
ಚಾಮರಾಜನಗರದ ಕೊಳ್ಳೇಗಾಲದಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ಖಂಡನೆ ವ್ಯಕ್ತಪಡಿಸಿರುವ ಸಂವಿಧಾನ ಸಂರಕ್ಷಣಾ ಸಮಿತಿ ಕಾರ್ಯಕರ್ತರು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರದಿಂದ ಭರಚುಕ್ಕಿಗೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ರಸ್ತೆ ಬದಿಯಲ್ಲಿ ನಿಂತಿದ್ದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿ ಧಿಕ್ಕಾರದ ಘೋಷಣೆ ಮೊಳಗಿಸಿದ್ದಾರೆ. SCSP TSP ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿದ್ದಾರೆ.

ವಿಧಾನಸಭೆಯಲ್ಲೂ ಜೆಡಿಎಸ್-ಬಿಜೆಪಿ ಪಕ್ಷಗಳು ಈ ವಿಚಾರದ ಮೇಲೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಗ ಆ ಹಣವನ್ನು SC-ST ಸಮುದಾಯಕ್ಕೆ ನೀಡಲಾಗ್ತಿರುವ ಗ್ಯಾರಂಟಿ ಯೋಜನೆಗೆ ಬಳಸಲಾಗಿದೆ ಎನ್ನುವ ಸಬೂಬು ನೀಡಿತ್ತು ಸರ್ಕಾರ. ಇದೀಗ ಆಕ್ರೋಶ ವ್ಯಕ್ತವಾಗಿದೆ. ಕೃಷ್ಣಮಣಿ





