• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಿದ್ದರಾಮಯ್ಯ ಸರ್ಕಾರ ಬಸವಣ್ಣನ ತತ್ವ ಅಳವಡಿಸಿಕೊಂಡಿದೆ: ಲಕ್ಷ್ಮಿ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
August 11, 2023
in ಇದೀಗ, ಕರ್ನಾಟಕ, ರಾಜಕೀಯ
0
ಲಕ್ಷ್ಮಿ ಹೆಬ್ಬಾಳಕರ್‌

ಬೆಳಗಾವಿ ಅಥಣಿಯಲ್ಲಿ ಮುಖ್ಯಮಂತ್ರಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಮತ್ತು ಇತರರು ಅಲ್ಲಿದ್ದರು

Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದಲ್ಲಿ ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

ADVERTISEMENT

ಬೆಳಗಾವಿ ಅಥಣಿಯಲ್ಲಿ ಶುಕ್ರವಾರ (ಆಗಸ್ಟ್ 11) ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಬೆಳಗಾವಿಯ ಅಥಣಿಗೆ ಆಗಮಿಸಿದ್ದಾರೆ. ಅವರು ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸರ್ಕಾರ ಮುನ್ನಡೆಸುತ್ತಿದ್ದು ಬಡವರಿಗಾಗಿ, ರಾಜ್ಯದ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನುಡಿದಂತೆ ನಡೆಯುತ್ತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಪ್ರಶಂಸಿಸಿದರು.

“ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಎರಡನ್ನೂ ಗೆಲ್ಲಲೇಬೇಕಾಗಿದೆ. ನಿಮ್ಮೆಲ್ಲ ಸಹಕಾರ, ಆಶಿರ್ವಾದ ನಮ್ಮ ಸರ್ಕಾರದ ಮೇಲಿರಲಿ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಲಿತ ಸಾಹಿತಿ ಅರ್ಜುನ್‌ ಮೌರ್ಯಗೆ ಅಪಮಾನ, ಕೊಡಗು ವಿಶ್ವವಿದ್ಯಾಲಯದಲ್ಲಿದೆಯೇ ಜಾತಿ ಪದ್ದತಿ?

ಇದೇ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 11.88 ಲಕ್ಷ ಫಲಾನುಭವಿಗಳಿದ್ದು, 9 ಲಕ್ಷ ಮಹಿಳೆಯರು ಈಗಾಗಲೆ ನೋಂದಣಿ ಮಾಡಿಕೊಂಡಿದ್ದಾರೆ. ಈ ವೇದಿಕೆಯನ್ನು ಉಪಯೋಗಿಸಿಕೊಂಡು ತಮಗೆಲ್ಲ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿದ್ದೇನೆ. ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಲಕ್ಷ್ಮಿ ಹೆಬ್ಬಾಳಕರ್‌ ಕೋರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಕೆ.ವೆಂಕಟೇಶ್, ಜಿಲ್ಲೆಯ ಶಾಸಕರು, ಇತರ ಗಣ್ಯರು ಇದ್ದರು.

Tags: BasavannaBasavanna PhilosophiesbelgaviCM SiddaramaiahGruha Lakshmi SchemeLakshmi hebbalkarಬಸವಣ್ಣನ ತತ್ವಗಳುಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯಲಕ್ಷ್ಮಿ ಹೆಬ್ಬಾಳಕರ್‌
Previous Post

ಕಾಂಗ್ರೆಸ್ ಗೆಲುವು ಬಿಜೆಪಿಯ ಭಯಕ್ಕೆ ಕಾರಣವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

Breaking: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಅವಘಡ | ಮಹಿಳೆಯರು ಸೇರಿ 10 ಮಂದಿಗೆ ತೀವ್ರ ಗಾಯ

Related Posts

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ
ಕರ್ನಾಟಕ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

by ಪ್ರತಿಧ್ವನಿ
August 25, 2026
0

  "ತಾಜ್ ಮಹಲ್", "ಚಾರ್ ಮಿನಾರ್", "ಮೈಲಾರಿ" ಮುಂತಾದ ಚಿತ್ರಗಳ ನಿರ್ದೇಶಕರಾಗಿ ಕನ್ನಡಿಗರ ಮನ ಗೆದ್ದಿರುವ ಅರ್ ಚಂದ್ರು, "ಕಬ್ಜ" ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಭಾರತದಾದ್ಯಂತ...

Read moreDetails
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

August 25, 2026
ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

August 25, 2026
Next Post
ಬಿಬಿಎಂಪಿ

Breaking: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಅವಘಡ | ಮಹಿಳೆಯರು ಸೇರಿ 10 ಮಂದಿಗೆ ತೀವ್ರ ಗಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada