ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸೇರಿದಂತೆ 7 ಜನ ಹಿರಿಯ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಶಿಖಾ ಅವರನ್ನು ವಾಣಿಜ್ಯ ತೆರಿಗೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಐಎಎಸ್ ಅಧಿಕಾರಿ ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಸಲ್ಮಾ ಫಾಹಿಮಾ ಅವರನ್ನು ಮೂಲ ಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯನ್ನಾಗಿ, ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೋರೇಷನ್(KSIC) ನ ಮ್ಯಾನೆಜಿಂಗ್ ಡೈರೆಕ್ಟರ್ ಕನಗವಲ್ಲಿ ಎಂ ಅವರನ್ನು ಕರ್ನಾಟಕ ಲೋಕಸೋವಾ ಆಯೋಗ (KPSC) ದ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾಯಿಸಲಾಗಿದೆ.

ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿಯಾಗಿದ್ದ ರಘುನಂದನ್ ಮೂರ್ತಿ ಅವರನ್ನು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ, ಅರ್ಚನಾ ಎಂ.ಎಸ್. ಅವರನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿಯ(KET) ಸದಸ್ಯರನ್ನಾಗಿ ವರ್ಗಾವಣೆ ಮಾಡಲಾಗಿದೆ.