• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಪಾಲರ ಭಾಷಣವನ್ನು ‘ತೌಡು ಕುಟ್ಟುವ ಭಾಷಣ’ ಎಂದು ಕರೆದ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
February 10, 2023
in Top Story, ಕರ್ನಾಟಕ, ರಾಜಕೀಯ
0
ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಸರ್ಕಾರ ಯಾವ ಸಾಧನೆಯನ್ನು ಮಾಡಿಲ್ಲ ಎಂಬುದು ರಾಜ್ಯ ಪಾಲರ ಭಾಷಣದಿಂದ ಸ್ಪಷ್ಟವಾಗಿದೆ. ಆದ್ದರಿಂದ ಮಾಡಿದ ಈ ಭಾಷಣವನ್ನು ನಾನು ಭೂಸಾ ಅಥವಾ ತೌಡು ಕುಟ್ಟುವ ಭಾಷಣ ಎಂದು ಕರೆಯ ಬಯಸುತ್ತೇನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ADVERTISEMENT

ಶುಕ್ರವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಅವರು ಭಾಷಣ ಮಾಡಿದರು.

ರಾಜ್ಯಪಾಲರ ಭಾಷಣ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ಇಂದಿನ ರಾಜ್ಯಪಾಲರ ಭಾಷಣ ತೌಡು ಕುಟ್ಟಿದಂತೆ ಕಾಣಿಸುತ್ತಿದೆ. ಭತ್ತ ಕುಟ್ಟಿದರೆ ಅಕ್ಕಿ ಬರುತ್ತದೆ. ತೌಡು ಕುಟ್ಟಿದರೆ ಬರಿ ಉಬ್ಬಲು ಬರುತ್ತದೆ. ಸರ್ಕಾರ ಯಾವ ಸಾಧನೆಯನ್ನೂ ಮಾಡದಿರುವುದನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದರು.

ರಾಜ್ಯವು ಇಂದು ಮುಖ್ಯವಾಗಿ ನಿರುದ್ಯೋಗ, ಬೆಲೆ ಏರಿಕೆ, ಭ್ರಷ್ಟಾಚಾರ, ಸೌಹಾರ್ಧದ ಸಮಸ್ಯೆ, ಅಶಾಂತಿಯ ವಾತಾವರಣ , ಕೃಷಿ ಬಿಕ್ಕಟ್ಟು, ನೇಕಾರರ, ಸಮಸ್ಯೆಗಳು, ಮೀನುಗಾರರ ಸಮಸ್ಯೆಗಳು, ಹಾಗೂ ಸಣ್ಣ ಕೈಗಾರಿಕೆಗಳಿಗೆ ಒತ್ತು ಕೊಡದೆ ಇದ್ದದ್ದು ಮುಂತಾದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.  ಆದರೆ, ಇಡಿ ರಾಜ್ಯಪಾಲರ 82 ಪ್ಯಾರಾಗಳ ಭಾಷಣದಲ್ಲಿ ಈ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿಲ್ಲ ಎಂದು ಆರೋಪಿಸಿದ್ದಾರೆ.

ರಾಜಸ್ತಾನ ಬಿಟ್ಟರೆ ಕರ್ನಾಟಕ ಎರಡನೇ ಅತಿ ದೊಡ್ಡ ಒಣ ಭೂಮಿ ಇರುವ ರಾಜ್ಯ. ಈಗಾಗಲೇ ತೆಲಂಗಾಣದವರು ಕೃಷ್ಣ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಸಿಕೊಳ್ಳುವಲ್ಲಿ ವಿಫಲವಾಗಿದೆ. ಆದ್ದರಿಂದ ಆ ನೀರನ್ನು ತಮಗೆ ಹಂಚಿಕೆ ಮಾಡಿ ಎಂದು ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್‍ ಗಳ ಮೊರೆ ಹೋಗಿದ್ದಾರೆ. ರಾಜ್ಯದಲ್ಲಿ ಬಹಳ ಕಾಲದಿಂದ ಮಹದಾಯಿ, ಮೇಕೆದಾಟು, ಭದ್ರಾ-ಕೃಷ್ಣ ಮೇಲ್ದಂಡೆ, ತುಂಗಭದ್ರ ಅಣೆಕಟ್ಟುಗಳ ನಿರ್ಮಾಣ ಮುಂತಾದ ಅನೇಕ ನೀರಾವರಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ಸರ್ಕಾರ ನೀರಾವರಿ ವಿಚಾರದಲ್ಲಿ ಏನನ್ನೂ ಮಾಡಿಲ್ಲ ಎನ್ನುವುದನ್ನು ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಯಥೇಚ್ಚವಾಗಿ ಜಲ ಸಂಪನ್ಮೂಲದ ಲಭ್ಯತೆ ಇದ್ದರೂ ಕೊಪ್ಪಳ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಸಮರ್ಪಕವಾಗಿ ನೀರಾವರಿ ಸೌಲಭ್ಯವನ್ನು ಒದಗಿಸಲು ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯಪಾಲರ ಭಾಷಣದಲ್ಲಿ ನೀರಾವರಿಯ ಕುರಿತು ಅಥವಾ ಈ ಯೋಜನೆಗಳ ಕುರಿತು ಯಾವುದೇ ಸ್ಪಷ್ಟ ಪ್ರಸ್ತಾಪವಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಎರಡೂ ವಲಯಗಳು ಸೇರಿದಂತೆ 2 ಕೋಟಿಗೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ನಯಾಪೈಸೆಯ ಕಾರ್ಯಕ್ರಮಗಳನ್ನು ರೂಪಿಸಿಲ್ಲ ಎನ್ನುವುದನ್ನು ಒಪ್ಪಿಕೊಂಡಿದೆ. ಹಾಗೆಯೇ ರಾಜ್ಯದಲ್ಲಿ 88 ಲಕ್ಷ ಕೃಷಿ ಕುಟುಂಬಗಳಿವೆ. ಕೃಷಿಯನ್ನು ಲಾಭದಾಯಕ ಚಟುವಟಿಕೆಯನ್ನಾಗಿಸಲು ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದರು.

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿದಂತೆ ಕರ್ನಾಟಕದ ಅಭಿವೃದ್ಧಿಗೆ ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಉಲ್ಲೇಖಗಳಿಲ್ಲ. ರಾಜ್ಯವು ಇಂದು ಅನುಭವಿಸುತ್ತಿರುವ ದೊಡ್ಡ ಸಮಸ್ಯೆ ಭ್ರಷ್ಟಚಾರದ್ದು. ಈ ಸಮಸ್ಯೆಯನ್ನು ಹೋಗಲಾಡಿಸಲು ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬ ಬಗ್ಗೆ ಪ್ರಸ್ತಾಪವಿಲ್ಲದ್ದರಿಂದ ಸರ್ಕಾರ ಭ್ರಷ್ಟಾಚಾರದ ಪರವಾಗಿರುವುದನ್ನು ರಾಜ್ಯಪಾಲರ ಭಾಷಣವು ದೃಢೀಕರಿಸುತ್ತಿದೆ ಎಂದು ಆಪಾದಿಸಿದ್ದಾರೆ.

ರಾಜ್ಯಪಾಲರು ತಮ್ಮ ಭಾಷಣದಲ್ಲಿ ನಾಡಪ್ರಭು ಕೆಂಪೇಗೌಡ, ಅರ್ಕಾವತಿ, ಡಾ.ಶಿವರಾಮ ಕಾರಂತ ಬಡಾವಣೆಗಳ ಪ್ರಸ್ತಾಪ ಮಾಡಿದ್ದಾರೆ. ಈ ಎಲ್ಲಾ ಬಡಾವಣೆಗಳೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಗೊಂಡ ಬಡಾವಣೆಗಳಾಗಿವೆ. ಹಾಗೆಯೇ ತುಮಕೂರು ರಸ್ತೆಯಿಂದ ಹೊಸೂರುವರೆಗಿನ 100 ಮೀಟರ್ ಅಗಲದ ಫೆರಿಫೆರಲ್ ರಸ್ತೆ ಮತ್ತು ಸಬ್ ಅರ್ಬನ್ ರೈಲು ಯೋಜನೆಯ ಮಾತನ್ನು ಕಳೆದ ನಾಲ್ಕು ವರ್ಷಗಳಿಂದ ಕೇಳಿ ಸಾಕಾಗಿದೆ. ಯೋಜನೆ ಆರಂಭವೂ ಆಗುತ್ತಿಲ್ಲ. ಹೀಗಾಗಿ ರಾಜ್ಯಪಾಲರ ಬಾಯಲ್ಲಿ ಹಲವು ಸುಳ್ಳುಗಳನ್ನು ಹೇಳಿಸಲಾಗಿದೆ ಎಂದಿದ್ದಾರೆ.

ರಾಜ್ಯಪಾಲರ ಬಾಯಲ್ಲಿ ಸರ್ಕಾರ ಹೇಳಿಸಿರುವ ಅನೇಕ ಕಾರ್ಯಕ್ರಮಗಳು ಕಾಂಗ್ರೆಸ್ ಸರ್ಕಾರದ ಅವಧಿಯ ಕಾರ್ಯಕ್ರಮಗಳಾಗಿವೆ. ಕೌಶಲ್ಯ ಅಭಿವೃದ್ಧಿ ನಮ್ಮ ಸರ್ಕಾರದ ಯೋಜನೆ, ಸೋಲಾರ್ ಮತ್ತು ವಿಂಡ್ ಎಂಬ ರಿನೀವಬಲ್ ಎನರ್ಜಿ ಯೋಜನೆ ನಮ್ಮ ಸರ್ಕಾರದ್ದು. ನಾವು ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ನಿರ್ಮಿಸಿದ್ದೆವು. ಈ ಸರ್ಕಾರ ಅದನ್ನು ಮಾರಾಟ ಮಾಡಿ ಲಾಭ ಮಾಡುವುದರಲ್ಲೂ ಶಕ್ತವಾಗಿಲ್ಲ ಎಂದು ತಿಳಿಸಿದ್ದಾರೆ.

ಒಟ್ಟಾರೆ, ಬಿಜೆಪಿ ಸರ್ಕಾರವು ನಾಲ್ಕು ವರ್ಷಗಳಲ್ಲಿ ತಾನು ಏನನ್ನೂ ಮಾಡಿಲ್ಲ. ಭ್ರಷ್ಟಾಚಾರವನ್ನು ಬಿಟ್ಟು, ರಾಜ್ಯದ ಧರ್ಮ-ಜಾತಿ ಸಂಘರ್ಷವನ್ನು ಬೆಳೆಸಿದ್ದು ಬಿಟ್ಟು ಬೇರೆ ಸಾಧನೆಗಳನ್ನು ಮಾಡಿಲ್ಲ ಎನ್ನುವುದನ್ನು ರಾಜ್ಯಪಾಲರ ಭಾಷಣದಲ್ಲಿ ಒಪ್ಪಿಕೊಂಡಿದೆ. ಹೀಗೆ ತನ್ನ ವೈಫಲ್ಯವನ್ನು ಒಪ್ಪಿಕೊಂಡಿರುವುದಕ್ಕೆ ರಾಜ್ಯಪಾಲರನ್ನು ಮತ್ತು ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

Tags: Congress Partyಬಿಜೆಪಿರಾಜ್ಯಪಾಲ ಥಾವರಚಂದ್ ಗೆಹಲೋತ್ಸಿದ್ದರಾಮಯ್ಯ
Previous Post

ಅಭಿವೃದ್ಧಿ ಪಥದಲ್ಲಿ ದಾಪುಗಾಲಿಡುತ್ತಿರುವ ರಾಜ್ಯ ಸರ್ಕಾರ: ರಾಜ್ಯಪಾಲ ಥಾವರಚಂದ್ ಗೆಹಲೋತ್

Next Post

ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ದಾಖಲೆಗಳ  ಪರಿಶೀಲನೆ

Related Posts

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?
Top Story

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

by ಪ್ರತಿಧ್ವನಿ
May 22, 2026
0

ಕಲಿಯುಗದ ಪ್ರತ್ಯಕ್ಷ ದೈವ ತಿರುಪತಿ ದೇವರ ದರ್ಶನಕ್ಕಾಗಿ ಆಗಮಿಸುವ ಸಾಮಾನ್ಯ ಭಕ್ತರಿಗೆ ತಿರುಮಲದ ತಿರುಪತಿ ದೇವಸ್ಥಾನ ಮಹತ್ವದ ಸಿಹಿಸುದ್ದಿ ನೀಡಿದೆ. ಇನ್ಮುಂದೆ ಗಂಟೆಗಟ್ಟಲೆ ಕಾಯುವ ಅವಶ್ಯಕತೆ ಕಡಿಮೆಯಾಗಲಿದ್ದು,...

Read moreDetails
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಕಸಬ್ ಉದಾಹರಣೆ ನೀಡಿ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಪ್ರಶ್ನೆ ಹೀಗಿದೆ! ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಗಂಭೀರ ವಾದ

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

May 22, 2026
‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

May 22, 2026
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
Next Post
ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ದಾಖಲೆಗಳ  ಪರಿಶೀಲನೆ

ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ದಾಖಲೆಗಳ  ಪರಿಶೀಲನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada