• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಸ್ತಿಪಟುಗಳು ಪರೋಕ್ಷ ಪ್ರಭುತ್ವಕ್ಕೆ ಗುಲಾಮರಾಗಬೇಕೆ? ಅನ್ಯಾಯದ ವಿರುದ್ಧ ದನಿ ಎತ್ತಬಾರದೇ?

ಪ್ರತಿಧ್ವನಿ by ಪ್ರತಿಧ್ವನಿ
June 5, 2023
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕುಸ್ತಿಪಟುಗಳು ಪರೋಕ್ಷ ಪ್ರಭುತ್ವಕ್ಕೆ ಗುಲಾಮರಾಗಬೇಕೆ? ಅನ್ಯಾಯದ ವಿರುದ್ಧ ದನಿ ಎತ್ತಬಾರದೇ?
Share on WhatsAppShare on FacebookShare on Telegram

ಕಳೆದ ವಾರ ಪ್ರಧಾನಿ ಮೋದಿ (PM MODI) ಹೊಸ ಸಂಸತ್ತನ್ನು (NEW parliment house) ಉದ್ಘಾಟನೆ ಮಾಡುತ್ತಿರುವಾಗ ದೇಶಕ್ಕಾಗಿ ಪದಕ ಗೆದ್ದ ಕ್ರೀಡಾ ಪಟುಗಳು ತ್ರಿವರ್ಣ ಧ್ವಜ (flag) ಜೊತೆಗೆ ನೆಲದಲ್ಲಿ ಬಿದ್ದು ಪ್ರತಿರೋಧ ಒಡ್ಡುತ್ತಿರುವ ಚಿತ್ರವನ್ನು ನೋಡಿದಾಗ, ಭಾರತದ ಕ್ರೀಡೆ (Sports) ಎಲ್ಲಿ ನಿಂತಿದೆ ಎಂಬ ಪ್ರಶ್ನೆಗೆ ಉತ್ತರವಾಗುತ್ತದೆ. ಭಾರತದ ಮಹಿಳಾ ಕುಸ್ತಿಪಟುಗಳು (Women wrestlers) ತಮ್ಮ ಪದಕಗಳನ್ನು (Medals) ಗಂಗಾನದಿಯಲ್ಲಿ ಎಸೆಯಲು ಹೊರಟಾಗ ʼಈ ದೇಶದಲ್ಲಿ ನಮಗಾಗಿ ಏನೂ ಉಳಿದಿಲ್ಲʼ ಎಂದ ವಾಕ್ಯ ದೇಶದ ಕ್ರೀಡೆಯ ಭವಿಷ್ಯವಾಣಿಯಂತೆ ಕಂಡರೆ ತಪ್ಪೇನಿಲ್ಲ.

ADVERTISEMENT

ಕಳೆದ ಕೆಲವು ತಿಂಗಳ ಕಾಲ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕ್ರೀಡಾಪಟುಗಳನ್ನು ನಮ್ಮ ಪ್ರಭುತ್ವ ಹೇಗೆ ನಡೆದುಕೊಂಡಿದೆ ಎಂಬುದನ್ನು ಇಡಿ ವಿಶ್ವವೇ ನೋಡುತ್ತಿದೆ. ಲೈಂಗಿಕ ದೌರ್ಜನ್ಯದ (Sexual assault) ಆರೋಪ ಮಾಡಿರುವ ಸಂತ್ರಸ್ತೆಯರ ಜೊತೆಗೆ ಸಾಕ್ಷಿ ನೀಡುವಂತೆ ಚೂರೂ ಮಾನವೀಯತೆ ಇಲ್ಲದೆ ಆಡಳಿತರೂಢ ಪಕ್ಷ ಕೇಳುತ್ತಿದೆ. ಪದಕ ಗೆದ್ದಾಗ ಕ್ರೀಡಾಪಟುಗಳ ಜೊತೆಗೆ ಸೆಲ್ಫಿ ಪಡೆದುಕೊಂಡ ಪ್ರಧಾನಿ ಮೋದಿ (PM MODI) ರಾಜಪ್ರಭುತ್ವದ ರಾಜದಂಡಕ್ಕೆ ಸಾಷ್ಟಾಂಗ ನಮಸ್ಕಾರ ಮಾಡುತ್ತಿದ್ದಾರೆಯೆ ಹೊರತು, ಮಹಿಳಾ ಸಾಧಕಿಯರ ಬಗ್ಗೆ ತುಟಿ ಬಿಚ್ಚುತ್ತಿಲ್ಲ.

ಪ್ರಜಾಪ್ರಭುತ್ವದ ದೇಶದ ಸಂಸತ್ತನ್ನು ಬಹುಸಂಖ್ಯಾತ ಧಾರ್ಮಿಕ ವಿಧಿವಿಧಾನದ ಮೂಲಕ ಉದ್ಘಾಟನೆ ಮಾಡುತ್ತಿರುವಾಗ, ಪ್ರತಿಭಟನೆ ಎಂಬ ಪ್ರಜಾಪ್ರಭುತ್ವದ ಪ್ರಮುಖ ಅಸ್ತ್ರವನ್ನು ಕುಸ್ತಿಪಟುಗಳಿಗೆ ನಿರಾಕರಿಸಿ, ಅವರ ಆಗ್ರಹಗಳಿಗೆ ಬೆಲೆ ನೀಡದೆ ಅವರನ್ನು ಅಮಾನವೀಯವಾಗಿ ಬಂಧಿಸಿದ್ದು ಭಾರತ ಒಕ್ಕೂಟ ವಿಶ್ವದ ಮುಂದೆ ತಲೆತಗ್ಗಿಸುವಂತೆ ನಡೆದುಕೊಳ್ಳಲಾಯಿತು.

ಒಲಿಂಪಿಕ್ಸ್ಗೆ ಪ್ರವೇಶಿಸುವ ಕ್ರೀಡಾಪಟುಗಳೆಂದರೆ ಕೋಟ್ಯಾಂತರ ಭಾರತೀಯರಿಗೆ ಮ್ಯಾಜಿಕ್ ಮಾಡುವ ಮಾಂತ್ರಿಕರು. ಜಾತ್ಯಾತೀರ ದೇಶದ ನಾಗರಿಕರಾದ ಭಾರತೀಯರಿಗೆ ಈ ಸಾಧಕರೇ ನಿಜವಾದ ದೇವತೆಗಳು. ಅವರ ಗೆಲುವುಗಳೇ ರಾಷ್ಟ್ರೀಯ ಹಬ್ಬ. ಈ ಹೆಮ್ಮೆಯ ಕ್ರೀಡಾಪಟುಗಳು ನಮ್ಮ ಪ್ರಜಾಪ್ರಭುತ್ವದ ಅತ್ಯುತ್ತಮ ಭೌತಿಕ ಪ್ರತಿನಿಧಿಗಳು. ಆದರೆ ಅವರನ್ನು, ಅವರ ಮಾತುಗಳನ್ನು ಕೇಳಿಸಿಕೊಳ್ಳದೆ ಆಡಳಿತರೂಢ ಪಕ್ಷ, ಅವರ ಬೆಂಬಲಿಗರು ಅವರನ್ನು ಕೆಟ್ಟದಾಗಿ ನಡೆಸಿಕೊಂಡವು. ರಾಜ ಪ್ರಭುತ್ವದ ಸೆಂಗೋಲ್ (Sengol) ಸಿಂಹಾಸನರೂಢವಾಗುತ್ತಿದ್ದಾಗ, ಪ್ರಜಾಪ್ರಭುತ್ವದ ಪ್ರತಿನಿಧಿಗಳನ್ನು ನೆಲಕ್ಕೆ ಕೊಡವಿ ಹಾಕಿದ್ದು ಪ್ರಜಾಪ್ರಭುತ್ವದ ವಿಪರ್ಯಾಸವಲ್ಲದೆ ಮತ್ತೇನು?

ದೇಶದ ಕೀರ್ತಿ ಪತಾಕೆ ಎತ್ತಿದ ಸಾಧಕರು ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಹೊರಗೆ ತಮ್ಮ ಹಕ್ಕಿಗಾಗಿ ಪ್ರತಿಭಟನೆಯನ್ನು ನಡೆಸುತ್ತಿರುವಾಗ, ಅವರು ಲೈಂಗಿಕ ಆರೋಪ ಹೊರಿಸಿದ ಆರೋಪಿ, ಬ್ರಿಜ್ ಭೂಷಣ್ ಸಂಸತ್ತಿನಲ್ಲಿ ಕಾಣಿಸಿಕೊಂಡರು. ಅನ್ಯಾಯವಾಗಿದೆ ಎಂದು ಹೇಳಿ ಪ್ರತಿಭಟಿಸಿದವರ ವಿರುದ್ಧ ಗಲಭೆʼ, ‘ಕ್ರಿಮಿನಲ್ ದಾಳಿʼ, ‘ಕಾನೂನುಬಾಹಿರ ಸಭೆ’ ‘ಅವಿಧೇಯತೆ’ ಸೇರಿದಂತೆ ಏಳು ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ತಿಂಗಳುಗಳ ಕಾಲ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಂಯಮವನ್ನು ಗಮನಿಸಿದರೆ, ಇದು ನಗು ತರಿಸುತ್ತದೆ.

ಕುಸ್ತಿ ಪಂದ್ಯದಲ್ಲಿ ಬೆನ್ನು ನೆಲಕ್ಕೆ ತಾಗುವುದು ಎಂದರೆ ಕುಸ್ತಿ ಪಂದ್ಯ ಸೋತಂತೆ. ಮೊನ್ನೆಯ ಪ್ರತಿಭಟನೆಯಲ್ಲಿ ಕುಸ್ತಿ ಆಟದ ಚಾಂಪಿಯನ್ ಗಳು ತಮ್ಮ ಪ್ರತಿಭಟನೆಯನ್ನು ತಡೆಯಲು ಬಂದ ಯಾವುದೆ ಪೊಲೀಸರನ್ನು ಅನಾಮತ್ತಾಗಿ ಎತ್ತಿ ಬಿಸಾಕಬಹುದಿತ್ತು. ಆದರೆ ಕುಸ್ತಿಪಟುಗಳ ಬೆನ್ನು ನೆಲಕ್ಕೆ ಸ್ಪರ್ಶಿಸಿದರೂ ಕೂಡಾ ಅವರು ಪ್ರತಿರೋಧ ತೋರುತ್ತಿದ್ದರೆ ವಿನಃ, ಪೊಲೀಸರ ಮೇಲೆ ದಾಳಿ ಮಾಡಿರಲಿಲ್ಲ. ಆದರೂ, ಪ್ರಜಾಪ್ರಭುತ್ವದ ಮೇಲೆ ಇಷ್ಟೆಲ್ಲಾ ನಂಬಿಕೆಯಿಟ್ಟ ಕುಸ್ತಿಪಟುಗಳ ವಿರುದ್ಧ ಎಫ್ಐಆರ್ ದಾಖಲಿಸಲಾಯಿತು. ಹಾಗಾಗಿಯೆ ಅವರು ತಾವು ಜೀವನ ಪರ್ಯಂತ ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗಾನದಿಗೆ ಎಸೆಯುವಾಗ ʼಈ ದೇಶದಲ್ಲಿ ನಮಗಾಗಿ ಏನೂ ಉಳಿದಿಲ್ಲʼ ಎಂದು ಹೇಳಿದ್ದು. ಹಾಗೂ ಈ ಹೇಳಿಕೆ ದೇಶದ ಕ್ರೀಡೆಯ ಕರಾಳ ಭವಿಷ್ಯವಾಗಿ ಕಂಡಿದ್ದು ಮಾತ್ರ ಸುಳ್ಳಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಆಳುವ ಸರ್ಕಾರ ಈ ಬಗ್ಗೆ ಸ್ವಲ್ಪ ಗಮನಹರಿಸಿ, ಈ ಸರ್ಕಾರವನ್ನ ಜನ ಆಯ್ಕೆ ಮಾಡಿದ್ದಾರೆ. ನಾವು ಜನರ ಮಾತು ಕೇಳಬೇಕು ಎಂಬ ಸೂಕ್ಷ್ಮ ಪ್ರಜ್ಞೆಯನ್ನ ಬೆಳೆಸಿಕೊಳ್ಳಬೇಕಾಗಿದೆ. ಒಂದು ವೇಳೆ ಹಾಗಾಗದಿದ್ದ ಮತ್ತೊಮ್ಮೆ ರಾಜಪ್ರಭುತ್ವಕ್ಕೆ ಪರೋಕ್ಷವಾಗಿ ಸರ್ಕಾರ ಮನ್ನಣೆ ನೀಡಿದ ಹಾಗಾಗುವುದರಲ್ಲಿ ಅನುಮಾನವಿಲ್ಲ.

Tags: #pmmodi #narendramodi #bangalore #pmmodiinbengaluru pmnarendranodiBJPBrij Bhushan Sharan SinghCongress PartymedalsModiModi GovernmentNEW parliment housePM Modisexual assaultwomen wrestlers
Previous Post

ಪ್ರತಿಭಟನೆಯಿಂದ ಹಿಂದೆ ಸರಿದಿದ್ದೇನೆಂಬುದು ಕೇವಲ ವದಂತಿ : ಸಾಕ್ಷಿ ಮಲಿಕ್​ ಸ್ಪಷ್ಟನೆ

Next Post

ವಿದ್ಯುತ್​ ದರ ಹೆಚ್ಚಳ ವಿಚಾರ : ಕಾಂಗ್ರೆಸ್​ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ವಿದ್ಯುತ್​ ದರ ಹೆಚ್ಚಳ ವಿಚಾರ : ಕಾಂಗ್ರೆಸ್​ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ವಿದ್ಯುತ್​ ದರ ಹೆಚ್ಚಳ ವಿಚಾರ : ಕಾಂಗ್ರೆಸ್​ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada