• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DCM DK Shivakumar: ಕನಕಪುರ, ವರುಣಾಗಿಂತ ಹೆಚ್ಚು ಕೆಲಸವನ್ನು ಶಿವಲಿಂಗೇಗೌಡರು ಅರಸೀಕರೆಯಲ್ಲಿ ಮಾಡಿಸುತ್ತಿದ್ದಾರೆ:

ಪ್ರತಿಧ್ವನಿ by ಪ್ರತಿಧ್ವನಿ
July 26, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಡಬಲ್ ಇಂಜಿನ್ ಆಡಳಿತ ಮಾಡಿದ ಬಿಜೆಪಿ ಕೊಡುಗೆ ಏನು? ನಿಮ್ಮ ನಂಬಿಕೆ ಉಳಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ

ADVERTISEMENT

“ಜನರ ಋಣ ತೀರಿಸಬೇಕು ಎಂಬ ಕಾರಣಕ್ಕೆ ಶಾಸಕ ಶಿವಲಿಂಗೇಗೌಡರು ಸಿಎಂ ಹಾಗೂ ನನ್ನ ಬೆನ್ನು ಬಿದ್ದು, ಕನಕಪುರ ಹಾಗೂ ವರುಣಾ ಕ್ಷೇತ್ರಗಳಿಗಿಂತ ಹೆಚ್ಚು ಕೆಲಸವನ್ನು ಅರಸೀಕೆರೆಯಲ್ಲಿ ಮಾಡಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಸೀಕೆರೆಯಲ್ಲಿ ನಡೆದ ವಿವಿಧ ಇಲಾಖೆಗಳ ಯೋಜನೆಗಳ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಇಂದು ಅರಸೀಕೆರೆ ತಾಲೂಕಿಗೆ ಐತಿಹಾಸಿಕ ದಿನ. ನಾವು ಹಾಗೂ ಮುಖ್ಯಮಂತ್ರಿಗಳು ಈ ಕ್ಷೇತ್ರಕ್ಕೆ ಸುಮ್ಮನೆ ಬಂದಿಲ್ಲ. ರಾಜ್ಯದಲ್ಲಿ 136 ಶಾಸಕರ ಬಲದ ಸರ್ಕಾರ ರಚಿಸಲು ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲು ಸಹಕಾರಿಯಾದ ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇವೆ. ನಮಗೆ ಶಿವಲಿಂಗೇಗೌಡರ ಕಾಟ ಹೆಚ್ಚಾಗಿದೆ. ಅವರು ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮನೆ ಸುತ್ತಲು ನಾಲ್ಕು ಜೊತೆ ಚಪ್ಪಲಿ ಸವೆಸಿರಬಹುದು. ಅವರು ಪ್ರತಿ ಬಾರಿ ಬಂದಾಗಲೂ ನಾನು ಕ್ಷೇತ್ರದ ಜನರ ಋಣ ತೀರಿಸಬೇಕು. ಈ ಯೋಜನೆಗಳಿಗಾಗಿ ನಾನು ದಳ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ನೀವು ನೆರವು ನೀಡಲೇಬೇಕು ಎಂದು ನಮ್ಮ ಬೆನ್ನು ಬಿದ್ದಿದ್ದಾರೆ” ಎಂದು ತಿಳಿಸಿದರು.

“ಕನಕಪುರ ಹಾಗೂ ವರುಣಾ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು ಅರಸೀಕೆರೆ ಕ್ಷೇತ್ರದಲ್ಲಿ ಶಿವಲಿಂಗೇಗೌಡರು ಮಾಡಿಸಿದ್ದಾರೆ. ನಮ್ಮ ತಾಲೂಕಿನಲ್ಲಿ ಡಿಪ್ಲಮೋ, ಇಂಜಿನಿಯರಿಂಗ್ ಕಾಲೇಜು ಇಲ್ಲ. ನಮ್ಮ ಊರಿಗೆ ನೀರಿಲ್ಲ. ಆದರೆ ಹೇಮಾವತಿ, ಎತ್ತಿನಹೊಳೆ ನೀರು ನಮಗೆ ಬೇಕು ಎಂದು ಹೋರಾಟ ಮಾಡಿ ಸಚಿವಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಇಂದು ನಿಮ್ಮ ಮುಂದೆ ಕಾಮಗಾರಿಗೆ ಚಾಲನೆ ನೀಡುತ್ತಿದ್ದಾರೆ” ಎಂದು ಶ್ಲಾಘಿಸಿದರು.

“ನಾವು ನಮ್ಮ ಜೀವನದಲ್ಲಿ ನಾಲ್ಕು ಋಣಗಳನ್ನು ತೀರಿಸಬೇಕು ತಂದೆತಾಯಿ ಋಣ, ದೇವರ ಋಣ, ಗುರುವಿನ ಋಣ, ಸಮಾಜದ ಋಣ ತೀರಿಸಬೇಕು. ಈ ಋಣಗಳನ್ನು ಧರ್ಮದಿಂದಲೇ ತೀರಿಸಬೇಕು ಎಂದು ಮಹಾಭಾರತದಲ್ಲಿ ಭೀಷ್ಮನು ಧರ್ಮರಾಯನಿಗೆ ಹೇಳುತ್ತಾನೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಆರ್ಟಿಕಲ್ 371ಜೆ ಜಾರಿಗೆ ತಂದು ಹೇಗೆ ಮಲ್ಲಿಕಾರ್ಜುನ ಖರ್ಗೆ ಅವರು ಆ ಭಾಗದ ಜನರ ಋಣ ತೀರಿಸಿದರೋ ಅದೇ ರೀತಿ ಶಿವಲಿಂಗೇಗೌಡರು ನಿಮ್ಮೆಲ್ಲರ ಋಣ ತೀರಿಸಿದ್ದಾರೆ. ರಾಜ್ಯದಲ್ಲಿ ಮಲತಾಯಿ ಧೋರಣೆಗೆ ಒಳಗಾಗಿದ್ದ ಅರಸೀಕೆರೆ ಕ್ಷೇತ್ರಕ್ಕೆ ನ್ಯಾಯ ಒದಗಿಸುತ್ತಿದ್ದಾರೆ. ಇಂತಹ ಶಾಸಕರು ನಮ್ಮ ಎಲ್ಲಾ ಕ್ಷೇತ್ರಗಳಲ್ಲಿ ಇದ್ದರೆ ಮುಂದಿನ ಚುನಾವಣೆಯಲ್ಲಿ ನಾವು ಮತ್ತಷ್ಟು ಹೆಚ್ಚಿನ ಸೀಟುಗಳನ್ನು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಯೋಗಿ ಎಂದು ಕರೆಸಿಕೊಳ್ಳುವ ಮುನ್ನ ನಾವು ಉಪಯೋಗಿ ಎಂದು ಕರೆಸಿಕೊಳ್ಳಬೇಕು. ಜನರ ಪ್ರೀತಿ ವಿಶ್ವಾಸ ಮರದಲ್ಲಿ, ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ನಾವು ಕೆಲಸ ಮಾಡುವ ಮೂಲಕ ಜನರ ಮನದಲ್ಲಿ ಪ್ರೀತಿ ವಿಶ್ವಾಸ ಗಳಿಸಬೇಕು. ಇಲ್ಲಿನ ಕೆರೆಗಳು ತುಂಬಬೇಕು, ನೀರಾವರಿ ಯೋಜನೆಗಳು ಜಾರಿಯಾಗಿ ರೈತನ ಬದುಕು ಹಸನ ಮಾಡಬೇಕು. ರೈತರಿಗೆ ಸಂಬಳ, ವೇತನ, ಪಿಂಚಣಿ, ಲಂಚ ಯಾವುದೂ ಇಲ್ಲ. ಹೀಗಾಗಿ ರೈತರಿಗೆ ಸಹಾಯ ಮಾಡಲೇಬೇಕು ಎಂದು ಶಿವಲಿಂಗೇಗೌಡರು ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಒತ್ತಡ ಹಾಕಿ ಈ ಎಲ್ಲಾ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿಸಿದ್ದಾರೆ” ಎಂದರು.

ನಿಮ್ಮ ನಂಬಿಕೆ ಉಳಿಸಿಕೊಂಡು ಮುಂದೆ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ:

ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಅದೇ ರೀತಿ ನಿಮಗೂ ನಿಮ್ಮ ಶಾಸಕರ ಮೇಲೆ ನಂಬಿಕೆ ಇದೆ. ಚುನಾವಣೆಯಲ್ಲಿ ನೀವು ಅದನ್ನು ಸಾಬೀತುಪಡಿಸಿ ರಾಜ್ಯಕ್ಕೆ ದೊಡ್ಡ ಸಂದೇಶ ರವಾನಿಸಿದ್ದೀರಿ. ಈ ಬಾರಿ ಜಿಲ್ಲೆಯಲ್ಲಿ ಅವರೊಬ್ಬರು ಮಾತ್ರ ಗೆದ್ದಿರಬಹುದು. ಮುಂದೆ 2028ರಲ್ಲಿ ಈ ಜಿಲ್ಲೆಯ 7ಕ್ಕೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ಆತ್ಮವಿಶ್ವಾಸ ನನಗಿದೆ. ನಾವು ಮಾತು ಕೊಡುವುದು ಮುಖ್ಯವಲ್ಲ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಮುಖ್ಯ. ಅದೇರೀತಿ ಶಿವಲಿಂಗೇಗೌಡರು ನಿಮಗೆ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ” ಎಂದರು.

“ದೇವರು ನಮಗೆ ಎರಡು ಆಯ್ಕೆ ಕೊಡುತ್ತಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದಿಲ್ಲಿ. ಭೂಮಿಯ ಮೇಲೆ ಯಾರೂ ಶಾಶ್ವತವಲ್ಲ. ಆದರೆ ನಾವು ಮಾಡುವ ಕೆಲಸ ಬಹಳ ಮುಖ್ಯ. ನಿಮ್ಮ ಜಮೀನಿಗೆ ನೀರು ಕೊಟ್ಟು, ಬದುಕು, ಕುಟುಂಬ ಪರಿವರ್ತನೆ ತರಬೇಕು ಎಂದು ನಿಮ್ಮ ಶಾಸಕರು ಪಣ ತೊಟ್ಟಿದ್ದಾರೆ. ಉಳಿ ಪೆಟ್ಟು ಬೀಳದೇ ಕಲ್ಲು ಶಿಲೆಯಾಗುವುದಿಲ್ಲ, ಉಳುಮೆ ಮಾಡದೇ ಹೊಲ ಮಟ್ಟವಾಗುವುದಿಲ್ಲ. ಅದೇ ರೀತಿ ಶಿವಲಿಂಗೇಗೌಡರು ಕೆಲಸ ಮಾಡಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದಾರೆ. ನಾನು ಚುನಾವಣೆಗೆ ಬಂದಾಗ ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಅದೇ ರೀತಿ ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದ ಕಾರಣಕ್ಕೆ ದೇಶಕ್ಕೆ ಮಾದರಿಯಾಗುವ ಐದು ಗ್ಯಾರಂಟಿ ಯೋಜನೆ ನೀಡಿದ್ದೇವೆ” ಎಂದರು.

ಡಬಲ್ ಇಂಜಿನ್ ಆಡಳಿತ ಮಾಡಿದ ಬಿಜೆಪಿ ಕೊಡುಗೆ ಏನು?

“ಬೆಲೆ ಏರಿಕೆಯಿಂದ ತತ್ತರಿಸಿದ್ದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ನೆರವಾಗಲು ನಾನು, ಸಿಎಂ ಸಿದ್ದರಾಮಯ್ಯ ಹಾಗೂ ಪಕ್ಷದ ಮುಖಂಡರು ಚರ್ಚೆ ಮಾಡಿ ಈ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆವು. ಬಿಜೆಪಿ ಭಾವನೆ ಮೇಲೆ ರಾಜಕಾರಣ ಮಾಡಿದರೆ, ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಧರ್ಮ, ದೇವರು ಕೇವಲ ಬಿಜೆಪಿ ಆಸ್ತಿಯಲ್ಲ. ನಾವು ಎಲ್ಲಾ ಧರ್ಮ ಕಾಪಾಡಲು ಶ್ರಮಿಸುತ್ತೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಕೇವಲ ಕಾಂಗ್ರೆಸ್ ಅಥವಾ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಎಲ್ಲರಿಗೂ ಈ ಯೋಜನೆ ನೀಡಿದ್ದೇವೆ. ನಿಮ್ಮ ಮನೆಗಳಲ್ಲಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್, 2 ಸಾವಿರ ಪ್ರೋತ್ಸಾಹ ಧನ, ಉಚಿತ ಅಕ್ಕಿ, ಉಚಿತ ಬಸ್ ಪ್ರಯಾಣ, ನಿರುದ್ಯೋಗ ಭತ್ಯೆ ನೀಡುತ್ತಿದ್ದೇವೆ. ಇಂತಹ ಒಂದೇ ಒಂದು ಕೆಲಸವನ್ನು ನಿಮ್ಮ ಅವಧಿಯಲ್ಲಿ ಮಾಡಿದ್ದೀರಾ ಎಂದು ಬಿಜೆಪಿ ನಾಯಕರನ್ನು ಕೇಳಲು ಬಯಸುತ್ತೇನೆ. ಈ ವಿಚಾರದಲ್ಲಿ ದಳದವರನ್ನು ನಾನು ಕೇಳಲು ಹೋಗುವುದಿಲ್ಲ” ಎಂದರು.

“ಅಲ್ಲಮ ಪ್ರಭುಗಳ ಮಾತಿನಂತೆ ಕೊಟ್ಟ ಕುದುರೆ ಏರಲರಿಯದೆ, ಮತ್ತೊಂದು ಕುದುರೆ ಏರಲು ಬಯಸುವವನು ವೀರನೂ ಅಲ್ಲ, ಶೂರನೂ ಅಲ್ಲ. ಅದೇರೀತಿ ಅಧಿಕಾರ ಸಿಕ್ಕಾಗ ಇಂತಹ ಯೋಜನೆ ಜಾರಿ ಮಾಡಲಿಲ್ಲ. ನಿಮಗೆ ಡಬಲ್ ಇಂಜಿನ್ ಸರ್ಕಾರದ ಅಧಿಕಾರ ಸಿಕ್ಕಿತ್ತು. ಆಗ ಏನು ಮಾಡಿದ್ದೀರಿ? ಈಗ ಬಿಜೆಪಿ ಜೊತೆ ದಳದವರೂ ಸೇರಿಕೊಂಡಿದ್ದಾರೆ. ಇವರಿಬ್ಬರು ಮಾತ್ರವಲ್ಲ, ಇವರ ಜೊತೆಗೆ ಇನ್ನೂ ನಾಲ್ಕು ಜನ ಸೇರಿಕೊಳ್ಳಲಿ, 2028ರಲ್ಲಿ ಈ ಜನಪರ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಕಳೆದ ವರ್ಷ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಸುಪುತ್ರ, ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಅವರ ಪುತ್ರ ಗೆಲ್ಲಲು ಯಾಕೆ ಆಗಲಿಲ್ಲ? ಡಬಲ್ ಇಂಜಿನ್ ಸರ್ಕಾರ ಆಡಳಿತ ಮಾಡಿದವರು ಯಾಕೆ ಗೆಲ್ಲಲಿಲ್ಲ? ಈ ಗೆಲುವಿನಿಂದ ನಮ್ಮ ಸಂಖ್ಯಾಬಲ 140 ಆಗಿದೆ” ಎಂದು ತಿಳಿಸಿದರು.

“ದೇವರು ವರ ಹಾಗೂ ಶಾಪ ಕೊಡುವುದಿಲ್ಲ. ಕೇವಲ ಅಕಾಶ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಹೇಮಾವತಿ, ಎತ್ತಿನಹೊಳೆಯಿಂದ ಎಲ್ಲಾ ಕೆರೆಗಳನ್ನು ತುಂಬಿಸುವ ಕೆಲಸಗಳನ್ನು ಮಾಡಿದ್ದೇವೆ. ನಿಮ್ಮ ಬದುಕಿನಲ್ಲಿ ಬದಲಾವಣೆ ತರಬೇಕು ಎಂದು ಸಂಸತ್ ಸದಸ್ಯರು ಹಾಗೂ ಶಾಸಕರು ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

Previous Post

Priyanka Kharge: ಬಾಪೂಜಿ ಸೇವಾ ಕೇಂದ್ರಗಳಲ್ಲಿ ಶೀಘ್ರದಲ್ಲೇ ಇನ್ನೂ 208 ಸೇವೆಗಳು ಲಭ್ಯ..!!

Next Post

DK Shivakumar: ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ಮಾಡಿಲ್ಲ, ಎಲ್ಲವೂ ಸುಳ್ಳು: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

DK Shivakumar: ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ಮಾಡಿಲ್ಲ, ಎಲ್ಲವೂ ಸುಳ್ಳು: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada