• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಗಾಳಕ್ಕೆ ಸಿಕ್ಕ ಮೊಸಳೆ : ನಿಲ್ಲದ ತುಂಗಾ ನದಿ ಮೇಲಿನ ದೌರ್ಜನ್ಯ!

ಸಾಗರ by ಸಾಗರ
January 10, 2022
in ವಿಶೇಷ
0
ಗಾಳಕ್ಕೆ ಸಿಕ್ಕ ಮೊಸಳೆ : ನಿಲ್ಲದ ತುಂಗಾ ನದಿ ಮೇಲಿನ ದೌರ್ಜನ್ಯ!
Share on WhatsAppShare on FacebookShare on Telegram

ಶಿವಮೊಗ್ಗದಲ್ಲಿ ಹರಿವ ಅವಳಿ ನದಿಗಳಾದ ತುಂಗಾ ಹಾಗೂ ಭದ್ರಾ ಕೂಡ್ಲಿಯಲ್ಲಿ ಸಂಗಮವಾಗಿ ತುಂಗಾ ಭದ್ರಾ ನದಿಯಾಗಿ ಹರಿದು ಸಾಗುತ್ತವೆ. ಈ ನದಿ ಮಲೆನಾಡಿನಲ್ಲಿ ವಿಶಿಷ್ಟ ಜೀವಸಂಕುಲಕ್ಕೆ ಆಶ್ರಯ ನೀಡಿದೆ. ಖಗ-ಮೃಗ, ಜಲಚರಗಳಿಗೆ ಆವಾಸ ಸ್ಥಾನವಾಗಿವೆ. ಅಳಿವಿನಂಚಿಗೆ ಬಂದಿರುವ ಮೊಸಳೆಗಳಿಗೂ ಕೂಡ ಸಂತಾನೋತ್ಪತ್ತಿಗೆ ಪ್ರಾಶಸ್ತ್ಯವಾದ ಸ್ಥಳ ಎಂದು ಸಾಬೀತು ಮಾಡಿದೆ. ಈ ಭಾಗದ ಜನರಿಗೆ ಮೊದಲಿಂದಲೂ ಭದ್ರಾ ನದಿ ನೀರಿನಲ್ಲಿ ಮೊಸಳೆಗಳಿರುವ ಮಾಹಿತಿ ಇದೆ. ಹಾಗೂ ಭದ್ರಾ ನದಿಯಲ್ಲಿ ಆಗಾಗ ಮೊಸಳೆಗಳು ಕಾಣಿಸಿಕೊಳ್ಳುತ್ತವೆ ಆದರೆ ತುಂಗಾ ನದಿಯಲ್ಲಿ ಮೊಸಳೆಗಳಿವೆ ಎಂಬುದರ ಬಗ್ಗೆ ಅಷ್ಟೇನೂ ಮಾಹಿತಿ ಇಲ್ಲ. ಆದರೆ ಈಗ ಮೀನುಗಾರರಿಗೆ ಸಿಗುತ್ತಿರುವ ಮೊಸಳೆಗಳು ಜನರಿಗೆ ಆಘಾತ ಮೂಡಿಸಿದ್ದರೆ ಪರಿಸರಾಸಕ್ತರಿಗೆ ಖುಷಿ ತಂದಿದೆ.

ADVERTISEMENT

ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ರಶೀದ್ ಎಂಬುವರು ಹಾಕಿದ ಮೀನುಗಾಳಕ್ಕೆ ಮರಿ ಮೊಸಳೆಯೊಂದು ಸಿಲುಕಿಕೊಂಡಿದ್ದು ಗ್ರಾಮಸ್ಥರಲ್ಲಿ ಸಂಚಲನ ಮೂಡಿಸಿದೆ. ಕಳೆದ ವರ್ಷವೂ ಸಹ ಇವರಿಗೆ ಈ ಭಾಗದಲ್ಲಿ ಮೊಸಳೆಯೊಂದು ಕಂಡಿತ್ತು. ಈಗ ತುಂಗಾ ನದಿ ತೀರದಲ್ಲಿ ಸಂಗಮಕ್ಕಿಂತ ಹಿಂದೆ ಮೊಸಳೆಗಳು ವಾಸವಿದ್ದು ಮರಿಗಳನ್ನ ಮಾಡಿಕೊಂಡಿವೆ ಎಂಬುದು ಖಾತ್ರಿಯಾಗಿದೆ. ರಶೀದ್ಗೆ ಸಿಕ್ಕ ಮರಿ ಮೊಸಳೆಯನ್ನ ಗಾಳದಿಂದ ಬಿಡಿಸಲಾಗದೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಶಿವಮೊಗ್ಗ ವನ್ಯಜೀವಿ ವಿಭಾಗ ತಮ್ಮ ವ್ಯಾಪ್ತಿಗೆ ಬರೋದಿಲ್ಲ ಎಂದರೆ, ಶಾಂತಿ ಸಾಗರ ವಿಭಾಗ ತಮ್ಮ ವ್ಯಾಪ್ತಿಯಲ್ಲಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿ ಹಳ್ಳಿಗರಿಗೇ ಜವಾಬ್ದಾರಿ ವಹಿಸಿದೆ. ಸದ್ಯ ಮೊಸಳೆಯನ್ನ ತುಂಗಾ ಭದ್ರಾ ನದಿಗಳು ಸೇರುವ ಕೂಡಲಿಯಲ್ಲಿ ಬಿಟ್ಟು ಬರೋದಕ್ಕೆ ಗ್ರಾಮಸ್ಥರು ಸಿದ್ಧರಾಗಿದ್ದಾರೆ.

ಈ ಕುರಿತು ಮಾತನಾಡಿದ ಪಿಳ್ಳಂಗಿರಿ ರಂಗನಾಥ ಸ್ವಾಮಿ ದೇಗುಲದ ಅರ್ಚಕ ಮಿಥುನ್ ಅಯ್ಯಂಗಾರ್, ಮೊಸಳೆಗಳು ಭದ್ರಾದಲ್ಲಿ ಸಾಮಾನ್ಯವಾಗಿ ಕಾಣುತ್ತವೆ ಆದರೆ ತುಂಗಾ ನದಿಯಲ್ಲಿ ಅದರಲ್ಲೂ ಜನನಿಬಿಡ ಪ್ರದೇಶದಲ್ಲಿನ ತೀರದಲ್ಲಿ ಕಾಣಸಿಗುವುದು ಭಯ ಮೂಡಿಸಿದೆ. ತುಂಗಾ ನದಿಯಲ್ಲಿ ರೈತರ ಪಂಪ್ಸೆಟ್ಗಳು, ಮರಳು ಗಣಿಗಾರಿಕೆ ಅವ್ಯಾಹತವಾಗಿ ಸಾಗಿದೆ. ಇದರಿಂದ ಮೊಸಳೆಗಳು ವಿಚಲಿತಗೊಂಡು ಚದುರಿಕೊಂಡಿವೆ ಎಂದು ಹೇಳುತ್ತಾರೆ.

ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್ ಐ ಎಂ ನಾಗರಾಜ್ ತುಂಗಾ ನದಿ ಮೊಸಳೆ ಆವಾಸ ಸ್ಥಾನ ಎಂದು ಹೇಳುತ್ತಾರೆ. ಗಾಜನೂರಿನಲ್ಲಿ ನಿರ್ಮಿಸಿರುವ ತುಂಗಾ ಮೇಲ್ದಂಡೆ ಯೋಜನೆ ( ಡ್ಯಾಂ) ಹಿನ್ನೀರಲ್ಲಿ ಮೊಸಳೆಗಳು ಸಾಕಷ್ಟಿವೆ. ತುಂಗಾ ನದಿಯಲ್ಲಿ ಮೀನುಗಳು ಸಹ ಹೆಚ್ಚಾಗಿರೋದ್ರಿಂದ ಆಹಾರಕ್ಕೆ ಸಮಸ್ಯೆ ಇಲ್ಲ. ಈ ಭಾಗದ ಮೊಸಳೆಗಳು ಚಾನಲ್ಗಳ ಮೂಲಕವೂ ಸಂಚರಿಸುತ್ತವೆ ಆದರೆ ಎಲ್ಲಿಯೂ ಜನರ ಮೇಲೆ ದಾಳಿ ನಡೆಸಿಲ್ಲ ಎನ್ನುತ್ತಾರೆ.

ಗಾಜನೂರಿನವರೇ ಆದ ಪರಿಸರಾಸಕ್ತ ನಿತಿನ್ ಹೇರಳೆ ಅರಣ್ಯ ಇಲಾಖೆಯ ಇಬ್ಬಂದಿತನವನ್ನ ಪ್ರಶ್ನೆ ಮಾಡುತ್ತಾರೆ. ಅಳಿವಿನಂಚಿಗೆ ಬಂದಿರುವ ಮೊಸಳೆಗಳು ತುಂಗಾ ನದಿಯಲ್ಲೇನೋ ಸಂತಾನೋತ್ಪತ್ತಿ ಮಾಡುತ್ತಿವೆ ಆದರೆ ಅರಣ್ಯ ಇಲಾಖೆ ನಿಷೇಧಿತ ಪರಿಸರದಲ್ಲಿ ವಿವೇಚನಾರಹಿತವಾಗಿ ಹೋಟೆಲ್, ರೆಸ್ಟೋರೆಂಟ್ಗಳಿಗೆ ಅನುಮತಿ ನೀಡಿದೆ. ಮೀನುಗಾರಿಕೆ ನಿಷೇಧವಿದ್ದರೂ ಕಾನೂನು ಪರಿಪಾಲನೆ ಮಾಡುತ್ತಿಲ್ಲ. ಮರಳು ಗಣಿಗಾರಿಕೆ ಎಗ್ಗಿಲ್ಲದೇ ಸಾಗಿದೆ ಎಂದರು.

Tags: ತುಂಗಾ ನದಿದೌರ್ಜನ್ಯಮೊಸಳೆ
Previous Post

ಅಗಲಿದ ಬಂಡಾಯ – ಪ್ರತಿರೋಧದ ದಿಟ್ಟ ಧ್ವನಿ – ಚಂಪಾ

Next Post

ಸಕಲ ಪೊಲೀಸ್ ಗೌರವಗಳೊಂದಿಗೆ ʼಚಂಪಾʼ ಅವರ ಅಂತ್ಯಕ್ರಿಯೆ : CM Bommai ಭಾವುಕ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

April 14, 2026
Next Post
ಸಕಲ ಪೊಲೀಸ್ ಗೌರವಗಳೊಂದಿಗೆ ʼಚಂಪಾʼ ಅವರ ಅಂತ್ಯಕ್ರಿಯೆ : CM Bommai ಭಾವುಕ

ಸಕಲ ಪೊಲೀಸ್ ಗೌರವಗಳೊಂದಿಗೆ ʼಚಂಪಾʼ ಅವರ ಅಂತ್ಯಕ್ರಿಯೆ : CM Bommai ಭಾವುಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada