• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿದ್ದು ಓರ್ವ ಡೋಂಗಿ ಸಮಾಜವಾದಿ – ಅನುದಾನ ತಾರತಮ್ಯದ ವಿರುದ್ಧ ಸಿಡಿದೆದ್ದ ವಿಜಯೇಂದ್ರ ! 

Chetan by Chetan
July 19, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿದ್ದು ಓರ್ವ ಡೋಂಗಿ ಸಮಾಜವಾದಿ – ಅನುದಾನ ತಾರತಮ್ಯದ ವಿರುದ್ಧ ಸಿಡಿದೆದ್ದ ವಿಜಯೇಂದ್ರ ! 
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ನವರೇ (Cm Siddaramaiah),ನೀವು ಕಾಂಗ್ರೆಸ್ (Congress) ಶಾಸಕರಿಗೆ ಮುಖ್ಯಮಂತ್ರಿಯೋ ಅಥವಾ ಕರ್ನಾಟಕದ ಮುಖ್ಯಮಂತ್ರಿಯೋ? ಅಲುಗಾಡುತ್ತಿರುವ ನಿಮ್ಮ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು, ಕಾಂಗ್ರೆಸ್ ನ ಆಂತರಿಕ ಬೇಗುದಿಯನ್ನು ತಣ್ಣಗಾಗಿಸಲು, ಅತೃಪ್ತ ಕಾಂಗ್ರೆಸ್ ಶಾಸಕರನ್ನು ತೃಪ್ತಿಪಡಿಸಲು ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇವಲ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮಾತ್ರ ₹50 ಕೋಟಿ ಅನುದಾನ (50 crores grant) ಬಿಡುಗಡೆ ಮಾಡುವ ಮೂಲಕ 17 ಬಾರಿ ಬಜೆಟ್ ಮಂಡಿಸಿದ್ದೇನೆಂದು ಬೀಗುವ ನೀವು ಬಜೆಟ್ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದೀರಿ, ಸ್ವಜನ ಪಕ್ಷಪಾತ ಮೆರೆದು ನೀವೊಬ್ಬ ಡೋಂಗಿ ಸಮಾಜವಾದಿ ಎಂದು ತೋರಿಸಿಕೊಟ್ಟಿದ್ದೀರಿ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. 

ADVERTISEMENT

ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲು ಇದು ಸಮಸಮಾಜದ ಕಲ್ಪನೆ, ಆದರೆ ನಿಮ್ಮ ಸರ್ಕಾರದ ಅಂಗಳದಲ್ಲಿರುವುದು ‘ಒಂದು ಕಣ್ಣಿಗೆ ಬೆಣ್ಣೆ-ಮತ್ತೊಂದು ಕಣ್ಣಿಗೆ ಸುಣ್ಣ’ ಎಂಬ ಧೋರಣೆ, ಕಾಂಗ್ರೆಸ್ ಶಾಸಕರಿಗೆ “ಸಿಂಹಪಾಲು-ವಿರೋಧ ಪಕ್ಷದ ಶಾಸಕರಿಗೆ ಮೊಲದ ಪಾಲು” ಎಂಬಂತೆ ನಡೆದುಕೊಂಡಿದ್ದೀರಿ, ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಪಮಾನಿಸುವ ರೀತಿಯಲ್ಲಿ ನಿರ್ಧಾರ ಕೈಗೊಂಡಿದ್ದೀರಿ.

ನೀವು ರಾಜ್ಯಕ್ಕೆ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ, ವಿರೋಧ ಪಕ್ಷದ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಬೆಂಬಲಿಸಿದ ಮತದಾರರಿದ್ದಾರೆ ಎಂಬುದನ್ನು ನೀವು ಮರೆತಂತಿದೆ. ನಿಮ್ಮ ರಾಜಕಾರಣ ಹಾಗೂ ಕಾಂಗ್ರೆಸ್ ಪಕ್ಷದ ನಡವಳಿಕೆ ಮೋಸ, ಸಂಕುಚಿತ, ಅಸೂಯೆ ಹಾಗೂ ದ್ವೇಷ ಕಾರುವ ಪ್ರವೃತ್ತಿಯಿಂದ ಕೂಡಿದೆ ಎಂದು ಟೀಕಿಸಿದ್ದಾರೆ.

ಅಧಿಕಾರಕ್ಕೆ ಬಂದ ದಿನದಿಂದಲೂ ಅಭಿವೃದ್ಧಿಯ ಹಾದಿಯಲ್ಲಿ ಒಂದೇ ಒಂದು ಹೆಜ್ಜೆ ಇಡಲಾಗದ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ಅಭದ್ರತೆಯ ಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಸ್ಥಾನ ಉಳಿಸಿಕೊಳ್ಳಲೇಬೇಕೆಂಬ ಹಠಕ್ಕೆ ಬಿದ್ದು ರಾಜನೀತಿಯನ್ನು ಗಾಳಿಗೆ ತೂರಿ ಸ್ವಜನ ಪಕ್ಷಪಾತದ ಸ್ವಾರ್ಥ ರಾಜಕಾರಣ ಮಾಡಲು ಹೊರಟಿದ್ದೀರಿ ಎಂದು ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. 

ನಿಮ್ಮ ರಾಹುಲ್ ಗಾಂಧಿಯವರ ನೇತೃತ್ವದ ಕಾಂಗ್ರೆಸ್ ಪಕ್ಷ ಜನತಂತ್ರ ವ್ಯವಸ್ಥೆಯ ಸಂಸ್ಕಾರಗಳನ್ನು ಗೌರವಿಸುವ ಸಂಸ್ಕೃತಿಗೆ ತಿಲಾಂಜಲಿ ಬಿಟ್ಟಿದೆ. ಈ ಕಾರಣಕ್ಕಾಗಿಯೇ ಭಾರತದಲ್ಲಿ ನಿಮ್ಮ ಪಕ್ಷ ಬಹುತೇಕ ಮೂಲೋತ್ಪಾಟನೆಯಾಗಿದೆ.  ಕರ್ನಾಟಕದಲ್ಲಿಯೂ ನಿಮ್ಮ ಕೆಟ್ಟ ಆಡಳಿತ ಹಾಗೂ ಸರ್ವಾಧಿಕಾರಿ ಧೋರಣೆಯ ವರ್ತನೆಯಿಂದಾಗಿ ನಿಮ್ಮ ಪಕ್ಷ ಮೂಲೆಗೆ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲ. 

‘ದೀಪ ಆರುವ ಮುನ್ನ ಜೋರಾಗಿ ಉರಿಯುತ್ತದೆ’ ಎಂಬ ಮಾತು ನಿಮಗೆ ಅನ್ವಯಿಸುತ್ತದೆ, ಏಕೆಂದರೆ ಅಧಿಕಾರ ಬಿಟ್ಟುಕೊಡುವ ಅಂಚಿನಲ್ಲಿರುವ ನಿಮ್ಮನ್ನು ಅಸಹಿಷ್ಣುತೆ ಮುತ್ತಿಕೊಂಡಿದೆ, ಚರಿತ್ರೆಯಲ್ಲಿ ಈಗಾಗಲೇ ಸಾಕಷ್ಟು ಕಪ್ಪುಮಸಿ ಹಚ್ಚಿಕೊಂಡಿದ್ದೀರಿ, ಪ್ರಜಾಪ್ರಭುತ್ವದ ವ್ಯವಸ್ಥೆಗೆ ಅಪಚಾರ ಮಾಡಿದ ಅಪಕೀರ್ತಿ ಶಾಶ್ವತವಾಗಿ ನಿಮ್ಮನ್ನು ಬಾಧಿಸಲಿದೆ ಎಂಬ ಎಚ್ಚರಿಕೆ ನಿಮಗಿರಲಿ. ಈ ನಿಟ್ಟಿನಲ್ಲಿ ಜನರಿಂದ ಆಯ್ಕೆಯಾದ ಪ್ರತಿಯೊಬ್ಬ ಶಾಸಕರನ್ನು ಗೌರವದಿಂದ ಕಾಣಿ, ಪ್ರತಿ ಕ್ಷೇತ್ರದ ಅಭಿವೃದ್ಧಿಯೂ ಸಮಗ್ರ ಕರ್ನಾಟಕದ ಸಮೃದ್ಧತೆ ಮೆರೆಯಲಿದೆ ಎಂಬುದನ್ನು ನೀವು ಮರೆಯಬೇಡಿ, ನೀವು ಸಾಮಂತರೂ ಅಲ್ಲ, ಪಾಳೆಗಾರರೂ ಅಲ್ಲ, ಕರ್ನಾಟಕದ ಆರೂವರೆ ಕೋಟಿ ಜನರ ಮುಖ್ಯಮಂತ್ರಿ ಎಂಬ ಘನತೆಯ ಸ್ಥಾನಕ್ಕೆ ದಕ್ಕೆ ತಾರದಂತೆ ನಡೆದುಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. 

Tags: 50 ಕೋಟಿಅನುದಾನಅನುದಾನ ತಾರತಮ್ಯಅಭಿವೃದ್ಧಿಬಿ ವಿ ವಿಜಯೇಂದ್ರಸಿದ್ದರಾಮಯ್ಯ
Previous Post

ಪೊಲೀಸರ ವಿಚಾರಣೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ – ಬೈರತಿ ಬಸವರಾಜೆ ಗೆ ಶುರುವಾಯ್ತು ಸಂಕಷ್ಟ?! 

Next Post

ಕುಡುಕರಿಂದ ಪ್ರತಿನಿತ್ಯ ಕಿರಿಕಿರಿ.. ರೊಚಿಗೆದ್ದ ಮಹಿಳೆಯರಿಂದ ಬಾರ್ ಗೆ ಬಿತ್ತು ಬೀಗ .! 

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post
ಕುಡುಕರಿಂದ ಪ್ರತಿನಿತ್ಯ ಕಿರಿಕಿರಿ.. ರೊಚಿಗೆದ್ದ ಮಹಿಳೆಯರಿಂದ ಬಾರ್ ಗೆ ಬಿತ್ತು ಬೀಗ .! 

ಕುಡುಕರಿಂದ ಪ್ರತಿನಿತ್ಯ ಕಿರಿಕಿರಿ.. ರೊಚಿಗೆದ್ದ ಮಹಿಳೆಯರಿಂದ ಬಾರ್ ಗೆ ಬಿತ್ತು ಬೀಗ .! 

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada