![](https://pratidhvani.com/wp-content/uploads/2024/04/shobha-karandlaje-relies-more-on-pm-modi-less-on-her-record-1024x1024.webp)
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕೆ.ಆರ್.ಪುರಂನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ರು.
![](https://pratidhvani.com/wp-content/uploads/2024/04/WhatsApp-Image-2024-04-08-at-2.08.29-PM-771x1024.jpeg)
ಈ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಹಳ ವೇಗವಾಗಿ ಬಂದ ವ್ಯಕ್ತಿಗೆ ಶೋಭಾ ಕರಂದ್ಲಾಜೆ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ
![](https://pratidhvani.com/wp-content/uploads/2024/04/WhatsApp-Image-2024-04-08-at-2.08.30-PM-1024x576.jpeg)