75ನೇ ಸ್ವಾತಂತ್ರ್ಯೋತ್ಸವದಂದು ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ್ ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್ ಫ್ಲೆಕ್ಸ್ ವಿಚಾರವಾಗಿ ಭಾರೀ ಗಲಾಟೆ ನಡೆದು ಸದ್ಯ ಬಿಗುವಿನ ವಾತಾವರಣವಿದ್ದು, ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ಇಂದು ರಜೆ ರಜೆ ಘೋಷಿಸಿ ಡಿಸಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ, ಭದ್ರಾವತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಇಂದು ನಡೆಯಬೇಕಿದ್ದ ಕುವೆಂಪು ವಿವಿಯ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ನವೀನ್ ಕುಮಾರ್ ಹೇಳಿದ್ದಾರೆ.
ಪ್ರಕರಣದ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಮಾತನಾಡಿ, ಈಗಾಗಲೇ 21 ಪೊಲೀಸ್ ತುಕಡಿಗಳನ್ನು ನಾವು ಬಿಗಿ ಭದ್ರತೆಗೆ ಕೇಳಲಾಗಿದ್ದು ಈಗಾಗಲೇ 15 ತುಕಡಿಗಳಿವೆ. ಬೇರೆ ಬೇರೆ ಜಿಲ್ಲೆಯಿಂದ ದಾವಣಗೆರೆ ಪೂರ್ವ ಭಾಗಿಂದ ಪೊಲೀಸ್ ಅಧಿಕಾರಿಗಳು ಬಂದಿದ್ದಾರೆ. ಹೊರಗಿನಿಂದ ಮೂವರು ಹೆಚ್ಚುವರಿ ಎಸ್ಪಿಗಳು ಬರುತ್ತಿದ್ದಾರೆ ಇನ್ನೂ ಹಲವು ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಬರಲಿದ್ದಾರೆ ಎಂದು ಹೇಳಿದ್ದಾರೆ.
ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಲಾಗುತ್ತಿದ್ದು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ಕಂಡುಬಂದಿಲ್ಲ ಎಂದಿದ್ದಾರೆ.
ಶಿವಮೊಗ್ಗ ಸಾವರ್ಕರ್ ಬ್ಯಾನರ್ ತೆರವು ಮಾಡಿಸಿದ ನಂತರ
ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಫ್ಲೆಕ್ಸ್ ನ್ನು ಹರಿದಿರುವ ದುರ್ವರ್ತನೆ ನಡೆದಿದೆ.