• Home
  • About Us
  • ಕರ್ನಾಟಕ
Sunday, November 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ರಾಜಕೀಯ ತಂತ್ರಗಾರಿಕೆಗೆ ‘ಟೀಂ ಸಿದ್ದರಾಮಯ್ಯ’ ತಂಡ ರಚನೆ

Any Mind by Any Mind
November 19, 2022
in ಕರ್ನಾಟಕ, ರಾಜಕೀಯ
0
ಬಿಜೆಪಿ ಸರ್ಕಾರ 40% ಸರ್ಕಾರ ಎಂಬುದು ಎಂದೋ ಸಾಬೀತಾಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ 
Share on WhatsAppShare on FacebookShare on Telegram

ಮಾಜಿ ಸಿಎಂ ಸಿದ್ದರಾಮಯ್ಯ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ಸೋಲಿಸುತ್ತಾರೆ. ಸ್ವತಃ ಕಾಂಗ್ರೆಸ್​ ನಾಯಕರೂ ಸೇರಿದಂತೆ ಬಿಜೆಪಿ, ಜೆಡಿಎಸ್​​ನ ಘಟಾನುಘಟಿ ನಾಯಕರು ಸಿದ್ದರಾಮಯ್ಯ ರಾಜಕೀಯ ಜೀವನ ಅಂತ್ಯ ಮಾಡಲು ಕಾಯುತ್ತಿದ್ದಾರೆ ಎನ್ನುವುದು ಕೇಳಿಬರುತ್ತಿರುವ ಮಾತು. ಇದೇ ಕಾರಣದಿಂದ ಸಿದ್ದರಾಮಯ್ಯ ಕೂಡ ಕ್ಷೇತ್ರ ಬಿಟ್ಟು ಕ್ಷೇತ್ರ ಹುಡುಕಾಟದಲ್ಲಿ ನಿರತರಾಗಿದ್ದಾರೆ. ಮೊನ್ನೆಯಷ್ಟೇ ಕೋಲಾರ ಕ್ಷೇತ್ರದಲ್ಲಿ ಸೋಲು-ಗೆಲುವಿನ ಸಾಧ್ಯತೆಗಳ ಬಗ್ಗೆ ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಿದ್ದರಾಮಯ್ಯ, ಅಂತಿಮವಾಗಿ ವರುಣಾ, ಕೋಲಾರ, ಬಾದಾಮಿ ಈ ಮೂರು ಕ್ಷೇತ್ರಗಳ ಪೈಕಿ ಒಂದರಲ್ಲಿ ಸ್ಪರ್ಧೆ ಮಾಡ್ತೇನೆ. ಆದರೆ ಆ ಮೂರಲ್ಲಿ ಯಾವ ಕ್ಷೇತ್ರ ಎನ್ನುವುದನ್ನು ಹೈಕಮಾಂಡ್​ ನಿರ್ಧಾರ ಮಾಡಲಿದೆ. ಚುನಾವಣೆ ಘೋಷಣೆ ಆದ ಬಳಿಕ ಅಷ್ಟೇ ನನ್ನ ಸ್ಪರ್ಧೆ ನಿರ್ಧಾರ ಆಗಲಿದೆ ಎಂದಿದ್ದಾರೆ.

ADVERTISEMENT

ಕಾಂಗ್ರೆಸ್​​ ಪಕ್ಷದಿಂದ ಸ್ಪರ್ಧೆ ಮಾಡಬೇಕಿದ್ದರೆ ಅರ್ಜಿ ಸಲ್ಲಿಕೆ ಮಾಡಬೇಕು ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಕರೆ ನೀಡಿದ್ರು. ಸಾಕಷ್ಟು ಕ್ಷೇತ್ರಗಳಿಂದ ನೂರಾರು ಜನ ಟಿಕೆಟ್​ ಆಕಾಂಕ್ಷಿಗಳು ಟಿಕೆಟ್​ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕ ಸಿದ್ದಾರಾಮಯ್ಯ ಮಾತ್ರ ಯಾವುದೇ ಕ್ಷೇತ್ರದಿಂದಲೂ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದು ವೇಳೆ ಅರ್ಜಿ ಸಲ್ಲಿಕೆ ಮಾಡಿದ್ರೆ ಸಿದ್ದರಾಮಯ್ಯ ತಂತ್ರಗಾರಿಕೆ ಬಯಲಾಗುವ ಭೀತಿಯಲ್ಲಿ ಸಿದ್ದರಾಮಯ್ಯ ಅಂಡ್​ ಟೀಂ, ಗೌಪ್ಯತೆ ಕಾಪಾಡಿಕೊಳ್ಳುವ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ವಿರೋಧಿ ಪಾಳಯಕ್ಕೆ ಗುಟ್ಟು ಬಿಟ್ಟುಕೊಡದೆ ಗೆಲುವಿನ ದಡ ಸೇರಿದರೆ ಮಾತ್ರ ಮುಖ್ಯಮಂತ್ರಿ ಕುರ್ಚಿ ಅನ್ನೋದು ಸಿದ್ದರಾಮಯ್ಯ ಆಪ್ತ ಬಳಗದ ಮಾತು.

2014ರಲ್ಲಿ ಡಾ ಜಿ ಪರಮೇಶ್ವರ್​​ ಕಾಂಗ್ರೆಸ್​ ಅಧ್ಯಕ್ಷರಾಗಿದ್ದರು. ಇಡೀ ರಾಜ್ಯ ಸುತ್ತಾಡಿದ್ದ ಪರಮೇಶ್ವರ್​, ಕಾಂಗ್ರೆಸ್​ ಅಧಿಕಾರಕ್ಕೆ ಬರುವಲ್ಲಿ ಮಹತ್ವದ ಪಾತ್ರ ನಿರ್ವಹಣೆ ಮಾಡಿದ್ದರು. ಆದರೆ ಪಕ್ಷದೊಳಗೆ ನಡೆದ ರಾಜಕೀಯ ಅರ್ಥ ಮಾಡಿಕೊಳ್ಳುವಲ್ಲಿ ಎಡವಿದ ಡಾ ಜಿ ಪರಮೇಶ್ವರ್​, ಜೆಡಿಎಸ್​ ಅಭ್ಯರ್ಥಿ ವಿರುದ್ಧ ಸೋಲಬೇಕಾಯ್ತು. ಇಡೀ ರಾಜ್ಯದಲ್ಲಿ ಕಾಂಗ್ರೆಸ್​ ಸಂಭ್ರಮದಲ್ಲಿ ಇರುವಾಗ ಪೆಚ್ಚು ಮೋರೆ ಹಾಕಿಕೊಳ್ಳುವಂತಾಯ್ತು. ಸಿದ್ದರಾಮಯ್ಯ ಯಾವುದೇ ವಿರೋಧ ಇಲ್ಲದೆ ಮುಖ್ಯಮಂತ್ರಿ ಕುರ್ಚಿ ಮೇಲೆ ಆಸೀನರಾದರು. ಅಂದು ಡಾ ಜಿ ಪರಮೇಶ್ವರ್​​ಗೆ ಎದುರಾದ ಸೋಲನ್ನು ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಕ್ಕೆ ತರುವುದು ಅಷ್ಟೇ ಮುಖ್ಯವಲ್ಲ, ಕ್ಷೇತ್ರದಲ್ಲಿ ಗೆದ್ದು ಬರುವುದು ಮುಖ್ಯ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಇದೇ ಕಾರಣದಿಂದ ಗುಟ್ಟಿನ ಗೋಪುರ ಕಟ್ಟಿರುವ ಸಿದ್ದರಾಮಯ್ಯ, ಚುನಾವಣೆ ಘೋಷಣೆ ತನಕ ಯಾವ ಕ್ಷೇತ್ರ ಎನ್ನುವುದನ್ನೇ ಮುಚ್ಚಿಡಲಿದ್ದಾರೆ.

ಬಾದಾಮಿಯಿಂದ ಸ್ಪರ್ಧೆ ಮಾಡಿದ್ರೆ ಈ ಬಾರಿ ಎದುರಾಳಿಗಳ ತಂತ್ರಗಾರಿಕೆಗೆ ಸಿಲುಕುವ ಭಯದಿಂದ ಕ್ಷೇತ್ರವನ್ನು ತೊರೆಯುತ್ತಿರುವ ಸಿದ್ದರಾಮಯ್ಯ, ಮೈಸೂರಿನ ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಕೋಲಾರದಲ್ಲಿ ಜೆಡಿಎಸ್​ ಶಾಸಕ ಶ್ರೀನಿವಾಸಗೌಡ, ಕಾಂಗ್ರೆಸ್​ ಸೇರ್ಪಡೆ ಆಗುತ್ತಿದ್ದು, ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಕೋಲಾರ ಕ್ಷೇತ್ರದ ಜಾತಿವಾರು ಮತಗಳ ಆಧಾರದಲ್ಲಿ ಸಿದ್ದರಾಮಯ್ಯ ಗೆಲುವಿಗೆ ಪೂರಕವಾಗಿದೆ ಎನ್ನುವ ಕಾರಣಕ್ಕೆ ಸ್ಪರ್ಧೆ ಮಾಡುವ ಚರ್ಚೆ ನಡೆಯುತ್ತಿದೆ. ಆದರೆ ಕೊನೇ ಕ್ಷಣದಲ್ಲಿ ಕ್ಷೇತ್ರ ಬದಲಾವಣೆ ಮಾಡಿ, ಎದುರಾಳಿಗಳಿಗೆ ಚಳ್ಳೆಹಣ್ಣು ತಿನ್ನಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರಲಿದೆ ಎನ್ನುವ ಮಾತುಗಳು ಶುರುವಾಗಿದೆ. ಒಂದು ವೇಳೆ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಅಥವಾ ಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿ ಆಗುವ ತಯಾರಿ ಮಾಡಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಯಾರು ಸೋಲುತ್ತಾರೆ ಅವರನ್ನು ಕಾಂಗ್ರೆಸ್​ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಸೋಲಿಸುವ ಯೋಜನೆ ಕಾಂಗ್ರೆಸ್​​ನಲ್ಲೇ ನಡೆಯುತ್ತಿದೆ ಎನ್ನುವುದು ರಾಜಕೀಯದಲ್ಲಿ ಕೇಳಿ ಬರುತ್ತಿರುವ ವಿಚಾರ. ಇಡೀ ರಾಜ್ಯದಲ್ಲಿ ಕಾಂಗ್ರೆಸ್​ ಜಯಭೇರಿ ಬಾರಿಸಿ, ಸಿದ್ದರಾಮಯ್ಯ ಸೋಲುಂಡರೆ ಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿ ಕನಸು ಸಲೀಸು. ಇದೇ ಕಾರಣಕ್ಕೆ ಸಿದ್ದರಾಮಯ್ಯ ವಿರೋಧ ಪಕ್ಷ ಹಾಗು ಸ್ವಪಕ್ಷ ಕಾಂಗ್ರೆಸ್​​ಗೂ ತಿಳಿಯದಂತೆ ತಂತ್ರಗಾರಿಕೆ ಮಾಡಲು ಟೀಂ ಸಿದ್ದರಾಮಯ್ಯ ಮಾಡಿಕೊಂಡಿದ್ದಾರೆ.

ಮೂಲ : ಕೃಷ್ಣಮಣಿ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋಟೆ ಭದ್ರ ಮಾಡಿಕೊಳ್ಳಲು ಬಿಜೆಪಿ ಸಂಸದನ ಏಕಾಂಗಿ ಹೋರಾಟ

Next Post

ನಂಜನಗೂಡಿನಲ್ಲಿ ಲಿಂಗಾಯತರ ಮೇಲೆ ಬ್ರಾಹ್ಮಣ್ಯದ ದಬ್ಬಾಳಿಕೆ

Related Posts

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
0

ಬೆಂಗಳೂರು ನ2: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

Read moreDetails
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

November 2, 2025
ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

November 1, 2025
Next Post
ನಂಜನಗೂಡಿನಲ್ಲಿ ಲಿಂಗಾಯತರ ಮೇಲೆ ಬ್ರಾಹ್ಮಣ್ಯದ ದಬ್ಬಾಳಿಕೆ

ನಂಜನಗೂಡಿನಲ್ಲಿ ಲಿಂಗಾಯತರ ಮೇಲೆ ಬ್ರಾಹ್ಮಣ್ಯದ ದಬ್ಬಾಳಿಕೆ

Please login to join discussion

Recent News

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

by ಪ್ರತಿಧ್ವನಿ
November 2, 2025
ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ
Top Story

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

by ಪ್ರತಿಧ್ವನಿ
November 1, 2025
Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada