರಿ ಗೋಪಾಲಗೌಡರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಆದೇಶವನ್ನು ಸರಕಾರ ಹೊರಡಿಸಬೇಕೆಂದು ಈ ಮೂಲಕ ವಿನಂತಿಸುತ್ತೇವೆ ಎಂದಿದ್ದಾರೆ.

ಈಗಾಗಲೇ ವಿಮಾನ ನಿಲ್ದಾಣಕ್ಕೆ ಇದೇ ಹೆಸರು ಇಡಿ ಎಂದು ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದು, ಕೆಲವರು ರಾಷ್ಟ್ರ ಕವಿ ಕುವೆಂಪು ಹೆಸರು ಸೂಚಿಸಿದರೆ, ಇನ್ನೂ ಕೆಲವರು ತುಮಕೂರು ಮಠದ ಶಿವಕುಮಾರ ಸ್ವಾಮಿಗಳ ಹೆಸರು ಸೂಚಿಸೊದ್ದಾರೆ. ಈಗ ಶಾಂತವೇರಿ ಗೋಪಾಲಗೌಡರ ಹೆಸರು ಕೇಳಿ ಬರುತ್ತಿದೆ.

ಶಾಂತವೇರಿ ಗೋಪಾಲಗೌಡರ ಕುರಿತು ಚಿಕ್ಕ ವಿವರ:

ಕರ್ನಾಟಕದ ಪ್ರಪ್ರಥಮ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರು, ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರಲ್ಲಿ ಒಬ್ಬರು.

1951 ರಲ್ಲಿ ಜಮೀನ್ದಾರಿ ಪದ್ಧತಿಯ ವಿರುದ್ಧ ನಡೆದ ಕಾಗೋಡು ಸತ್ಯಾಗ್ರಹದಲ್ಲಿ ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸಿದ್ದ ಗೌಡರು ಅಂದು ರಾಮಮನೋಹರ ಲೋಹಿಯಾ ಹಾಗೂ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರನ್ನು ಕರ್ನಾಟಕಕ್ಕೆ ಕರೆಸಿ ಪ್ರತಿಭಟನೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದರಲ್ಲದೇ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಅಂದು ಮೈಸೂರಿನ ರಾಜರ ವಿರುದ್ಧ ಸಿಡಿದೆದ್ದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದ್ದರು.

ಆದರೆ ದುರದೃಷ್ಟವಶಾತ್ ಲೋಹಿಯಾ ರಂತೆ ಗೋಪಾಲಗೌಡರೂ ಸಹಾ ಅಕಾಲಿಕ ಮರಣಕ್ಕೆ ತುತ್ತಾಗಿ ತಮ್ಮ 49 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು.

ಶಾಂತವೇರಿ ಗೋಪಾಲಗೌಡರ ಕುರಿತು ಕುವೆಂಪು ಅವರ ಮಾತು:

 ನನ್ನ ದೃಷ್ಟಿಯಲ್ಲಿ ಅವರೊಬ್ಬರು ರಾಜಕೀಯ ಜೀವನದಲ್ಲಿ ಶ್ರದ್ಧಾ ಪೂರ್ಣ ತತ್ವನಿಷ್ಠ ಹೋರಾಟಗಾರರು . ಅವರೆಂದೂ ತಾವು ನಂಬಿದ ಧ್ಯೇಯ ಧೋರಣೆಗಳಿಂದ ವಿಮುಖರಾಗಲಿಲ್ಲ , ಆಸೆ- ಆಮಿಷಗಳಿಗೆ ಬಲಿಯಾಗಲಿಲ್ಲ. ಅವರೊಬ್ಬರು ಹುತಾತ್ಮರೆಂದರೂ ತಪ್ಪಾಗಲಾರದು. ರಾಜಕೀಯಕ್ಕಾಗಿ ಅವರು ತಮ್ಮ ಲೌಕಿಕವಾದವುಗಳನ್ನೆಲ್ಲ ಯಜ್ಞಮಾಡಿದ್ದಾರೆ.. ಅವರ ಸತ್ಯನಿಷ್ಠುರತೆ ಮತ್ತು ಪ್ರಾಮಾಣಿಕತೆಯನ್ನಾದರೂ ನಮ್ಮ ತರುಣರು ಅನುಸರಿಸಿ ನಡೆದರೆ ಈ ನಾಡಿನ ರಾಜಕೀಯ ಕ್ಷೇತ್ರ ಹೆಚ್ಚು ಪರಿಶುದ್ಧವಾದೀತು.

Tags: Karnataka Governmentshanthaveri gopal gowdashivamogga airport
Previous Post

ಗಾಲ್ವಾನ್‌ ಸಂಘರ್ಷದ ಬಳಿಕವೂ ಭಾರತ-ಚೀನಾ ವ್ಯಾಪಾರದಲ್ಲಿ 62.7% ಹೆಚ್ಚಳ

Next Post

ಮೇಕೆದಾಟು ವಿವಾದ: ಪತ್ರ ಬರೆದು ಯಡವಟ್ಟು ಮಾಡಿಕೊಂಡರೆ ಯಡಿಯೂರಪ್ಪ?

Related Posts

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
0

ದೆಹಲಿಯಲ್ಲಿ (Delhi) ತಂಗಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (Dk Shivakumar) ಹೈಕಮಾಂಡ್‌ ಇಂದು ಕಾಂಗ್ರೆಸ್ ಹೈಕಮ್ಯಾಂಡ್ (Congress highcommand) ನಾಯಕರ...

Read moreDetails
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

July 10, 2025

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
Next Post
ಭ್ರಷ್ಟಾಚಾರ ದೂರು ವಜಾಗೊಳಿಸಿದ ಕೋರ್ಟ್: ಸಿಎಂಗೆ ನಿರಾಳ

ಮೇಕೆದಾಟು ವಿವಾದ: ಪತ್ರ ಬರೆದು ಯಡವಟ್ಟು ಮಾಡಿಕೊಂಡರೆ ಯಡಿಯೂರಪ್ಪ?

Please login to join discussion

Recent News

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada