• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಶೇಷ

ಗಾಳಕ್ಕೆ ಸಿಕ್ಕ ಮೊಸಳೆ : ನಿಲ್ಲದ ತುಂಗಾ ನದಿ ಮೇಲಿನ ದೌರ್ಜನ್ಯ!

ಸಾಗರ by ಸಾಗರ
January 10, 2022
in ವಿಶೇಷ
0
ಗಾಳಕ್ಕೆ ಸಿಕ್ಕ ಮೊಸಳೆ : ನಿಲ್ಲದ ತುಂಗಾ ನದಿ ಮೇಲಿನ ದೌರ್ಜನ್ಯ!
Share on WhatsAppShare on FacebookShare on Telegram

ಶಿವಮೊಗ್ಗದಲ್ಲಿ ಹರಿವ ಅವಳಿ ನದಿಗಳಾದ ತುಂಗಾ ಹಾಗೂ ಭದ್ರಾ ಕೂಡ್ಲಿಯಲ್ಲಿ ಸಂಗಮವಾಗಿ ತುಂಗಾ ಭದ್ರಾ ನದಿಯಾಗಿ ಹರಿದು ಸಾಗುತ್ತವೆ. ಈ ನದಿ ಮಲೆನಾಡಿನಲ್ಲಿ ವಿಶಿಷ್ಟ ಜೀವಸಂಕುಲಕ್ಕೆ ಆಶ್ರಯ ನೀಡಿದೆ. ಖಗ-ಮೃಗ, ಜಲಚರಗಳಿಗೆ ಆವಾಸ ಸ್ಥಾನವಾಗಿವೆ. ಅಳಿವಿನಂಚಿಗೆ ಬಂದಿರುವ ಮೊಸಳೆಗಳಿಗೂ ಕೂಡ ಸಂತಾನೋತ್ಪತ್ತಿಗೆ ಪ್ರಾಶಸ್ತ್ಯವಾದ ಸ್ಥಳ ಎಂದು ಸಾಬೀತು ಮಾಡಿದೆ. ಈ ಭಾಗದ ಜನರಿಗೆ ಮೊದಲಿಂದಲೂ ಭದ್ರಾ ನದಿ ನೀರಿನಲ್ಲಿ ಮೊಸಳೆಗಳಿರುವ ಮಾಹಿತಿ ಇದೆ. ಹಾಗೂ ಭದ್ರಾ ನದಿಯಲ್ಲಿ ಆಗಾಗ ಮೊಸಳೆಗಳು ಕಾಣಿಸಿಕೊಳ್ಳುತ್ತವೆ ಆದರೆ ತುಂಗಾ ನದಿಯಲ್ಲಿ ಮೊಸಳೆಗಳಿವೆ ಎಂಬುದರ ಬಗ್ಗೆ ಅಷ್ಟೇನೂ ಮಾಹಿತಿ ಇಲ್ಲ. ಆದರೆ ಈಗ ಮೀನುಗಾರರಿಗೆ ಸಿಗುತ್ತಿರುವ ಮೊಸಳೆಗಳು ಜನರಿಗೆ ಆಘಾತ ಮೂಡಿಸಿದ್ದರೆ ಪರಿಸರಾಸಕ್ತರಿಗೆ ಖುಷಿ ತಂದಿದೆ.

ADVERTISEMENT

ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ರಶೀದ್ ಎಂಬುವರು ಹಾಕಿದ ಮೀನುಗಾಳಕ್ಕೆ ಮರಿ ಮೊಸಳೆಯೊಂದು ಸಿಲುಕಿಕೊಂಡಿದ್ದು ಗ್ರಾಮಸ್ಥರಲ್ಲಿ ಸಂಚಲನ ಮೂಡಿಸಿದೆ. ಕಳೆದ ವರ್ಷವೂ ಸಹ ಇವರಿಗೆ ಈ ಭಾಗದಲ್ಲಿ ಮೊಸಳೆಯೊಂದು ಕಂಡಿತ್ತು. ಈಗ ತುಂಗಾ ನದಿ ತೀರದಲ್ಲಿ ಸಂಗಮಕ್ಕಿಂತ ಹಿಂದೆ ಮೊಸಳೆಗಳು ವಾಸವಿದ್ದು ಮರಿಗಳನ್ನ ಮಾಡಿಕೊಂಡಿವೆ ಎಂಬುದು ಖಾತ್ರಿಯಾಗಿದೆ. ರಶೀದ್ಗೆ ಸಿಕ್ಕ ಮರಿ ಮೊಸಳೆಯನ್ನ ಗಾಳದಿಂದ ಬಿಡಿಸಲಾಗದೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಶಿವಮೊಗ್ಗ ವನ್ಯಜೀವಿ ವಿಭಾಗ ತಮ್ಮ ವ್ಯಾಪ್ತಿಗೆ ಬರೋದಿಲ್ಲ ಎಂದರೆ, ಶಾಂತಿ ಸಾಗರ ವಿಭಾಗ ತಮ್ಮ ವ್ಯಾಪ್ತಿಯಲ್ಲಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿ ಹಳ್ಳಿಗರಿಗೇ ಜವಾಬ್ದಾರಿ ವಹಿಸಿದೆ. ಸದ್ಯ ಮೊಸಳೆಯನ್ನ ತುಂಗಾ ಭದ್ರಾ ನದಿಗಳು ಸೇರುವ ಕೂಡಲಿಯಲ್ಲಿ ಬಿಟ್ಟು ಬರೋದಕ್ಕೆ ಗ್ರಾಮಸ್ಥರು ಸಿದ್ಧರಾಗಿದ್ದಾರೆ.

ಈ ಕುರಿತು ಮಾತನಾಡಿದ ಪಿಳ್ಳಂಗಿರಿ ರಂಗನಾಥ ಸ್ವಾಮಿ ದೇಗುಲದ ಅರ್ಚಕ ಮಿಥುನ್ ಅಯ್ಯಂಗಾರ್, ಮೊಸಳೆಗಳು ಭದ್ರಾದಲ್ಲಿ ಸಾಮಾನ್ಯವಾಗಿ ಕಾಣುತ್ತವೆ ಆದರೆ ತುಂಗಾ ನದಿಯಲ್ಲಿ ಅದರಲ್ಲೂ ಜನನಿಬಿಡ ಪ್ರದೇಶದಲ್ಲಿನ ತೀರದಲ್ಲಿ ಕಾಣಸಿಗುವುದು ಭಯ ಮೂಡಿಸಿದೆ. ತುಂಗಾ ನದಿಯಲ್ಲಿ ರೈತರ ಪಂಪ್ಸೆಟ್ಗಳು, ಮರಳು ಗಣಿಗಾರಿಕೆ ಅವ್ಯಾಹತವಾಗಿ ಸಾಗಿದೆ. ಇದರಿಂದ ಮೊಸಳೆಗಳು ವಿಚಲಿತಗೊಂಡು ಚದುರಿಕೊಂಡಿವೆ ಎಂದು ಹೇಳುತ್ತಾರೆ.

ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್ ಐ ಎಂ ನಾಗರಾಜ್ ತುಂಗಾ ನದಿ ಮೊಸಳೆ ಆವಾಸ ಸ್ಥಾನ ಎಂದು ಹೇಳುತ್ತಾರೆ. ಗಾಜನೂರಿನಲ್ಲಿ ನಿರ್ಮಿಸಿರುವ ತುಂಗಾ ಮೇಲ್ದಂಡೆ ಯೋಜನೆ ( ಡ್ಯಾಂ) ಹಿನ್ನೀರಲ್ಲಿ ಮೊಸಳೆಗಳು ಸಾಕಷ್ಟಿವೆ. ತುಂಗಾ ನದಿಯಲ್ಲಿ ಮೀನುಗಳು ಸಹ ಹೆಚ್ಚಾಗಿರೋದ್ರಿಂದ ಆಹಾರಕ್ಕೆ ಸಮಸ್ಯೆ ಇಲ್ಲ. ಈ ಭಾಗದ ಮೊಸಳೆಗಳು ಚಾನಲ್ಗಳ ಮೂಲಕವೂ ಸಂಚರಿಸುತ್ತವೆ ಆದರೆ ಎಲ್ಲಿಯೂ ಜನರ ಮೇಲೆ ದಾಳಿ ನಡೆಸಿಲ್ಲ ಎನ್ನುತ್ತಾರೆ.

ಗಾಜನೂರಿನವರೇ ಆದ ಪರಿಸರಾಸಕ್ತ ನಿತಿನ್ ಹೇರಳೆ ಅರಣ್ಯ ಇಲಾಖೆಯ ಇಬ್ಬಂದಿತನವನ್ನ ಪ್ರಶ್ನೆ ಮಾಡುತ್ತಾರೆ. ಅಳಿವಿನಂಚಿಗೆ ಬಂದಿರುವ ಮೊಸಳೆಗಳು ತುಂಗಾ ನದಿಯಲ್ಲೇನೋ ಸಂತಾನೋತ್ಪತ್ತಿ ಮಾಡುತ್ತಿವೆ ಆದರೆ ಅರಣ್ಯ ಇಲಾಖೆ ನಿಷೇಧಿತ ಪರಿಸರದಲ್ಲಿ ವಿವೇಚನಾರಹಿತವಾಗಿ ಹೋಟೆಲ್, ರೆಸ್ಟೋರೆಂಟ್ಗಳಿಗೆ ಅನುಮತಿ ನೀಡಿದೆ. ಮೀನುಗಾರಿಕೆ ನಿಷೇಧವಿದ್ದರೂ ಕಾನೂನು ಪರಿಪಾಲನೆ ಮಾಡುತ್ತಿಲ್ಲ. ಮರಳು ಗಣಿಗಾರಿಕೆ ಎಗ್ಗಿಲ್ಲದೇ ಸಾಗಿದೆ ಎಂದರು.

Tags: ತುಂಗಾ ನದಿದೌರ್ಜನ್ಯಮೊಸಳೆ
Previous Post

ಅಗಲಿದ ಬಂಡಾಯ – ಪ್ರತಿರೋಧದ ದಿಟ್ಟ ಧ್ವನಿ – ಚಂಪಾ

Next Post

ಸಕಲ ಪೊಲೀಸ್ ಗೌರವಗಳೊಂದಿಗೆ ʼಚಂಪಾʼ ಅವರ ಅಂತ್ಯಕ್ರಿಯೆ : CM Bommai ಭಾವುಕ

Related Posts

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
0

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ...

Read moreDetails
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025
Next Post
ಸಕಲ ಪೊಲೀಸ್ ಗೌರವಗಳೊಂದಿಗೆ ʼಚಂಪಾʼ ಅವರ ಅಂತ್ಯಕ್ರಿಯೆ : CM Bommai ಭಾವುಕ

ಸಕಲ ಪೊಲೀಸ್ ಗೌರವಗಳೊಂದಿಗೆ ʼಚಂಪಾʼ ಅವರ ಅಂತ್ಯಕ್ರಿಯೆ : CM Bommai ಭಾವುಕ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada