• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಪ್ರತಿಧ್ವನಿ by ಪ್ರತಿಧ್ವನಿ
January 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್, ಸಿನಿಮಾ
0
Share on WhatsAppShare on FacebookShare on Telegram

ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ: ಸಿ.ಎಂ

ADVERTISEMENT

ಸೂಟು ಬೂಟು ಹಾಕಿಕೊಂಡು ಬಂದವರನ್ನು ಕೂರಿಸಿ ಮಾತನಾಡಿಸಿ, ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಬಿಡಿ: ಸಿ.ಎಂ ಕರೆ

ಬೆಂಗಳೂರು ಜ 3: ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳಿಗೆ ಕರೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು.

ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ ಎಂದು ಸೂಚಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯಲ್ಲಿ ಮಾಡಿರುವ ಭಾಷಣವನ್ನು ನೀವೆಲ್ಲಾ ಓದಬೇಕು. ಐತಿಹಾಸಿಕ ಕಾರಣಗಳಿಂದಾಗಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಇದನ್ನು ಹೋಗಲಾಡಿಸಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಈ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀವಿ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿ ಆಹಾರ, ಶಿಕ್ಷಣ, ಮಾಹಿತಿ ಹಕ್ಕುಗಳನ್ನು ಮಾಡುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಜನರ ಹಕ್ಕುಳನ್ನಾಗಿ ಮಾಡಿದರು. ಇವೆಲ್ಲವೂ ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ಉದ್ದೇಶವನ್ನೇ ಹೊಂದಿವೆ. ಆದ್ದರಿಂದ ಮಧ್ಯವರ್ತಿಗಳೇ ಇಲ್ಲದ ನಮ್ಮ ಗ್ಯಾರಂಟಿಗಳನ್ನು ಮನೆ ಮನೆ ತಲುಪಿಸಿ ಎಂದರು.

ಅಂಬೇಡ್ಕರ್ ಅವರಿಂದ ಬುದ್ದ, ಬಸವ, ಗಾಂಧಿ ಎಲ್ಲರೂ ಸಮಾಜದ ಸಮಾನತೆಗಾಗಿ, ತಾರತಮ್ಯದ ಸಮಾಜದ ಬದಲಾವಣೆಗಾಗಿ ಶ್ರಮಿಸಿದರು. ಆದರೂ ಇನ್ನೂ ಅಸಮಾನತೆ ಹೋಗಿಲ್ಲ ಎಂದರೆ ಎಲ್ಲರಿಗೂ ಸಮಾನ ಅವಕಾಶ ಸಿಗದೇ ಇರುವುದೇ ಮುಖ್ಯ ಕಾರಣ. ಆದ್ದರಿಂದ ಸಮಾಜದಲ್ಲಿ ಪಟ್ಟಭದ್ರರು ಇನ್ನೂ ಹೆಚ್ಚಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸೂಟು ಬೂಟು ಹಾಕಿಕೊಂಡು ಬರುವವರನ್ನು ಕುರ್ಚಿಯಲ್ಲಿ ಕೂರಿಸಿ ಮಾತನಾಡಿಸುವುದನ್ನು, ಮಾಸಲು ಬಟ್ಟೆಯಲ್ಲಿ ಬರುವ ಬಡವರನ್ನು ನಿರ್ಲಕ್ಷ್ಯದಿಂದ ಕಾಣುವುದು ನಮ್ಮ ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಕಿತ್ತೊಗೆದು ಪ್ರತಿಯೊಬ್ಬರಿಗೂ ಸಮಾಜದಲ್ಲಿ ಅವಕಾಶಗಳು ಸಿಗುವಂತೆ ನೋಡಿಕೊಳ್ಳಿ ಎಂದು ಕರೆ ನೀಡಿದರು.

ಎಲ್ಲಿಯವರೆಗೂ ಜಾತಿ, ವರ್ಗ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಅಸಮಾನತೆ ಇರುತ್ತದೆ.

ಕೆಎಎಸ್ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.

ಕೆಎಎಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ , ಸೇವೆ ಮುಖ್ಯ ಎಂದರು.

KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ದವಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ.

ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶಿವಸ್ವಾಮಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಅವರು ಉಪಸ್ಥಿತರಿದ್ದರು.

Tags: BJPCongress PartyDr AmbedkarGovindarajuKAS OfficersShalini RajanishShivaswamysiddaramaiahVidhanasoudaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಿವರಾತ್ರಿಗೆ ‘ರಾಕ್ಷಸ’ನಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದರ್ಶನ

Next Post

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ:ಸಚಿವ ಕೆ.ಜೆ.ಜಾರ್ಜ್

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
Next Post

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ:ಸಚಿವ ಕೆ.ಜೆ.ಜಾರ್ಜ್

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada