• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಿಲುಮೆ ಕುರಿತು ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ ಮಾಜಿ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 24, 2022
in ಕರ್ನಾಟಕ, ರಾಜಕೀಯ
0
ಬೆಳಗಾವಿ ಗಡಿ ವಿವಾದ; ಸರ್ವ ಪಕ್ಷ ಸಭೆ ನಡೆಸುವಂತೆ ಆಗ್ರಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

ADVERTISEMENT

ಚಿಲುಮೆ ಸಂಸ್ಥೆಯ ಅಕ್ರಮಗಳ ಹಿಂದಿನ ರೂವಾರಿಗಳ ಮೇಲೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ? ಇಷ್ಟು ದಿನವಾದರೂ ಈ ಅಕ್ರಮ ಸಂಸ್ಥೆಯ ಹಣಕಾಸಿನ ವಹಿವಾಟಿನ ಮೇಲೆ ಈ ಸಂಸ್ಥೆಗೆ ಹಣ ನೀಡಿದವರ ಮೇಲೆ ಯಾಕೆ ಸಿಬಿಐ, ಐಟಿ, ಇಡಿ ದಾಳಿ ನಡೆಸಿಲ್ಲ ಎಂದುವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಖಾಸಗಿ ಸಂಸ್ಥೆ ಚಿಲುಮೆಗೆ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೆ ವಹಿಸಿದ್ದರ ಹಿಂದೆ ಬಿಬಿಎಂಪಿ ಮತ್ತು ಚುನಾವಣಾ ಆಯೋಗದ ಅಧಿಕಾರಿಗಳೂ ಇದ್ದಾರೆ. ಚುನಾವಣಾ ಆಯೋಗಕ್ಕೆ ಈ ಕುರಿತು ಮೊದಲೇ ಮಾಹಿತಿ ಇತ್ತು. ಚುನಾವಣಾ ಆಯೋಗದವರು ಬಿಬಿಎಂಪಿಗೆ ಈ ಕುರಿತು ಪತ್ರಗಳನ್ನೂ ಬರೆದಿದ್ದರು.

ಆದರೂ ಆಯೋಗಕ್ಕೂ ಕೇರ್ ಮಾಡದೆ ಚಿಲುಮೆ ಸಂಸ್ಥೆಯ ಅಕ್ರಮ ಹೆಚ್ಚಾಗುತ್ತಾ ಹೋಗಿದೆ. ಹಾಗಾಗಿ ಚುನಾವಣಾ ಆಯೋಗ ಈ ಅಕ್ರಮಕ್ಕೆ ಮೌನ ಸಮ್ಮತಿ ನೀಡಿದೆಯೆ? ಸುಪ್ರೀಂ ಕೋರ್ಟು ಚುನಾವಣಾ ಆಯೋಗದ ಮೇಲೆ ಮಾಡಿರುವ ವಿಮರ್ಶೆಗಳು ಸರಿಯಾಗಿವೆ ಅಲ್ಲವೇ. ಹೊಂಗಸಂದ್ರದ ಬಿಜೆಪಿಯ ಕಛೇರಿಯಲ್ಲಿ ಹಾಲಿ ಶಾಸಕರು ಹಾಗೂ ವಿಧಾನಸಭೆಯ ಮುಖ್ಯ ಸಚೇತಕರಾದ ಶ್ರೀ ಸತೀಶ್‍ರೆಡ್ಡಿಯವರ ನೇತೃತ್ವದಲ್ಲಿಯೇ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸುವ ಕುರಿತು ತರಬೇತಿ ನೀಡಲಾಗಿದೆ.

ಪರಿಷ್ಕರಣೆ ಕಾರ್ಯಕ್ಕಾಗಿಯೆ 25000 ದಿಂದ 30000 ರೂಪಾಯಿಗಳನ್ನು ನೀಡಿ ನೇಮಕಾತಿ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಹಣದ ಮೂಲದ ಬಗ್ಗೆ ತನಿಖೆ ನಡೆಯಬೇಕು. ನೂರಾರು ಸಂಖ್ಯೆಯ ನೌಕರರಿಗೆ ಸಂಬಳ ಕೊಡಲು ಖರ್ಚು ಮಾಡಿದ ಕೋಟ್ಯಾಂತರ ರೂಪಾಯಿಗಳನ್ನು ಈ ಸಂಸ್ಥೆಗೆ ನೀಡಿದವರು ಯಾರು? ಇಷ್ಟು ದೊಡ್ಡ ಮೊತ್ತವನ್ನು ವಿನಿಯೋಗಿಸುತ್ತಿದ್ದವರ ಉದ್ದೇಶವಾದರೂ ಏನು? ಅಕ್ರಮವಾಗಿ ವಿನಿಯೋಗಿಸಿದ ಹಣದ ಕುರಿತು ಇನ್ನೂ ದಾಳಿಗಳನ್ನು ನಡೆಸದೆ ಐಟಿ, ಇಡಿಗಳು ಯಾಕೆ ಇನ್ನೂ ಕಣ್ಣು ಮುಚ್ಚಿಕೊಂಡಿವೆ ಎಂದು ಕಿಡಿಕಾರಿದ್ದಾರೆ.

ಬಿಬಿಎಂಪಿಯಲ್ಲಿ ನಡೆದಿರುವ ಮತದಾರರ ಪಟ್ಟಿಯ ಅಕ್ರಮಕ್ಕೆ ಸರ್ಕಾರ, ಚುನಾವಣಾ ಆಯೋಗ ಮತ್ತು ಬಿಬಿಎಂಪಿಯ ಜಿಲ್ಲಾ ಚುನಾವಣಾಧಿಕಾರಿ, ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸಂಪೂರ್ಣ ಜವಾಬ್ಧಾರರಾಗಿರುತ್ತಾರೆ. ಆದರೂ ಇಷ್ಟು ಬೃಹತ್ ಮಟ್ಟದ ಹಗರಣ ನಡೆದಿದ್ದರೂ ಬಿಬಿಎಂಪಿಯ ಹಿರಿಯ ಅಧಿಕಾರಿಗಳು, ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಯಾಕೆ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ? ಅಕ್ರಮದಲ್ಲಿ ನೇರವಾಗಿ ಭಾಗಿಯಾಗಿರುವ ಬಿಜೆಪಿಯ ಎಂಎಲ್‍ಎಗಳು, ಸಚಿವರುಗಳ ಮೇಲೆ ಮತ್ತು ಬೆಂಗಳೂರು ಅಭಿವೃದ್ಧಿಯ ಉಸ್ತುವಾರಿ ಹೊತ್ತಿರುವ ಮುಖ್ಯಮಂತ್ರಿಗಳ ಮೇಲೆ ಏಕೆ ಯಾವುದೇ ಕ್ರಮ ವಹಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ/ಅರೆ ಸರ್ಕಾರಿ ನೌಕರರನ್ನು ನೇಮಿಸುವುದರ ಬದಲಿಗೆ ಖಾಸಗಿ ವ್ಯಕ್ತಿಗಳನ್ನು ಬಿಎಲ್‍ಓಗಳಾಗಿ ನೇಮಕ ಮಾಡಲಾಗಿದೆ. ಖಾಸಗಿ ವ್ಯಕ್ತಿಗಳನ್ನು ಯಾವ ಕಾರಣಕ್ಕೂ ನೇಮಕ ಮಾಡಬಾರದೆಂದು ಕಾನೂನು ಹೇಳುತ್ತದೆ. ಇವರು ಒಂದು ಪಕ್ಷದ ಕಾರ್ಯಕರ್ತರಂತೆ ಕಾಣಿಸುತ್ತಾರೆ. ಚಿಲುಮೆ ಸಂಸ್ಥೆಯ ಕಛೇರಿಗಳಲ್ಲಿ ಸಚಿವರ ಚೆಕ್ಕುಗಳು ಮತ್ತು ಲೆಟರ್ ಹೆಡ್‍ಗಳು ದೊರೆತಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಗಿದ್ದರೆ ಸದರಿ ಸಚಿವರ ಮೇಲೆ ಯಾಕೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ಸೇರಿಸಲು ಯಾವುದೇ ಅರ್ಜಿ ನಮೂನೆಗಳನ್ನು ಪಡೆಯದೆ ಈ ಕೃತ್ಯ ಎಸಗಿರುವುದು ಘೋರವಾದ ಅಪರಾಧವಾಗಿದ್ದು ಇದನ್ನು ಪ್ರತಿ ದಿನ ಸಾಕ್ಷಿಗಳ ಸಮೇತ ಜನರು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಆದ್ದರಿಂದ ಈ ಕೂಡಲೆ ಜನರು ನೀಡಿರುವ ನಮೂನೆ 6, 7, 8, ಮತ್ತು 8ಎ ಗಳ ಅರ್ಜಿಗಳನ್ನು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಯಾವುದೆ ಅರ್ಜಿಗಳಿಲ್ಲದೆ ಮತದಾರರ ಪಟ್ಟಿಗೆ ಸೇರಿಸಿರುವ, ಕೈಬಿಟ್ಟಿರುವ, ತಿದ್ದುಪಡಿ ಮಾಡಿರುವ, ವರ್ಗಾವಣೆ ಮಾಡಿರುವ ಪ್ರಕರಣಗಳೆಷ್ಟು ಎಂಬುದನ್ನು ಚುನಾವಣಾ ಆಯೋಗ ಈ ಕೂಡಲೆ ಎಲ್ಲ ರಾಜಕೀಯ ಪಕ್ಷಗಳಿಗೆ, ಸಾರ್ವಜನಿಕರಿಗೆ ತಿಳಿಸಬೇಕು. ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸದೆ, ನೋಟೀಸು ನೀಡದೆ ಮಾಡಿರುವ ಎಲ್ಲ ಬದಲಾವಣೆಗಳನ್ನು ಈ ಕೂಡಲೆ ರದ್ದು ಮಾಡಬೇಕು.

ಅರ್ಜಿ ಸ್ವೀಕರಿಸದೆ, ನೋಟೀಸು ನೀಡದೆ, ಅರ್ಜಿಗಳ ಮೇಲೆ ಆದೇಶ ಮಾಡದೆ ಮತದಾರರ ಪಟ್ಟಿಗೆ ಸೇರಿಸಿರುವ, ತೆಗೆದಿರುವ, ವರ್ಗಾವಣೆ ಮಾಡಿರುವ ಎಲ್ಲ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಜೈಲಿಗೆ ಅಟ್ಟಬೇಕು. ನಿಷ್ಪಕ್ಷಪಾತವಾಗಿ ವರ್ತಿಸದ ಅಧಿಕಾರಿಗಳನ್ನು ಈ ಕೂಡಲೆ ಚುನಾವಣಾ ಕರ್ತವ್ಯಗಳಿಂದ ಬಿಡುಗಡೆ ಗೊಳಿಸಬೇಕು.

ಪ್ರಜಾಪ್ರಭುತ್ವದ ಉಳಿವಿಗಾಗಿ ಮತದಾನ ವ್ಯವಸ್ಥೆಯ ಪಾವಿತ್ರ್ಯವನ್ನು ಉಳಿಸಲು ಕಾಂಗ್ರೆಸ್ ಹೋರಾಟ ಪ್ರಾರಂಭಿಸಿದ ಕೂಡಲೆ ಬಿಜೆಪಿಯ ಕೆಲವರು 2017ರ ದಾಖಲೆಯನ್ನು ಬಿಡುಗಡೆ ಮಾಡುತ್ತಿದ್ದೇವೆ, ಚಿಲುಮೆ ಸಂಸ್ಥೆಯನ್ನು ಬೆಳೆಸಿದ್ದೆ ಕಾಂಗ್ರೆಸ್ ಎಂದು ಸುಳ್ಳು ಹೇಳಲಾರಂಭಿಸಿದ್ದಾರೆ. ಇದಕ್ಕಾಗಿ ಮಹದೇವಪುರದ ಸಹ ಕಂದಾಯಾಧಿಕಾರಿ ಆದೇಶ ನೀಡಿದ್ದಾರೆಂಬ ಆದೇಶ ಪ್ರತಿಯನ್ನು ತೋರಿಸುತ್ತಿದ್ದಾರೆ. ಮಹದೇವಪುರದಲ್ಲಿರುವುದು ಬಿಜೆಪಿ ಪಕ್ಷದ ಎಂಎಲ್‍ಎ. ಬಿಜೆಪಿ ಪಕ್ಷದವರು ಇರುವ ಕಡೆಯೆ ಇದನ್ನು ಪ್ರಾರಂಭಿಸಿದ್ದಾರೆ. ಚಿಲುಮೆ ಸಂಸ್ಥೆಗೆ ಆದೇಶ ನೀಡಿದ್ದಾರೆ ಎಂದು ಬಿಜೆಪಿಯವರು ತೋರಿಸುತ್ತಿರುವುದರಲ್ಲಿ ಸಹ ಕಂದಾಯಾಧಿಕಾರಿ ಸಹಿ ಮಾಡಿದ್ದಾರೆ. ಅದರಲ್ಲಿ ಉಲ್ಲೇಖ 9-7-2017 ರಂದು ಚಿಲುಮೆ ಸಂಸ್ಥೆ ನೀಡಿರುವ ಮನವಿ ಎಂದಿದೆ. ಈ ಅರ್ಜಿ ಸಾಚಾ ಆಗಿದೆಯೆ? ಆಗಿದ್ದರೆ ಬಿಜೆಪಿ ಎಂಎಲ್‍ಎ ಇರುವ ಕಡೆಯೆ ಇದು ಯಾಕೆ ಸಂಭವಿಸಿದೆ? ಆ ಅಧಿಕಾರಿಯ ಮೇಲೆ ಯಾರ ಒತ್ತಡವಿತ್ತು? ಎಂದು ಪ್ರಶ್ನಿಸಿದ್ದಾರೆ.

ಬೂತ್‌ ಮಟ್ಟದ ಅಧಿಕಾರಿಯನ್ನು ನೇಮಿಸಲು ಸಹ ಕಂದಾಯಾಧಿಕಾರಿಗೆ ಯಾವುದೇ ಅಧಿಕಾರವಿಲ್ಲವೆಂದು ಪ್ರಜಾಪ್ರತಿನಿಧಿ ಕಾಯ್ದೆ-1950 ಹೇಳುತ್ತದೆ. ಹಾಗಾಗಿ ಬಿಜೆಪಿಯವರು ಒಬ್ಬ ಸಣ್ಣ ಅಧಿಕಾರಿ ಮೇಲೆ ಪ್ರಭಾವ ಬೀರಿ ಅಕ್ರಮವಾಗಿ ಆದೇಶ ಕೊಡಿಸಿದ್ದಾರೆಯೆ ಎಂಬುದನ್ನೂ ಪರಿಶೀಲಿಸಬೇಕಲ್ಲವೇ. ಯಾವ ವರ್ಷದಿಂದ ಅಕ್ರಮಗಳಾಗಿವೆಯೊ ಆ ವರ್ಷದಿಂದ ಪ್ರತಿಯೊಂದು ಸೇರ್ಪಡೆ, ಪ್ರತಿಯೊಂದು ತೆಗೆಯುವಿಕೆಯನ್ನು ಚುನಾವಣಾ ಆಯೋಗವು ಖುದ್ದು ಪರಿಶೀಲಿಸಿ ಖಾತ್ರಪಡಿಸಿಕೊಳ್ಳಬೇಕು. ಅದುವರೆಗೂ ಈಗ ಸಿದ್ಧಪಡಿಸಿರುವ ಮತದಾರರ ಪಟ್ಟಿಯನ್ನು ಪ್ರಕಟ ಮಾಡದೆ ತಡೆಹಿಡಿಯಬೇಕು. ಭಾಗಿಯಾದ ಎಲ್ಲರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಚಿಲುಮೆ ಸಂಸ್ಥೆಗೆ ಹಣ ನೀಡಿರುವವರು ಯಾರು? ಯಾಕಾಗಿ ಅವರಿಗೆ ಹಣ ನೀಡುತ್ತಿದ್ದರು? ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅವರ ಹಿಂದೆ ಯಾರ್ಯಾರು ಇದ್ದಾರೆ? ಸಂಸ್ಥೆಯವರು ಯಾರೊಂದಿಗೆ ಸಂಪರ್ಕದಲ್ಲಿದ್ದರು? ಅವರ ನಡುವೆ ನಡೆದ ಸಂವಹನಗಳೇನು? ಸಂವಾದಗಳೇನು? ಇವೆಲ್ಲ ಅಂಶಗಳನ್ನು ತನಿಖೆ ಮಾಡಿ ಸಾರ್ವಜನಿಕರ ಮುಂದೆ ಇಡಬೇಕಾಗಿದೆ. ಹಾಗೆಯೆ ರಾಜ್ಯದಲ್ಲಿ ಎಲ್ಲೆಲ್ಲಿ ಹೀಗಾಗಿದೆ ಎಂಬ ಮಾಹಿತಿಯನ್ನೂ ಆಯೋಗವು ಸ್ಪಷ್ಟಪಡಿಸಬೇಕು.

ಮತದಾರರ ಪಟ್ಟಿಗಳ ಪರಿಷ್ಕರಣೆಯ ಮೇಲೆ ನಿಗಾವಹಿಸಬೇಕಾದ ಎಲೆಕ್ಟೋರಲ್ ರೋಲ್ ಅಬ್ಸರ್ವರ್ ಗಳು ಏನು ಮಾಡಿದ್ದಾರೆ ? ಅವರು ನಿರ್ಲಕ್ಷ್ಯ ವಹಿಸಿದ್ದರೆ, ಪಕ್ಷಪಾತ ಮಾಡಿದ್ದರೆ ಅವರ ಮೇಲೆಯೂ ನಿರ್ದಾಕ್ಷಿಣ್ಯವಾದ ಕ್ರಮ ತೆಗೆದುಕೊಳ್ಳಬೇಕು. ಬಿಬಿಎಂಪಿಯ ಡಿ ಲಿಮಿಟೇಷನ್ ಪ್ರಕ್ರಿಯೆಯಲ್ಲಿಯೂ ಈ ಸಂಸ್ಥೆ ಭಾಗವಹಿಸಿದೆಯೆಂದು ಹೇಳಲಾಗುತ್ತಿದೆ. ಈ ಕೆಲಸವು ವೈಜ್ಞಾನಿಕವಾಗಿ ನಡೆದಿದೆಯೆ? ಎಂಬುದರ ಕುರಿತು ರಾಜ್ಯ ಚುನಾವಣಾ ಆಯೋಗವು ಪರಿಶೀಲನೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು. ಅವೈಜ್ಞಾನಿಕವಾಗಿದ್ದರೆ, ಪಕ್ಷಪಾತದಿಂದ ಕೂಡಿದ್ದರೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು.

ತನಿಖೆಯನ್ನು ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳು ಮಾಡಿದರೆ ಅದು ಪಕ್ಷಪಾತದಿಂದ ಕೂಡಿರುತ್ತದೆ. ಆದ್ದರಿಂದ ಕೂಡಲೆ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸುತ್ತೇನೆ.

PRATIDHVANI AND TNM ಪ್ರತಿಧ್ವನಿ ಶೋಧ | ಸರ್ಕಾರದ ಬೆಂಬಲದೊಂದಿಗೆ ಮತದಾರರ ಮಾಹಿತಿಯನ್ನು ಕಳ್ಳತನ ಮಾಡಿದ ಬೆಂಗಳೂರಿನ NGO
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗಲ್ವಾನ್‌ ಟ್ವೀಟ್‌ ಕುರಿತು ಕ್ಷಮೆಯಾಚಿಸಿದ ನಟಿ ರಿಚಾ ಚಡ್ಡಾ

Next Post

ಈ ಚುನಾವಣೆ ಗುಜರಾತ್‌ ಭವಿಷ್ಯವನ್ನ ನಿರ್ಧರಿಸಲಿದೆ : ಪ್ರಧಾನಿ ಮೋದಿ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಈ ಚುನಾವಣೆ ಗುಜರಾತ್‌ ಭವಿಷ್ಯವನ್ನ ನಿರ್ಧರಿಸಲಿದೆ : ಪ್ರಧಾನಿ ಮೋದಿ

ಈ ಚುನಾವಣೆ ಗುಜರಾತ್‌ ಭವಿಷ್ಯವನ್ನ ನಿರ್ಧರಿಸಲಿದೆ : ಪ್ರಧಾನಿ ಮೋದಿ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada