• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಿಮ್ಮ ಸಂಕಷ್ಟ ನಿವಾರಣೆಗೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ; ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 3, 2021
in ಕರ್ನಾಟಕ, ರಾಜಕೀಯ
0
ನಿಮ್ಮ ಸಂಕಷ್ಟ ನಿವಾರಣೆಗೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ; ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

‘ಕೋವಿಡ್ ಸಂಕಷ್ಟ ನಿವಾರಣೆಗೆ ನಾನು ಹಾಗೂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ADVERTISEMENT

ಕೋವಿಡ್ ಸಂಕಷ್ಟಪೀಡಿತರಿಗೆ ಸಾಂತ್ವನ ಹೇಳಿ, ಅವರಿಗೆ ಪರಿಹಾರ ಸಿಗುವಂತೆ ಮಾಡಲು ಕಾಂಗ್ರೆಸ್ ಒಂದು ತಿಂಗಳ ಕಾರ್ಯಕ್ರಮ ಹಮ್ಮಿಕೊಂಡಿದೆ. ನಮ್ಮ ಕಾರ್ಯಕರ್ತರು ನಿಮ್ಮ ಮನೆ ಬಾಗಿಲಿಗೆ ಬಂದಾಗ, ಕೋವಿಡ್ ನಿಂದ ನಿಮಗಾಗಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಕೊಡಿ. ನಾನು ಹಾಗೂ ಸಿದ್ದರಾಮಯ್ಯನವರು ವಿಧಾನಸೌಧದಲ್ಲಿ ನಿಮ್ಮ ಪರ ಹೋರಾಟ ಮಾಡುತ್ತೇವೆ’ ಎಂದೂ ಅವರು ತಿಳಿಸಿದ್ದಾರೆ.

ರಾಜಾಜಿನಗರದ ಮಂಜುನಾಥನಗರದಲ್ಲಿ ಆಹಾರ ಕಿಟ್ ಗಳ ವಿತರಣೆ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ, ಮಾತನಾಡಿದ ಡಿ.ಕೆ. ಶಿವಕುಮಾರ್ ‘ಈ ಭಾಗದಲ್ಲಿ ನಮ್ಮ ನಾಯಕರು ನೂರಾರು ದಿನಗಳಿಂದ ಬಡವರಿಗೆ ಆಹಾರ ಕಿಟ್ ಗಳನ್ನು ನೀಡುತ್ತಿದ್ದಾರೆ. ಕನಿಷ್ಟ ಸಾವಿರ ರೂಪಾಯಿ ಮೌಲ್ಯದ ಫುಡ್ ಕಿಟ್ ನೀಡುತ್ತಿದ್ದಾರೆ. ಕೃಷ್ಣಮೂರ್ತಿ ಅವರು ಶ್ರೀಮಂತರಲ್ಲ. ಅವರಿಗೆ ಅಧಿಕಾರವೂ ಇಲ್ಲ. ಅವರನ್ನು ನೀವು ಕಾರ್ಪೊರೇಷನ್ ಗೆ ಕಳುಹಿಸಿದ್ದೀರಿ ಎಂಬ ಕಾರಣಕ್ಕೆ ಅವರು ತಮ್ಮ ಕೈಲಾದ ಸಹಾಯವನ್ನು ನಿಮಗೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇಲ್ಲಿರುವವರೆಲ್ಲ ಕಾರ್ಮಿಕರು. ಕಳೆದ ವರ್ಷ ನಿಮಗೆ 10 ಸಾವಿರ ಕೊಡಿಸಲು ನಾನು ಹಾಗೂ ಸಿದ್ದರಾಮಯ್ಯನವರು ಹೋರಾಟ ಮಾಡಿದೆವು. ಸರ್ಕಾರ 5 ಸಾವಿರ ನೀಡುವುದಾಗಿ ಹೇಳಿತ್ತು. ಆದರೆ ಆ ಹಣ ನಿಮಗೆ ಬಂತಾ.? ಈ ವರ್ಷ ಘೋಷಿಸಿದ 2-3 ಸಾವಿರ ಪರಿಹಾರ ಬಂತಾ.? ಯಾರಿಗೂ ಬಂದಿಲ್ಲ. ನಮ್ಮ ಹೋರಾಟಕ್ಕೆ ಹೆದರಿ ಸರ್ಕಾರ ಕಳೆದ ವರ್ಷ 1900 ಕೋಟಿ, ಈ ವರ್ಷ ಸಾವಿರ ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಿತು. ಚಾಲಕರಿಗೆ 5 ಸಾವಿರ ನೀಡುತ್ತೇವೆ ಎಂದರು, ಅವರಿಗೂ ಹಣ ಬರಲಿಲ್ಲ. ಇದು ನುಡಿದಂತೆ ನಡೆಯದ ಸರ್ಕಾರ. ಅದಕ್ಕಾಗಿಯೇ ಇಂದು ಇಲ್ಲಿನ 5 ಸಾವಿರ ಜನಕ್ಕೆ ಫುಡ್ ಕಿಟ್ ನೀಡಲು ನಮ್ಮ ನಾಯಕರು ಮುಂದಾಗಿದ್ದಾರೆ.

ನಮ್ಮ ಶಾಸಕರು ಇರುವ ಕಡೆ ಮಾತ್ರವಲ್ಲ, ಎರಡು ಮೂರು ಬಾರಿ ನಮ್ಮ ಅಭ್ಯರ್ಥಿಗಳು ಸೋತಿರುವ ಕ್ಷೇತ್ರಗಳಲ್ಲೂ ಪಕ್ಷದ ವತಿಯಿಂದ ಬಡವರಿಗೆ ಸಹಾಯ ಹಸ್ತ ನೀಡಲಾಗಿದೆ. ಅಲ್ಲಿನ ಬೇರೆ ಪಕ್ಷದ ಶಾಸಕರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನಮ್ಮ ನಾಯಕರುಗಳು ಜನರಿಗೆ ಸಹಾಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಸೋತಿದ್ದರೂ ಸಂಕಷ್ಟದ ಸಮಯದಲ್ಲಿ ನಿಮ್ಮ ಕೈ ಬಿಡಲಿಲ್ಲ. ಇದು ಬೆಂಗಳೂರಿನ ವಿಚಾರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ನಮ್ಮವರು ಜನರ ಸಹಾಯಕ್ಕೆ ನಿಂತಿದ್ದಾರೆ. ಕೊರೋನಾ ಸಂತ್ರಸ್ತರಿಂದ ಅರ್ಜಿ ಹಾಕಿಸಿ, ಅವರಿಗೆ ಪರಿಹಾರ ಒದಗಿಸಲು ವಾರ್ಡ್ ವಾರು ತಂಡಗಳನ್ನು ರಚಿಸಿ ಜನರಿಗೆ ನೆರವಾಗಲು ಕಾರ್ಯಕ್ರಮ ರೂಪಿಸಿದ್ದೇವೆ. ಸತ್ತವರ ಕುಟುಂಬ, ಆಸ್ಪತ್ರೆಯಲ್ಲಿ ನರಳಾಡಿದವರು, ಉದ್ಯೋಗ, ಆದಾಯ ಕಳೆದುಕೊಂಡವರಿಗೆ ಆಗಿರುವ ನಷ್ಟ, ಸಮಸ್ಯೆಯನ್ನು ಪಟ್ಟಿ ಮಾಡಿಕೊಡಿ. ನಿಮ್ಮ ಪರವಾಗಿ ನಾನು ಹಾಗೂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಹೇಗೆ ಹೋರಾಟ ಮಾಡುತ್ತೇವೆ ಎಂಬುದನ್ನು ನೋಡಿ.

ನಿಮ್ಮ ನೋವಿಗೆ ಸರಕಾರದ ಯಾರೂ ಸ್ಪಂದಿಸಲಿಲ್ಲ. ಆಸ್ಪತ್ರೆಯಲ್ಲಿ ಹಾಸಿಗೆ ಸಿಗಲಿಲ್ಲ. ಪರಿಹಾರ ಪಡೆಯಲು ನೀವು ಆನ್ಲೈನ್ ನಲ್ಲಿ ಅರ್ಜಿ ಹಾಕಬೇಕಂತೆ. ಇದಕ್ಕಾಗಿಯೇ ನಾವು ಕಾರ್ಯಕ್ರಮ ರೂಪಿಸಿದ್ದು, ನಿಮ್ಮ ಮನೆಗೆ ನಮ್ಮ ಕಾರ್ಯಕರ್ತರು ಬರುತ್ತಾರೆ. ನಿಮಗೆ ಪರಿಹಾರ ಕೊಡಿಸಲು ನಾವು ಪ್ರಯತ್ನಿಸುತ್ತೇವೆ. ಮುಂದಿನ ಬಾರಿ ನೀವು ನಮ್ಮ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ನಿಮ್ಮ ಋಣ ಹೇಗೆ ತೀರಿಸುತ್ತೇವೆ ಎಂಬುದರ ಬಗ್ಗೆ ಮುಂದೆ ಮಾತನಾಡುತ್ತೇನೆ. ನಮ್ಮ ಚುನಾವಣಾ ಪ್ರಣಾಳಿಕೆ ಬಂದಾಗ ಏನು ಹೇಳಬೇಕೋ ಅದನ್ನು ಹೇಳುತ್ತೇವೆ’ ಎಂದು ತಿಳಿಸಿದ್ದಾರೆ.

Previous Post

ರಾಜ್ಯದಲ್ಲಿ ಅನ್ ಲಾಕ್ 3.0 ಜಾರಿ: ಕರೋನ ಮಾರ್ಗಸೂಚಿ ಪಾಲಿಸಲು ರಾಜ್ಯ ಸರ್ಕಾರ ವಿನಂತಿ

Next Post

ಸಚಿವ ಸುರೇಶಕುಮಾರ್ ‘ಪರೀಕ್ಷಾ ವ್ಯಾಪಾರಿ’ ಎಂದ ಶಿಕ್ಷಣ ತಜ್ಞರು!

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಸಚಿವ ಸುರೇಶಕುಮಾರ್ ‘ಪರೀಕ್ಷಾ ವ್ಯಾಪಾರಿ’ ಎಂದ ಶಿಕ್ಷಣ ತಜ್ಞರು!

ಸಚಿವ ಸುರೇಶಕುಮಾರ್ ‘ಪರೀಕ್ಷಾ ವ್ಯಾಪಾರಿ’ ಎಂದ ಶಿಕ್ಷಣ ತಜ್ಞರು!

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada