• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

ಪ್ರತಿಧ್ವನಿ by ಪ್ರತಿಧ್ವನಿ
July 12, 2026
in Top Story, ಕರ್ನಾಟಕ, ಸಿನಿಮಾ
0
ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!
Share on WhatsAppShare on FacebookShare on Telegram

‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ ವಿಶೇಷ ಹೆಲ್ತ್ ಕಾರ್ಡ್ ಬಿಡುಗಡೆಯಾಗಿದ್ದರೆ, ಇನ್ನೊಂದೆಡೆ ಶಿವಣ್ಣ ನಟನೆಯ ಬಹುನಿರೀಕ್ಷಿತ ಸಿನಿಮಾಗಳ ಟೀಸರ್, ಪೋಸ್ಟರ್ ಹಾಗೂ ಪ್ರೋಮೋಗಳು ರಿಲೀಸ್ ಆಗಿ ಧೂಳೆಬ್ಬಿಸುತ್ತಿವೆ.

ADVERTISEMENT
S Janaki Passes Away: ಗಾನ ಕೋಗಿಲೆ ಎಸ್.ಜಾನಕಿ ಬಗ್ಗೆ ಸಾ.ರಾ ಮಹೇಶ್ ಭಾವುಕ ಮಾತು.!

1. ವಿ.ಎಸ್.ಎಚ್. ಆಸ್ಪತ್ರೆಯಿಂದ ‘ಹ್ಯಾಟ್ರಿಕ್ ಹೀರೋ ಫ್ಯಾಮಿಲಿ ಹೆಲ್ತ್ ಕಾರ್ಡ್’ ಲೋಕಾರ್ಪಣೆ
ಬೆಂಗಳೂರಿನ ಹೃದಯಭಾಗದಲ್ಲಿರುವ ಪ್ರತಿಷ್ಠಿತ ವಿ.ಎಸ್.ಎಚ್. (VSH) ಆಸ್ಪತ್ರೆಯು (ಹಿಂದಿನ ಮಲ್ಯಾ ಆಸ್ಪತ್ರೆ) ಡಾ. ಶಿವರಾಜ್‌ಕುಮಾರ್ ಅವರ ಜನ್ಮದಿನದ ಸಂಭ್ರಮಕ್ಕೆ ಅತ್ಯಂತ ಅರ್ಥಪೂರ್ಣ ಕೊಡುಗೆ ನೀಡಿದೆ. ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಬಂಗಾರಪ್ಪ ಹಾಗೂ ನಟಸಾರ್ವಭೌಮ ಡಾ. ರಾಜ್‌ಕುಮಾರ್ ಕುಟುಂಬದೊಂದಿಗೆ ದಶಕಗಳ ಆತ್ಮೀಯ ಬಾಂಧವ್ಯ ಹೊಂದಿರುವ ಈ ಆಸ್ಪತ್ರೆಯು, ಶಿವಣ್ಣನ ಹುಟ್ಟುಹಬ್ಬದ ಗೌರವಾರ್ಥವಾಗಿ ‘ಹ್ಯಾಟ್ರಿಕ್ ಹೀರೋ ಫ್ಯಾಮಿಲಿ ಹೆಲ್ತ್ ಕಾರ್ಡ್’ ಅನ್ನು ಬಿಡುಗಡೆ ಮಾಡಿದೆ.

 ಉಚಿತವಾಗಿ ನಟಿಸಿದ ಶಿವಣ್ಣ:
ಆಸ್ಪತ್ರೆಯ ‘Minutes Matter’ (ನಿಮಿಷಗಳು ಅಮೂಲ್ಯ) ಎಂಬ ಧೈಯದ ಜಾಹೀರಾತಿನಲ್ಲಿ ಆಂಬುಲೆನ್ಸ್ ಚಾಲಕ, ವೈದ್ಯ, ಮನೋವೈದ್ಯ ಸೇರಿದಂತೆ 10 ವಿಭಿನ್ನ ಪಾತ್ರಗಳಲ್ಲಿ ಶಿವಣ್ಣ ನಟಿಸಿದ್ದಾರೆ. ಜಾಗತಿಕ ಮಟ್ಟದ ಹೃದಯ ತಜ್ಞರಾದ ಡಾ. ವಿ.ಕೆ. ಶ್ರೀನಿವಾಸ್ ಅವರು ಈ ಹಿಂದೆ ಶಿವಣ್ಣ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದರು. ಶಿವಣ್ಣ ಈ ಜಾಹೀರಾತಿನಲ್ಲಿ ಯಾವುದೇ ಸಂಭಾವನೆ ಪಡೆಯದೆ ಉಚಿತವಾಗಿ ನಟಿಸಿದ್ದು, ಆ ಹಣವನ್ನು ಅಭಿಮಾನಿಗಳ ಆರೋಗ್ಯ ಸೇವೆಗೆ ಬಳಸುವಂತೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ವಿ.ಎಸ್.ಎಚ್. ನಿರ್ದೇಶಕಿ ಡಾ. ಕಲ್ಪಜಾ ಅವರ ಕನಸಿಗೆ ಗೀತಾ ಶಿವರಾಜ್‌ಕುಮಾರ್ ಅವರ ಪ್ರೋತ್ಸಾಹವೂ ಬೆಂಬಲವಾಗಿ ನಿಂತಿದೆ.

S Janaki Passes Away: ಎಸ್. ಜಾನಕಿ ಮಂಡ್ಯ, ಮೈಸೂರು ಜನರನ್ನು ಹೆಚ್ಚು ಪ್ರೀತಿಸುತ್ತಿದ್ರು..

ಕಾರ್ಡ್‌ನಿಂದ ಸಿಗುವ ಪ್ರಮುಖ ಸೌಲಭ್ಯಗಳು (ಸುಮಾರು 2,500 ಕುಟುಂಬಗಳಿಗೆ ಅನುಕೂಲ):
ಒಂದು ಬಾರಿ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ತುರ್ತು ಆಂಬುಲೆನ್ಸ್ ಸೇವೆ.
ಹೃದಯ ರೋಗ, ಕ್ಯಾನ್ಸರ್, ಡಯಾಲಿಸಿಸ್, ಹೊರರೋಗಿ/ಒಳರೋಗಿ ಸೇವೆಗಳು, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಗಳಿಗೆ ಆಸ್ಪತ್ರೆ ಶುಲ್ಕದಲ್ಲಿ 25% ರಿಯಾಯಿತಿ.
14 ವರ್ಷದೊಳಗಿನ ಮಕ್ಕಳ ಚಿಕಿತ್ಸೆಗೂ 25% ರಿಯಾಯಿತಿ ದೊರೆಯಲಿದೆ (ಔಷಧಿಗಳು ಮತ್ತು ಇಂಪ್ಲಾಂಟ್‌ಗಳಿಗೆ ಇದು ಅನ್ವಯಿಸುವುದಿಲ್ಲ).
ಶಿವಣ್ಣನ ನಿವಾಸದ ಸಮೀಪ ಜುಲೈ 12ರಂದು ಸಾರ್ವಜನಿಕರಿಗೆ ಈ ಕಾರ್ಡ್‌ಗಳನ್ನು ವಿತರಿಸಲಾಗಿದೆ.

2. ‘ಸರ್ವೈವರ್’ ಸಾಕ್ಷ್ಯಚಿತ್ರದ ಟೀಸರ್ ಬಿಡುಗಡೆ
ಶಿವರಾಜ್‌ಕುಮಾರ್ ಅವರು ತಮ್ಮ ಜೀವಿತಾವಧಿಯಲ್ಲಿ ಎದುರಿಸಿದ ಅನಾರೋಗ್ಯದ ಕಠಿಣ ಹೋರಾಟದ ಕಥೆಯನ್ನು ಒಳಗೊಂಡಿರುವ ‘ಸರ್ವೈವರ್’ (Survivor) ಸಾಕ್ಷ್ಯಚಿತ್ರದ ಅಧಿಕೃತ ಟೀಸರ್ ಅನ್ನು ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ. ಗೀತಾ ಶಿವರಾಜ್‌ಕುಮಾರ್ ಒಡೆತನದ ‘ಗೀತಾ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಈ ಸಾಕ್ಷ್ಯಚಿತ್ರ ನಿರ್ಮಾಣವಾಗಿದ್ದು, ಶಿವಣ್ಣ ಚಿಕಿತ್ಸೆ ಪಡೆಯುವಾಗಿನ ಆಸ್ಪತ್ರೆಯೊಳಗಿನ ನೈಜ ದೃಶ್ಯಗಳನ್ನು ಇದು ಒಳಗೊಂಡಿದೆ. ಈ ಟೀಸರ್‌ನಲ್ಲಿ ಭಾರತೀಯ ಚಿತ್ರರಂಗದ ದಿಗ್ಗಜರಾದ ಕಮಲ್ ಹಾಸನ್, ನಾಗಾರ್ಜುನ, ಕಿಚ್ಚ ಸುದೀಪ್, ಸಾಯಿ ಕುಮಾರ್, ದುನಿಯಾ ವಿಜಯ್ ಹಾಗೂ ಡಾಲಿ ಧನಂಜಯ ಶಿವಣ್ಣನ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಶೀಘ್ರದಲ್ಲೇ ಈ ಸಾಕ್ಷ್ಯಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ.

S Janaki Passes Away: ಮೈಸೂರಿನಲ್ಲಿ ಸಚಿವ Dr. Yathindra Siddaramaiah ಹೇಳಿಕೆ..

3. ಅಕ್ಟೋಬರ್ 2ರ ಗಾಂಧಿ ಜಯಂತಿಗೆ ‘ಬೇಲ್’ ಸಿನಿಮಾ ಗ್ರಾಂಡ್ ರಿಲೀಸ್!
ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ನ ಬಹುನಿರೀಕ್ಷಿತ ಸಿನಿಮಾ ‘ಬೇಲ್’ ಚಿತ್ರದ ಹೊಸ ಪೋಸ್ಟರ್ ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಈ ಹೊಸ ಪೋಸ್ಟರ್‌ನಲ್ಲಿ ಶಿವಣ್ಣ ಖಡಕ್ ಪೊಲೀಸ್ ಆಫೀಸರ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ರೋಮಾಂಚನ ಉಂಟುಮಾಡಿದೆ. ಈ ಆಕ್ಷನ್ ಸಿನಿಮಾ ಮುಂಬರುವ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಜಗತ್ತಿನಾದ್ಯಂತ ತೆರೆಕಾಣಲಿದೆ. ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಸಾಯಿ ಕುಮಾರ್ ಮತ್ತು ಸಂಜನಾ ಆನಂದ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

4. ‘ಎ ಫಾರ್ ಆನಂದ್’ ಕ್ಯೂಟ್ ಪ್ರೋಮೋ ಔಟ್
‘ಘೋಸ್ಟ್’ ಚಿತ್ರದ ಭರ್ಜರಿ ಯಶಸ್ಸಿನ ನಂತರ ನಿರ್ದೇಶಕ ಶ್ರೀನಿ ಹಾಗೂ ಶಿವರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಎ ಫಾರ್ ಆನಂದ್’ ಚಿತ್ರದ ಕ್ಯೂಟ್ ಪ್ರೋಮೋ ರಿಲೀಸ್ ಆಗಿದೆ. ಗೀತಾ ಶಿವರಾಜ್‌ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಶಿವಣ್ಣ ಟೀಚರ್ ಪಾತ್ರದಲ್ಲಿ ಮಿಂಚಲಿದ್ದಾರೆ. ವಿಶೇಷವಾಗಿ ಬಿಡುಗಡೆಯಾಗಿರುವ ಈ ಪ್ರೋಮೋದಲ್ಲಿ ಗೀತಾ ಶಿವರಾಜ್‌ಕುಮಾರ್, ದುನಿಯಾ ವಿಜಯ್ ಹಾಗೂ ಶ್ರೀನಿ ಒಟ್ಟಿಗೆ ಕಾಣಿಸಿಕೊಂಡಿದ್ದು, ವಾಸುಕಿ ವೈಭವ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ.

Eshwar Khandre About Karnataka Local Body Election: ಸ್ಥಳೀಯ ಚುನಾವಣೆ, ಗುಡ್​ನ್ಯೂಸ್ ಕೊಟ್ಟ ಈಶ್ವರ್ ಖಂಡ್ರೆ

5. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಿಂದ ಸ್ಪೆಷಲ್ ಮೇಕಿಂಗ್ ವಿಡಿಯೋ
ಹೃದಯಸ್ಪರ್ಶಿ ಚಿತ್ರಗಳನ್ನು ನೀಡಿದ ನಿರ್ದೇಶಕ ಹೇಮಂತ್ ಎಂ. ರಾವ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಪಿರಿಯಡ್ ಆಕ್ಷನ್-ಸ್ಪೈ ಥ್ರಿಲ್ಲರ್ ಸಿನಿಮಾ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡದಿಂದ ಶಿವಣ್ಣನಿಗೆ ವಿಶಿಷ್ಟವಾಗಿ ಶುಭಾಶಯ ಕೋರಲಾಗಿದೆ. ಚಿತ್ರದಲ್ಲಿ ಶಿವಣ್ಣ ಅವರ ಡಿಫರೆಂಟ್ ಗೆಟಪ್ ಹೊಂದಿರುವ ರೋಮಾಂಚಕ ಮೇಕಿಂಗ್ ವಿಡಿಯೋವನ್ನು ರಿಲೀಸ್ ಮಾಡಲಾಗಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿವಣ್ಣ – ಡಾಲಿ ಧನಂಜಯ್ ಜೊತೆಯಾಗಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿದೆ.

Tags: Birthdayhealth cardKannadakannada moviessandalwoodSHIVANNAshivaraj kumar
Previous Post

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

Next Post

ಕಣಿಯನಹುಂಡಿಯಲ್ಲಿ ಚಿರನಿದ್ರೆ; ಎಸ್. ಜಾನಕಿ ಅಂತಿಮಯಾತ್ರೆಯಲ್ಲಿ ಎಲ್ಲರ ಮನ ಮುಟ್ಟಿದ ಈ ಒಂದು ದೃಶ್ಯ

Related Posts

16 ವರ್ಷ ವಯಸ್ಸಿನ ಅಂತರದ ಬಗ್ಗೆ ಮೊದಲ ಬಾರಿಗೆ ಮನಬಿಚ್ಚಿದ ರಘು ದೀಕ್ಷಿತ್‌
ಸಿನಿಮಾ

16 ವರ್ಷ ವಯಸ್ಸಿನ ಅಂತರದ ಬಗ್ಗೆ ಮೊದಲ ಬಾರಿಗೆ ಮನಬಿಚ್ಚಿದ ರಘು ದೀಕ್ಷಿತ್‌

by ಪ್ರತಿಧ್ವನಿ
July 13, 2026
0

ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2025ರಲ್ಲಿ ಗಾಯಕಿ ವಾರಿಜಾಶ್ರೀ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ವೇಳೆ ರಘು ದೀಕ್ಷಿತ್ ಅವರಿಗೆ...

Read moreDetails
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

July 12, 2026
Next Post
ಕಣಿಯನಹುಂಡಿಯಲ್ಲಿ ಚಿರನಿದ್ರೆ; ಎಸ್. ಜಾನಕಿ ಅಂತಿಮಯಾತ್ರೆಯಲ್ಲಿ ಎಲ್ಲರ ಮನ ಮುಟ್ಟಿದ ಈ ಒಂದು ದೃಶ್ಯ

ಕಣಿಯನಹುಂಡಿಯಲ್ಲಿ ಚಿರನಿದ್ರೆ; ಎಸ್. ಜಾನಕಿ ಅಂತಿಮಯಾತ್ರೆಯಲ್ಲಿ ಎಲ್ಲರ ಮನ ಮುಟ್ಟಿದ ಈ ಒಂದು ದೃಶ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada