• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಾ.ಎಚ್.ಎಸ್.ದೊರೆಸ್ವಾಮಿ ಶತಮಾನದ ವ್ಯಕ್ತಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Any Mind by Any Mind
May 26, 2021
in ಕರ್ನಾಟಕ
0
ಡಾ.ಎಚ್.ಎಸ್.ದೊರೆಸ್ವಾಮಿ ಶತಮಾನದ ವ್ಯಕ್ತಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
Share on WhatsAppShare on FacebookShare on Telegram

ಹಿರಿಯ ಸ್ವಾತಂತ್ರ್ಯ ಸೇನಾನಿ, ನಾಡಿನ ಸಾಕ್ಷಿ ಪ್ರಜ್ಞೆ ಡಾ. ಎಚ್.ಎಸ್ ದೊರೆಸ್ವಾಮಿ ಅವರ ಅಕಾಲಿಕ ನಿಧನದಿಂದ ನಾಡು ಅನಾಥವಾಗಿದ್ದು ಅವರ ಅಕಾಲಿಕ ಸಾವಿನ ವಿಷಯ ತಿಳಿದ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ದೊರೆಸ್ವಾಮಿ ಅವರು ಕುರಿತು ಒಂದಷ್ಟು ವಿಷಯವನ್ನು ಪ್ರಸ್ತಾಪಿಸಿ ಸಂಪಾತ ಸೂಚಿಸಿದ್ದಾರೆ. ಅವರ ಸಂತಾಪ ಸಂದೇಶ ಈ ಕೆಳಗಿನಂತಿದೆ.

ADVERTISEMENT

೨೦ನೇ ಶತಮಾನವಿಡೀ ಬದುಕಿ, ೨೧ನೇ ಶತಮಾನದ ಮೊದಲೆರಡು ದಶಕಗಳನ್ನೂ ಕಂಡಿದ್ದ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿಯವರು ನಮಗೆಲ್ಲರಿಗೂ ಸ್ಫೂರ್ತಿಯ ಕೇಂದ್ರವಾಗಿದ್ದವರು. ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಸರಕಾರದ ಈಚಿನ ಭೂ ಕಬಳಿಕೆಯ ವಿರುದ್ಧದ ಅವರ ಚಟುವಟಿಕೆಗಳು ದೇಶ ವ್ಯಾಪ್ತಿ ಹಬ್ಬಿತ್ತು ಎಂದು ಬರೆದುಕೊಂಡಿದ್ದಾರೆ.

ಪತ್ರಕರ್ತರಾಗಿಯೂ ಅವರು ಪ್ರಸಿದ್ಧರು.

ನಮ್ಮನ್ನು ಅಗಲಿ ಹೋದ ದೊರೆಸ್ವಾಮಿಯವರು ನಮ್ಮೆಲ್ಲರ ಆತ್ಮಸಾಕ್ಷಿಯಾಗಿದ್ದರು. ತಪ್ಪು ಕಂಡಾಗ ಎಚ್ಚರಿಸಿ ಸರಿ ಕಂಡಾಗ ಬೆಂಬಲಿಸುತ್ತಿದ್ದ ಮಾರ್ಗದರ್ಶಕರಾಗಿದ್ದರು. ಇಳಿ ವಯಸ್ಸಿನಲ್ಲಿಯೂ ಕುಗ್ಗದೆ, ಜಗ್ಗದೆ, ಅನ್ಯಾಯ, ಅಕ್ರಮ ಕಂಡಾಯ ಬೀದಿಗಿಳಿಯುತ್ತಿದ್ದ ಅವರು ಎಲ್ಲರಿಗೂ ಮಾದರಿಯಾಗಿದ್ದರು.

ಅವರ ನಿಧನ ನನಗೆ ಆಘಾತ ಉಂಟು ಮಾಡಿದೆ. ಮನೆ ಹಿರಿಯನನ್ನು ಕಳೆದುಕೊಂಡ ದುಃಖ ನನ್ನದಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

ಕರ್ನಾಟಕ ಏಕೀಕರಣಕ್ಕೂ ದೊರೆಸ್ವಾಮಿ ಅವರು ದುಡಿದಿದ್ದರು. ಇಂದಿರಾಗಾಂಧೀ ಕಾಲದಲ್ಲಿ ತುರ್ತುಪರಿಸ್ಥಿತಿ ವಿರೋಧಿಸಿ ಜೈಲುವಾಸ ಅನುಭವಿಸಿದ್ದ ಅವರು, ಈಚೆಗೆ ವೇಗವಾಗಿ ಬೆಳೆಯುತ್ತಿರುವ ಫ್ಯಾಸಿಸಂನ ವಿರುದ್ಧವೂ ಧ್ವನಿ ಎತ್ತುತ್ತಿದ್ದರು.

ʼಗಾಂಧೀ ಮತ್ತು ಅಂಬೇಡ್ಕರ್ ಅವರುಗಳಲ್ಲಿ ಭಿನ್ನಾಭಿಪ್ರಾಯ ಇತ್ತೇ ಹೊರತು ವೈರತ್ವ ಇರಲಿಲ್ಲʼ ಎಂಬ ಅವರ ಮಾತು ಹೆಚ್ಚು ಸಮರ್ಪಕವಾಗಿತ್ತು.
ದೊರೆಸ್ವಾಮಿ ಅವರು ಕೊರೋನಾ ಗೆದ್ದು ಹೃದಯಾಘಾತದಿಂದ ಮೃತಪಟ್ಟಿರುವುದು ಅತೀವ ದುಃಖದ ಸಂಗತಿ. ಸ್ವಾತಂತ್ರ್ಯ ಹೋರಾಟಗಾರ ಶಾಮಣ್ಣ ಅವರ ಮೊಮ್ಮಗರಾಗಿದ್ದ ದೊರೆಸ್ವಾಮಿ ಅವರು ಹೋರಾಟದ ಸಂಸ್ಕಾರ ಮತ್ತು ಬದ್ಧತೆಯ ಕುಟುಂಬದಲ್ಲಿ ಸಮಾಜಮುಖಿಯಾಗಿ ಬಾಲ್ಯದಿಂದ ಬೆಳೆದು ಬಂದವರು.

ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಸ್ವಾತಂತ್ರ್ಯ ನಂತರದಲ್ಲೂ ಸರ್ಕಾರಗಳನ್ನು ಪ್ರಶ್ನಿಸುವ ಮತ್ತು ಅಗತ್ಯ ಬಿದ್ದಾಗ ನಿರಂತರ ಹೋರಾಟ ನಡೆಸುತ್ತಾ ಬಂದವರು.
ಪವಿತ್ರವಾದ ಹೋರಾಟದ ಪರಂಪರೆಯನ್ನು ಕನ್ನಡ ನೆಲದಲ್ಲಿ ಮುನ್ನಡೆಸುತ್ತಾ ಹೋರಾಟವನ್ನು ಯಾವತ್ತೂ ದ್ವೇಷ ಆಗದಂತೆ ಆಚರಿಸಿಕೊಂಡು ಬಂದವರು. ಹೀಗಾಗಿ ಆಡಳಿತಗಾರರ ವಿರುದ್ಧ ಪ್ರತಿಭಟನೆ ಮತ್ತು ಸಲಹೆ ನೀಡುವ ಸಹೃದಯತೆಯನ್ನೂ ಪಾಲಿಸಿಕೊಂಡು ಬಂದವರು.

ಶಿಕ್ಷಕರಾಗಿ, ಪತ್ರಕರ್ತರಾಗಿಯೂ ಆದರ್ಶರಾಗಿದ್ದರಲ್ಲದೆ ನಾಡಿನ ವಿವೇಕವನ್ನು ನಿರಂತರವಾಗಿ ತಿದ್ದುತ್ತಾ, ವಿಸ್ತರಿಸುತ್ತಾ ಮಾರ್ಗದರ್ಶಕರಾಗಿದ್ದರು. ಇವರ ಸಾವು ನನಗೆ ಈ ಜೀವಮಾನದ ನೋವು. ಸಾರ್ಥಕ ಜೀವನ ನಡೆಸಿ ಯಾವತ್ತೂ ಅಳಿಸಲಾಗದ ಜನಪರ ಹೆಜ್ಜೆಗುರುತುಗಳನ್ನು ಕನ್ನಡ ಮಣ್ಣಿನಲ್ಲಿ ಬಿತ್ತಿ ಹೋಗಿದ್ದಾರೆ.

ಅವರು ಈ ನೆಲದಲ್ಲಿ ಬಿತ್ತಿರುವ ಹೋರಾಟದ ಬೀಜಗಳು, ಮುನ್ನಡೆಸಿಕೊಂಡು ಬಂದ ಹೋರಾಟ ಪರಂಪರೆಯನ್ನು ಈ ನಾಡು ಮುನ್ನಡೆಸುತ್ತದೆ. ಅತೀವ ದುಃಖದ ಸಂದರ್ಭ ನನಗೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

Tags: H S Doreswamysiddaramaiah
Previous Post

ದೊರೆಸ್ವಾಮಿಯವರ ಬದುಕಿನ ಆದರ್ಶ, ಮೌಲ್ಯಗಳು ಎಲ್ಲರಿಗೂ ಸ್ಪೂರ್ತಿ: ಎಚ್‌ಡಿ‌ಕೆ ಸಂತಾಪ

Next Post

ಅಪ್ರಾಪ್ತ ವಯಸ್ಸಿನ ಬಾಲಕ ಮಠಾಧೀಶನಾಗಿ ನೇಮಕ – ಸರ್ಕಾರ ಮೂಕಪ್ರೇಕ್ಷಕನಂತೆ ವರ್ತಿಸಬಾರದೆಂದ ಹೈಕೋರ್ಟ್‌

Related Posts

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
0

https://youtube.com/live/Sh2S-y9CYsE

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
Next Post
ಅಪ್ರಾಪ್ತ ವಯಸ್ಸಿನ ಬಾಲಕ ಮಠಾಧೀಶನಾಗಿ ನೇಮಕ – ಸರ್ಕಾರ ಮೂಕಪ್ರೇಕ್ಷಕನಂತೆ ವರ್ತಿಸಬಾರದೆಂದ ಹೈಕೋರ್ಟ್‌

ಅಪ್ರಾಪ್ತ ವಯಸ್ಸಿನ ಬಾಲಕ ಮಠಾಧೀಶನಾಗಿ ನೇಮಕ - ಸರ್ಕಾರ ಮೂಕಪ್ರೇಕ್ಷಕನಂತೆ ವರ್ತಿಸಬಾರದೆಂದ ಹೈಕೋರ್ಟ್‌

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada