Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಧರಣಿ ಮಂಡಲ ಮಧ್ಯದೊಳಗೆ ಚಿತ್ರಕ್ಕೆ ಸಾಥ್ ನೀಡಿದ ಹ್ಯಾಟ್ರಿಕ್ ಹೀರೋ, ವಸಿಷ್ಠ ಸಿಂಹ

ಪ್ರತಿಧ್ವನಿ

ಪ್ರತಿಧ್ವನಿ

December 24, 2022
Share on FacebookShare on Twitter

ಈಗಾಗಲೇ ಟೈಟಲ್‌, ಟೀಸರ್‌ ಹಾಗೂ ಹಾಡುಗಳ ಮೂಲಕ ಸಿನಿರಸಿಕರ ಗಮನ ಸೆಳೆದಿರುವ ಬಹು ನಿರೀಕ್ಷಿತ ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್‌ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಾಯಕ ನಟ ವಸಿಷ್ಠ ಸಿಂಹ ಟ್ರೇಲರ್‌ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್‌ ನೀಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

| GANESH| ಜೀವನ ಅಂದ್ರೇನೆ ಕ್ರಿಕೆಟ್, ನಮ್ಮ ಸುತ್ತ 11 ಜನ ಇರ್ತಾರೆ ಕಾಲೆಳೆಯೋಕೆ

D Boss | kranti | ಸರ್ಕಾರಕ್ಕೆ ಹೇಳಿ ಹೇಳಿ ಸಾಕಾಗಿದೆ, ಚಪ್ಪಲಿ ಹೊಡಿಬೇಕು ಅಷ್ಟೇ | Government

ramya|ಮೋಹಕ ತಾರೆ ರಮ್ಯಾ ಯಾವ ಕ್ಯಾಮರಾ ಕಣ್ಣಿಗೂ ಸಿಗುತ್ತಿಲ್ಲ

ಟ್ರೇಲರ್‌ ಬಿಡುಗಡೆ ಮಾಡಿ ಮಾತನಾಡಿದ ನಟ ವಸಿಷ್ಠ ಸಿಂಹ ಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಟ್ರೇಲರ್ ಬಹಳಾನೇ ಖುಷಿ ಕೊಡ್ತು. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದ್ದಾರೆ.

ನಿರ್ದೇಶಕ ಶ್ರೀಧರ್ ಶಿಕಾರಿಪುರ ಮಾತನಾಡಿ ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನಮ್ಮ ಸುತ್ತಮುತ್ತ ಇರುವವರ ಕಥೆಯೇ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರದ ಸಿನಿಮಾವಿದು. ಬಾಕ್ಸಿಂಗ್ ನಲ್ಲಿ ಅಪಾರ ಆಸಕ್ತಿ ಇರುವ ಹುಡುಗನ ಬದುಕಿನಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆಯಲಾದ ಕಥೆ ಚಿತ್ರದಲ್ಲಿದೆ. ಪ್ರೀತಿ, ಸೆಂಟಿಮೆಂಟ್ ಎಳೆಯನ್ನೂ ಹೊತ್ತ ಈ ಚಿತ್ರ ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ತಿಳಿಸಿದ್ದಾರೆ.

ನಾಯಕ ನಟ ನವೀನ್ ಶಂಕರ್ ಮಾತನಾಡಿ ಗುಳ್ಟು ನಂತರ ಕೇಳಿದ ಇಂಟ್ರಸ್ಟಿಂಗ್ ಸಬ್ಜೆಕ್ಟ್ ಇರುವ ಕಥೆ ಇದಾಗಿದೆ. ಚಿತ್ರದಲ್ಲಿ ಆದಿ ಪಾತ್ರವನ್ನು ನಿರ್ವಹಿಸಿದ್ದೇನೆ. ಬಾಕ್ಸಿಂಗ್ ನಲ್ಲಿ ಸಾಧನೆ ಮಾಡಬೇಕು ಎಂದುಕೊಂಡಿರುವ ಹುಡುಗನ ಪಾತ್ರ. ಗುಳ್ಟು ಸಿನಿಮಾಗಿಂತ ಡಿಫ್ರೆಂಟ್ ಆದ ಪಾತ್ರವನ್ನು ಇಲ್ಲಿ ನಿರ್ವಹಿಸಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಡಿಸೆಂಬರ್ 2ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಮನವಿ ಮಾಡಿದ್ದಾರೆ.

ನಾಯಕ ನಟಿ ಐಶಾನಿ ಶೆಟ್ಟಿ ಮಾತನಾಡಿ ನಿರ್ದೇಶಕರು ಕ್ರೈಂ ಡ್ರಾಮಾ ಸಿನಿಮಾ ಎಂದಾಗ ನಾನು ಸ್ವಲ್ಪ ಯೋಚನೆ ಮಾಡ್ದೆ, ಆದ್ರೆ ಕಥೆ ಕೇಳಿ ತುಂಬಾ ಖುಷಿ ಆಯ್ತು. ಇಲ್ಲಿವರೆಗೂ ನಾನು ಮಾಡಿರುವ ಪಾತ್ರಕ್ಕಿಂತ ಕಂಪ್ಲೀಟ್ ಡಿಫ್ರೆಂಟ್ ಆಗಿರುವ ಪಾತ್ರ ನಿರ್ವಹಿಸಿದ್ದೇನೆ. ಶ್ರೇಯ ಎನ್ನುವ ಪಾತ್ರವನ್ನು ನಿರ್ವಹಿಸಿದ್ದೇನೆ. ಡೋಂಟ್ ಕೇರ್ ಆಟಿಟ್ಯೂಡ್ ಇರುವ ಬೋಲ್ಡ್ ಹುಡುಗಿ ಪಾತ್ರ. ಈ ಚಿತ್ರದ ಭಾಗವಾಗಿರೋದಕ್ಕೆ ತುಂಬಾ ಖುಷಿ ಇದೆ. ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಎಲ್ಲರೂ ಈ ಚಿತ್ರಕ್ಕೆ ಸಪೋರ್ಟ್ ಮಾಡಿ ಎಂದು ಹೇಳಿದ್ದಾರೆ.

ಇನ್ನು ಚಿತ್ರ ತಂಡದಲ್ಲಿ ದೊಡ್ಡ ತಾರಾ ಬಳಗವೇ ಇದ್ದು ಗುಳ್ಟು ಖ್ಯಾತಿಯ ನವೀನ್ ಶಂಕರ್ ನಾಯಕನಾಗಿ ನಟಿಸಿದ್ದಾರೆ, ನಾಯಕಿಯಾಗಿ ಸ್ಯಾಂಡಲ್ವುಡ್ ಶಾಕುಂತಲೆ ಐಶಾನಿ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಇನ್ನುಳಿದಂತೆ ತಾರಾಗಣದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಕರಿ ಸುಬ್ಬು, ದಿ || ಮೋಹನ್ ಜುನೇಜಾ, ಕನ್ನಡಿಗ ಚಿತ್ರ ಖ್ಯಾತಿಯ ಜಯಶ್ರೀ ಆರಾಧ್ಯ, ಶಾಂಭವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ಓಂಕಾರ್ ನಿರ್ಮಾಣ ಮಾಡಿದ್ದು ಸಹ ನಿರ್ಮಾಪಕರಾಗಿ ಕಾಂಚನ್ ಹಾಗು ಗೌತಮಿ ರೆಡ್ಡಿ ಸಾಥ್ ನೀಡಿದ್ದಾರೆ. ಕ್ಯಾಮರಾಮ್ಯಾನ್ ಆಗಿ ಕೀರ್ತನ್ ಪೂಜಾರಿ ಕೆಲಸ ಮಾಡಿದ್ದು ಬಕ್ಕೇಶ್ ಹಾಗು ಕಾರ್ತಿಕ್ ಸಂಗೀತ ಸೋಯೋಜಿಸಿದ್ದಾರೆ ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ.

Wishing the best geleya @Nwinshankar for #DharaniMandalaMadhyadolage https://t.co/uGtHl4slwJ pic.twitter.com/xdmqYiXfGl

— Dhananjaya (@Dhananjayaka) November 26, 2022
RS 500
RS 1500

SCAN HERE

Pratidhvani Youtube

«
Prev
1
/
3858
Next
»
loading
play
ಪರಶುರಾಮ ತಪ್ಪಸಿನ ಫಲದಿಂದ ತುಳುನಾಡು ಹುಟ್ಟಿದ್ದು | CM Bommai |
play
| Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ
«
Prev
1
/
3858
Next
»
loading

don't miss it !

ಸಿದ್ದರಾಮಯ್ಯ ಕಂಡರೆ ಅಣ್ಣ ತಮ್ಮನಿಗೆ ಯಾಕೆ ಇಷ್ಟೊಂದು ಹೊಟ್ಟೆಹುರಿ..? 
ರಾಜಕೀಯ

ಸಿದ್ದರಾಮಯ್ಯ ಕಂಡರೆ ಅಣ್ಣ ತಮ್ಮನಿಗೆ ಯಾಕೆ ಇಷ್ಟೊಂದು ಹೊಟ್ಟೆಹುರಿ..? 

by ಕೃಷ್ಣ ಮಣಿ
January 27, 2023
Sumalatha: ಸಂಸದೆ ಸುಮಲತಾ ವೇದಿಕೆ ಹೇರುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಿತ್ತಾಟ | Pratidhvani
ರಾಜಕೀಯ

Sumalatha: ಸಂಸದೆ ಸುಮಲತಾ ವೇದಿಕೆ ಹೇರುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಿತ್ತಾಟ | Pratidhvani

by ಪ್ರತಿಧ್ವನಿ
January 23, 2023
ಹಾಸನದಲ್ಲಿ ಟಿಕೆಟ್ ಯಾರಿಗೆ..? ಕುಮಾರಸ್ವಾಮಿ ವಿರೋಧಕ್ಕೆ ಕಾರಣ ಏನು..?
ರಾಜಕೀಯ

ಹಾಸನದಲ್ಲಿ ಟಿಕೆಟ್ ಯಾರಿಗೆ..? ಕುಮಾರಸ್ವಾಮಿ ವಿರೋಧಕ್ಕೆ ಕಾರಣ ಏನು..?

by ಮಂಜುನಾಥ ಬಿ
January 27, 2023
D.K Shivakumar: ಬೀದಿ ವ್ಯಾಪಾರಿಗಳ ಹತ್ರ ಪೊಲೀಸರು 1 ಕೋಟಿ ಕಲೆಕ್ಷನ್ ಮಾಡವ್ರೆ | Pratidhvani
ರಾಜಕೀಯ

D.K Shivakumar: ಬೀದಿ ವ್ಯಾಪಾರಿಗಳ ಹತ್ರ ಪೊಲೀಸರು 1 ಕೋಟಿ ಕಲೆಕ್ಷನ್ ಮಾಡವ್ರೆ | Pratidhvani

by ಪ್ರತಿಧ್ವನಿ
January 23, 2023
PSI ಅಕ್ರಮಕ್ಕೆ ಸಿಕ್ಕಿದೆ ಮಗದೊಂದು ಸಾಕ್ಷ್ಯ..!? ಸರ್ಕಾರದಿಂದ ಜಾಣನಡೆ !!
Uncategorized

PSI ಅಕ್ರಮಕ್ಕೆ ಸಿಕ್ಕಿದೆ ಮಗದೊಂದು ಸಾಕ್ಷ್ಯ..!? ಸರ್ಕಾರದಿಂದ ಜಾಣನಡೆ !!

by ಕೃಷ್ಣ ಮಣಿ
January 26, 2023
Next Post
ಗುಜರಾತ್‌; ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ಗುಜರಾತ್‌; ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ಮೈಸೂರು; ಮುರುಘಾಶ್ರೀ ಪ್ರಕರಣದಿಂದ ಹಿಂದೆ ಸರಿಯುವಂತೆ 3 ಕೋಟಿ ರೂಪಾಯಿ ಆಮಿಷ

ಮೈಸೂರು; ಮುರುಘಾಶ್ರೀ ಪ್ರಕರಣದಿಂದ ಹಿಂದೆ ಸರಿಯುವಂತೆ 3 ಕೋಟಿ ರೂಪಾಯಿ ಆಮಿಷ

D.K Shivakumar: ನಾವು ತಪ್ಪು ಮಾಡಿದ್ರೆ ತನಿಖೆ ಮಾಡ್ಲಿ ಎಂದು ಕೆಪಿಸಿಸಿ ಅಧ್ಯಕ್ಷ ಸವಾಲು | Pratidhvani |

D.K Shivakumar: ನಾವು ತಪ್ಪು ಮಾಡಿದ್ರೆ ತನಿಖೆ ಮಾಡ್ಲಿ ಎಂದು ಕೆಪಿಸಿಸಿ ಅಧ್ಯಕ್ಷ ಸವಾಲು | Pratidhvani |

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist