• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ “ಶಿವಮ್ಮ” ಚಿತ್ರ ಜೂನ್ 14 ರಂದು ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in ಸಿನಿಮಾ
0
ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ “ಶಿವಮ್ಮ” ಚಿತ್ರ ಜೂನ್ 14 ರಂದು ಬಿಡುಗಡೆ
Share on WhatsAppShare on FacebookShare on Telegram

ಇದು ರಿಷಭ್ ಶೆಟ್ಟಿ ನಿರ್ಮಾಣದ ಚಿತ್ರ

ADVERTISEMENT

ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ “ಶಿವಮ್ಮ”. ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. “ಶಿವಮ್ಮ” ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಭ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು.

ನಾನು ವಿಜಯ ಕರ್ನಾಟಕ ಪತ್ರಿಕೆ ನಡೆಸುವ ಕಿರು ಚಿತ್ರೋತ್ಸವಕ್ಕೆ ಹೋದಾಗ ನಿರ್ದೇಶಕ ಜೈಶಂಕರ್ ಆರ್ಯರ್ ಅವರ ಪರಿಚಯವಾಯಿತು. ಆನಂತರ ನಮ್ಮ “ಕಥಾ ಸಂಗಮ” ಚಿತ್ರದ ನಿರ್ದೇಶಕರಲ್ಲಿ ಅವರು ಒಬ್ಬರಾದರು‌‌‌. ಆನಂತರ ಜೈಶಂಕರ್ ಅವರು “ಶಿವಮ್ಮ” ಚಿತ್ರದ ಕಥೆ ಕುರಿತಾಗಿ ಹೇಳಿದರು. ಕಥೆ ಇಷ್ಟವಾಯಿತು. ನಿರ್ಮಾಣ ಆರಂಭಿಸಿದ್ದೆವು. ಕೋವಿಡ್ ಗೂ ಮುನ್ನ ಆರಂಭವಾದ ಚಿತ್ರವಿದು. ಉತ್ತರ ಕರ್ನಾಟಕದ ಯರೇಹಂಚಿನಾಳ ನಿರ್ದೇಶಕರ ಊರು. ಈ ಚಿತ್ರದಲ್ಲಿ ನಟಿಸಿರುವ “ಶಿವಮ್ಮ” ಪಾತ್ರಧಾರಿ ಶರಣಮ್ಮ ಚಟ್ಟಿ ಅವರ ಊರು ಕೂಡ ಅದೆ. ಆ ಊರಿನ ಪ್ರತಿಭೆಗಳನ್ನು ಬಳಸಿಕೊಂಡು ನಿರ್ದೇಶಕರು ಈ ಸಿನಿಮಾ ಮಾಡಿದ್ದಾರೆ‌. ಈವರೆಗೂ ಹದಿನೇಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ “ಶಿವಮ್ಮ” ಪ್ರದರ್ಶನವಾಗಿ ಪ್ರಶಂಸೆ ಪಡೆದುಕೊಂಡಿದೆ. ಜನರಿಗೂ ಈ ಚಿತ್ರ ಇಷ್ಟವಾಗಲಿದೆ. ಏಕೆಂದರೆ ನಾನು ಈ ಚಿತ್ರ ನೋಡಿದ್ದೇನೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾಗೆ ಸಿಕ್ಕ ಮೆಚ್ಚುಗೆ ನೋಡಿ ಖುಷಿಯಾಯಿತು. ಈಗ ಈ ಚಿತ್ರವನ್ನು ಜನರ ಮುಂದೆ ತರುತ್ತಿದ್ದೇನೆ. ಇದೇ ಜೂನ್ 14 ಚಿತ್ರ ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ. ಬೆಂಗಳೂರಿನಲ್ಲಿ ಮಲ್ಟಿಪ್ಲೆಕ್ಸ್ ಗಳಲ್ಲಿ ಬಿಡುಗಡೆಯಾದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ‌. “ಶಿವಮ್ಮ” ಎಂಬ ಹೊಸ ನಾಯಕಿಯನ್ನು ಈ ಚಿತ್ರದ ಮೂಲಕ ಪರಿಚಯ ಮಾಡುತ್ತಿದ್ದೇವೆ.‌ ನಿಮ್ಮೆಲ್ಲರ ಪ್ರೋತ್ಸಾಹ ನಮ್ಮ ಚಿತ್ರಕ್ಕಿರಲಿ ಎಂದರು ನಿರ್ಮಾಪಕ ರಿಷಭ್ ಶೆಟ್ಟಿ.

ನಾನು ಮೂಲತಃ ಐಟಿ ಉದ್ಯೋಗಿ. ಬೆಳೆದಿದ್ದು ಬೆಂಗಳೂರಿನಲ್ಲೇ. ಆದರೆ ಯರೇಹಂಚಿನಾಳ ನನ್ನ ತಂದೆಯ ಊರು. ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸುತ್ತಿದ್ದ ನನಗೆ ನನ್ನ ಊರಿನ ಬಗ್ಗೆ ಸಿನಿಮಾ ಮಾಡುವ ಆಸೆಯಾಯಿತು. ಹಾಗಾಗಿ ನಮ್ಮ ಊರಿಗೆ ಹೋದೆ. ಕೋವಿಡ್ ನಿಂದಾಗಿ ಒಂದು ವರ್ಷ ಅಲ್ಲೇ ಇರಬೇಕಾಯಿತು. ಅದು ನನಗೆ ಅನುಕೂಲವಾಯಿತು. ಅಲ್ಲಿನ ಜನರ ಹಾಗೂ ಅಲ್ಲಿನ ಸಂಸ್ಕೃತಿ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಸಮಯ ಸಿಕ್ಕಿತ್ತು. ರಿಷಭ್ ಶೆಟ್ಟಿ ಅವರು ನಿರ್ಮಾಣಕ್ಕೆ ಮುಂದಾದರು. ನಮ್ಮ ಊರಿನವರಾದ ಶರಣಮ್ಮ ಚಟ್ಟಿ “ಶಿವಮ್ಮ”ನ ಪಾತ್ರಕ್ಕೆ ಆಯ್ಕೆಯಾದರು. ಅದೇ ಊರಿನ ಹೆಚ್ಚಿನ ಜನರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆನಂತರ ಚಿತ್ರೀಕರಣ ಪೂರ್ಣವಾಗಿ “ಶಿವಮ್ಮ” ಚಿತ್ರ ತೆರೆಗೆ ಬರಲು ಸಿದ್ದವಾಯಿತು. ಬಿಡುಗಡೆಗೂ ಮುನ್ನ ಒಂದುವರ್ಷದಿಂದ ಸಾಕಷ್ಟು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನವಾಗಿದೆ. ಜೂನ್ 14 ಚಿತ್ರ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಜೈಶಂಕರ್ ಆರ್ಯರ್ ತಿಳಿಸಿದರು.

ನಿರ್ದೇಶಕ ಜೈಶಂಕರ್ ಅವರ ತಾಯಿಯನ್ನು ಮಾತನಾಡಿಸಲು ಹೋದಾಗ, ನನ್ನನ್ನು ನೋಡಿದ ಜೈಶಂಕರ್ ಅವರು ಸಿನಿಮಾದಲ್ಲಿ ಮಾಡುತ್ತೀರಾ ಎಂದರು. ನಮಗೆ ಇದೆಲ್ಲಾ ಹೊಸತು. ಯಾವಾಗಲಾದರು ಒಮ್ಮೆ ಸಿನಿಮಾ ನೋಡಿ ಗೊತ್ತಿದೆ‌ ಅಷ್ಟೇ. ಆನಂತರ ನಮ್ಮ ಮನೆಯವರ ಹಾಗು ಊರಿನ ಹಿರಿಯರ ಅನುಮತಿ ಪಡೆದು ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ. ಚಿತ್ರತಂಡದವರು ನಮ್ಮನೆಲ್ಲಾ ಚೆನ್ನಾಗಿ ನೊಡಿಕೊಂಡಿದ್ದಾರೆ. ನಿರ್ದೇಶಕರು ಹಾಗು ತಂಡದವರು ನಟನೆ ಗೊತ್ತಿಲ್ಲದ ನಮಗೆ ನಟಿಸುವುದನ್ನು ಕಲಿಸಿದ್ದಾರೆ ಎಂದು “ಶಿವಮ್ಮ” ಪಾತ್ರಧಾರಿ ಶರಣಮ್ಮ ಚಟ್ಟಿ ಹೇಳಿದರು.

ಚಿತ್ರದಲ್ಲಿ ನಟಿಸಿರುವ ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ ಹಾಗೂ ಶೃತಿ ಕೊಂಡೇನಹಳ್ಳಿ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ಪ್ರಮೋದ್ ಶೆಟ್ಟಿ ಚಿತ್ರಕ್ಕೆ ಶುಭ ಕೋರಿದರು.

Tags: ChalanachitrotsavaMovieRishabha ShettyShivamma
Previous Post

ವಾಲ್ಮೀಕಿ ನಿಗಮ ಹಗರಣ ಪ್ರಕರಣದ ತನಿಖೆ ಚುರುಕು ! ಡಿಜಿಟಲ್ ಎವಿಡೆನ್ಸ್ ಕಲೆಹಾಕಲು ಮುಂದಾದ SIT ! 

Next Post

ಬೆಂಗಳೂರು ಗ್ರಾಮಾಂತರ ಲೋಕಸಭೆ ಗೆಲುವು ಯಾರಿಗೆ

Related Posts

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy murder case) ಸಂಬಂಧಿಸಿದಂತೆ ಇಂದು ಬೆಂಗಳೂರಿನ 57 ನೇ ಸಿಸಿಹೆಚ್ (57th CCH court) ನ್ಯಾಯಾಲಯದಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ....

Read moreDetails

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

July 8, 2025

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

July 8, 2025
Next Post

ಬೆಂಗಳೂರು ಗ್ರಾಮಾಂತರ ಲೋಕಸಭೆ ಗೆಲುವು ಯಾರಿಗೆ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada