• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ

Any Mind by Any Mind
May 2, 2023
in ಕರ್ನಾಟಕ
0
ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆ(karnataka assembly election20023) ಇದೇ ಮೇ 10ರಂದು ನಡೆಯಲಿದೆ. ಈಗಾಗಲೇ ರಾಜಕೀಯ ನಾಯಕರು ಕೂಡ ಅಖಾಡಕ್ಕಿಳಿದು, ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ಹಿಂದೆ ಜೆಡಿಎಸ್‌ ಹಾಗೂ ಬಿಜೆಪಿ(BJP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಮತದಾರರಲ್ಲಿ ಭರವಸೆ ಮೂಡಿಸುವ ಕೆಲಸ ಮಾಡಿತ್ತು. ಇದೀಗ ಕಾಂಗ್ರೆಸ್‌(congress) ಪಕ್ಷದಿಂದಲೂ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ರು. ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ, ಮಾತನಾಡಿದ ಅವರು, ʻಚುನಾವಣಾ ಪ್ರಣಾಳಿಕೆ ಎಂಬುದು ಮತ ಗಳಿಕೆಯ ಸಾಧನವಲ್ಲ, ಅದು ರಾಜ್ಯದ ವಿಕಾಸಕ್ಕಾಗಿ, ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯನ್ನು ತರಲು ಇರುವ ಸಾಧನ. ನಾವು ಒಮ್ಮೆ ಭರವಸೆಗಳನ್ನು ಕೊಟ್ಟ ಮೇಲೆ 5 ವರ್ಷಗಳ ಅವಧಿಯಲ್ಲಿ ಅದನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. 2013ರಲ್ಲಿ ನಾವು ಪಕ್ಷದ ಪ್ರಣಾಳಿಕೆಯ ಮೂಲಕ ರಾಜ್ಯದ ಜನರಿಗೆ 165 ಭರವಸೆಗಳನ್ನು ನೀಡಿ ಅದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು. ನಮ್ಮ ಸರ್ಕಾರದ ಕೊನೆಯ ಬಜೆಟ್‌ ನಲ್ಲಿ ಯಾವ ಭರವಸೆ ನೀಡಿದ್ದೆವು ಮತ್ತು ಏನು ಮಾಡಿದ್ದೇವೆ ಎಂದು ಸ್ಪಷ್ಟವಾಗಿ ಹೇಳಿದ್ದೆವು. ಆದರೆ ಬಿಜೆಪಿಯವರು 2018ರಲ್ಲಿ ಪ್ರಣಾಳಿಕೆಯ ಮೂಲಕ ನೀಡಿದ್ದ 600 ಭರವಸೆಗಳಲ್ಲಿ 3 ವರ್ಷ 10 ತಿಂಗಳ ಅವಧಿಯಲ್ಲಿ ಈಡೇರಿಸಿದ್ದು ಕೇವಲ 55 ಭರವಸೆಗಳು ಮಾತ್ರ. 10% ಭರವಸೆಗಳನ್ನು ಕೂಡ ಈಡೇರಿಸಲು ಅವರಿಂದ ಸಾಧ್ಯವಾಗಿಲ್ಲ, ನಿನ್ನೆ ಅವರು ನೀಡಿರುವ ಭರವಸೆಗಳನ್ನು ಕೂಡ ಈಡೇರಿಸುವ ಉದ್ದೇಶದಿಂದ ನೀಡಿರುವುದಲ್ಲ. ಕೇಂದ್ರದ ಬಿಜೆಪಿ ಸರ್ಕಾರ ಇದೇ ರೀತಿ ಮಾಡಿದೆ. ರೈತರಿಗೆ ಬಿಜೆಪಿ ಪಕ್ಷ(BJP party) ಅನೇಕ ಭರವಸೆಗಳನ್ನು ನೀಡಿತ್ತು, ಅದರಲ್ಲಿ ಬಹುತೇಕ ಭರವಸೆಗಳನ್ನು ಈಡೇರಿಸಿಲ್ಲ, ಬಿಜೆಪಿಗೆ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಬೇಕು ಎಂಬ ಪ್ರಾಮಾಣಿಕತೆ ಇಲ್ಲ, ಈ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷ ಬದ್ಧತೆಯಿಂದ ನಡೆದುಕೊಂಡಿದೆ ಎಂದು ಸಿದ್ದರಾಮಯ್ಯ(siddaramaiah) ಹೇಳಿದ್ರು.

ADVERTISEMENT

ʻಹಿಂದೆ ನಾವು ಅಧಿಕಾರದಲ್ಲಿದ್ದಾಗ ಪರಿಶಿಷ್ಟ ಜಾತಿಗಳ – ವರ್ಗದ, ಹಿಂದುಳಿದ ವರ್ಗದ, ಅಲ್ಪಸಂಖ್ಯಾತ ವರ್ಗಗಳ ಜನರ ಸಬಲೀಕರಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ಕೊಟ್ಟಿದ್ದೆವು. ಉದಾಹರಣೆಗೆ ಎಸ್‌,ಸಿ,ಪಿ/ಟಿ,ಎಸ್‌,ಪಿ ಕಾಯ್ದೆ, ಬಹುಶಃ ತೆಲಂಗಾಣ ರಾಜ್ಯವನ್ನು ಬಿಟ್ಟರೆ ಬೇರೆ ಯಾವ ರಾಜ್ಯಗಳಲ್ಲಿ ಇಂಥದ್ದೊಂದು ಕಾಯ್ದೆ ಇರಲಿಲ್ಲ. ದಲಿತರ ಬಗ್ಗೆ ಬಹಳ ಮಾತನಾಡುವ ಮೋದಿ ಅವರು ಸಬ್‌ ಕ ಸಾಥ್‌, ಸಬ್‌ ಕ ವಿಕಾಸ್‌ ಎನ್ನುತ್ತಾರೆ ಆದರೆ ಇಂಥ ಕಾಯ್ದೆಯನ್ನು ಯಾಕೆ ಅವರು ಕೇಂದ್ರದಲ್ಲಿ ಜಾರಿಗೆ ತಂದಿಲ್ಲ. ಈ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಖರ್ಚು ಮಾಡುವ ಕೆಲಸವನ್ನು ಯಾಕೆ ಮಾಡಿಲ್ಲ. 2013ರಲ್ಲಿ ನಮ್ಮ ಸರ್ಕಾರ ಈ ಕಾಯ್ದೆ ಜಾರಿಗೆ ತಂದಿತು. ಅಲ್ಲಿಯವರೆಗೆ ಈ ಯೋಜನೆಗಳಿಗೆ ಖರ್ಚಾಗಿದ್ದ ಹಣ 22,000 ಕೋಟಿ ರೂಪಾಯಿ. ಕಾಯ್ದೆ ಜಾರಿಯಾದ ನಂತರ 88,000 ಕೋಟಿ ರೂಪಾಯಿ ಈ ಯೋಜನೆಗೆ ಖರ್ಚಾಯಿತು. ನಮ್ಮ ಸರ್ಕಾರದ ಕೊನೆಯ ಬಜೆಟ್‌ ನಲ್ಲಿ ಈ ಯೋಜನೆಗೆ ಮೀಸಲಾಗಿಟ್ಟಿದ್ದ ಹಣ 30,000 ಕೋಟಿ, ಆಗ ನಮ್ಮ ಬಜೆಟ್‌ ಗಾತ್ರ ಇದ್ದದ್ದು 2.02 ಲಕ್ಷ ಕೋಟಿ ರೂಪಾಯಿ. ಈ ಸಾಲಿನ ಬಜೆಟ್‌ ಗಾತ್ರ 3.10 ಲಕ್ಷ ಕೋಟಿ ರೂಪಾಯಿ ಇದೆ ಆದರೆ ಈ ಯೋಜನೆಗೆ ಇಟ್ಟಿರುವ ಹಣ 28,000 ಕೋಟಿ ರೂಪಾಯಿ. ಒಂದು ಕಡೆ ಬಜೆಟ್‌ ಗಾತ್ರ ಹೆಚ್ಚಾಗಿದೆ, ಆದರೆ ಈ ಯೋಜನೆಗೆ ಖರ್ಚು ಮಾಡುವ ಹಣ ಕಡಿಮೆಯಾಗಿದೆ. ಅಂದರೆ ಬಿಜೆಪಿಗೆ ಪರಿಶಿಷ್ಟ ಜಾತಿ ಮತ್ತು ವರ್ಗದ ಜನರ ಪ್ರಗತಿ ಆಗಬೇಕು ಎಂಬುದರಲ್ಲಿ ಆಸಕ್ತಿ ಇಲ್ಲ. ಬಿಜೆಪಿ ಎಂದಿಗೂ ಸಾಮಾಜಿಕ ನ್ಯಾಯದ ಪರ ಇಲ್ಲ. ಮಂಡಲ್‌ ಕಮಿಷನ್‌ ವರದಿ ವಿರೋಧ ಮಾಡಿದವರು, ಸಂವಿಧಾನದ 73 ಹಾಗು 74ನೇ ತಿದ್ದುಪಡಿ ಮಸೂದೆಗೆ ವಿರೋಧ ಮಾಡಿದ್ದು, ಉನ್ನತ ಶಿಕ್ಷಣದಲ್ಲಿ ಮೀಸಲಾತಿ ನೀಡಿದಾಗ ವಿರೋಧ ಮಾಡಿದವರು ಬಿಜೆಪಿಯವರು. ಈಗ ಸಾಮಾಜಿಕ ನ್ಯಾಯದ ಬಗ್ಗೆ ಪುಂಕಾನುಪುಂಕವಾಗಿ ಮಾತನಾಡುತ್ತಾರೆ. ಶೋಷಿತ ಜನರ ಬಗ್ಗೆ ಮಾತನಾಡುವ ಯಾವ ನೈತಿಕತೆ ಬಿಜೆಪಿಗೆ ಇದೆ? ಅಂತ ಸಿದ್ದರಾಮಯ್ಯ ಬಿಜೆಪಿ(BJP) ವಿರುದ್ಧ ಕಿಡಿಕಾರಿದರು.

Tags: #congress#election2023#jds#karnataka#karnatakaassemblyelection#pratidhvani#pratidhvanidigital#pratidhvaninews#siddaramaiah#statementBJP
Previous Post

ಮಂಡ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ; ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ: ಸಿಎಂ ಬಸವರಾಜ ಬೊಮ್ಮಾಯಿ

Next Post

ʻಬಿಜೆಪಿಯ ಚುನಾವಣಾ ಪ್ರಣಾಳಿಕೆ ಎಲ್ಲಾ ಚುನಾವಣೆ ಗಿಮಿಕ್ʼ: ಹೆಚ್‌.ಡಿ.ಕುಮಾರಸ್ವಾಮಿ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ʻಬಿಜೆಪಿಯ ಚುನಾವಣಾ ಪ್ರಣಾಳಿಕೆ ಎಲ್ಲಾ ಚುನಾವಣೆ ಗಿಮಿಕ್ʼ: ಹೆಚ್‌.ಡಿ.ಕುಮಾರಸ್ವಾಮಿ

ʻಬಿಜೆಪಿಯ ಚುನಾವಣಾ ಪ್ರಣಾಳಿಕೆ ಎಲ್ಲಾ ಚುನಾವಣೆ ಗಿಮಿಕ್ʼ: ಹೆಚ್‌.ಡಿ.ಕುಮಾರಸ್ವಾಮಿ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada