ಸ್ಯಾಂಡಲ್ವುಡ್ನಲ್ಲಿ ಭಾರೀ ಸದ್ದು ಮಾಡಿದ್ದ ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ನಡುವಿನ ಮಿಟೂ ಪ್ರಕರಣದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಕಬ್ಬನ್ ಪಾರ್ಕ್ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ನಟಿ ಶ್ರುತಿ ಹರಿಹರನ್ಗೆ ಇದೀಗ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ನಿಂದ ನೋಟಿಸ್ ಜಾರಿ ಆಗಿದೆ. ಈ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧರ ಸಲ್ಲಿಸುವಂತೆ ನಟಿಗೆ ಸೂಚನೆ ನೀಡಲಾಗಿದೆ.

ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಕಬ್ಬನ್ಪಾರ್ಕ್ ಪೊಲೀಸರು ಈ ಪ್ರಕರಣ ಸಂಬಂಧ 2022ರ ಜನವರಿ ತಿಂಗಳಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಕಬ್ಬನ್ಪಾರ್ಕ್ ಪೊಲೀಸರು ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಪ್ರಶ್ನಿಸಿ ನಟಿ ಶ್ರುತಿ ಹರಿಹರನ್ ಕೋರ್ಟ್ ಮೆಟ್ಟಿಲೇರಿದ್ದರು.
ಬಿ ರಿಪೋರ್ಟ್ ಚಾಲೆಂಜ್ ಮಾಡಿದ್ದ ಶ್ರುತಿ ಹರಿಹರನ್ ನೋಟಿಸ್ ನೀಡಿರುವ ಕಬ್ಬನ್ಪಾರ್ಕ್ ಠಾಣಾ ಪೊಲೀಸರು ಈ ಪ್ರಕರಣ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡುವಂತೆ ಕೇಳಿದ್ದಾರೆ. ಕೋರ್ಟ್ನಲ್ಲಿ ಅರ್ಜಿ ವಿಚಾರಣೆಯ ಬಳಿಕ ಶ್ರುತಿ ಹರಿಹರನ್ಗೆ ಈ ನೋಟಿಸ್ ನೀಡಲಾಗಿದೆ . ಕೋರ್ಟ್ನ ನೋಟಿಸ್ ಬಳಿಕ ಶ್ರುತಿ ಹರಿಹರನ್ ಸೂಕ್ತ ಸಾಕ್ಷ್ಯಾಧರ ಸಲ್ಲಿಸುವಲ್ಲಿ ವಿಫಲರಾದಲ್ಲಿ ಕಬ್ಬನ್ಪಾರ್ಕ್ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ನ್ನು ಕೋರ್ಟ್ ಮಾನ್ಯ ಮಾಡಲಿದೆ.