ADVERTISEMENT
  • Home
  • About Us
  • ಕರ್ನಾಟಕ
Saturday, May 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಗಳ ನಡುವೆ ಜಲ ವಿವಾದ ಸೃಷ್ಟಿಸಲೆಂದೇ ಕೇಂದ್ರ ಸರ್ಕಾರವು ನದಿ ಜೋಡಣೆ ಪ್ರಸ್ತಾಪಿಸಿದೆ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
February 4, 2022
in ಕರ್ನಾಟಕ
0
ರಾಜ್ಯಗಳ ನಡುವೆ ಜಲ ವಿವಾದ ಸೃಷ್ಟಿಸಲೆಂದೇ ಕೇಂದ್ರ ಸರ್ಕಾರವು ನದಿ ಜೋಡಣೆ ಪ್ರಸ್ತಾಪಿಸಿದೆ: ಸಿದ್ದರಾಮಯ್ಯ
Share on WhatsAppShare on FacebookShare on Telegram

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮುಂಗಡ ಪತ್ರದಲ್ಲಿ ದಕ್ಷಿಣದ ನದಿಗಳ ಜೋಡಣೆ ಪ್ರಸ್ತಾಪ ಮಾಡಿದ್ದು, ಇದಕ್ಕಾಗಿ ಸುಮಾರು 46,000 ಕೋಟಿ ರೂಪಾಯಿ ಯೋಜನೆಗೆ ಇಡುತ್ತೇವೆ ಎಂದಿದ್ದಾರೆ. ವಾಸ್ತವದಲ್ಲಿ ಇದು ಕಾರ್ಯಸಾಧುವಾದ ಯೋಜನೆಯಲ್ಲ. ನಿರ್ಮಲಾ ಸೀತಾರಾಮನ್ ಅವರು ತಮಿಳುನಾಡಿನವರಾಗಿದ್ದ ಕಾರಣಕ್ಕೆ ಈ ಯೋಜನೆ ಪ್ರಸ್ತಾಪ ಮಾಡಿರಬಹುದೇ ಹೊರತು ನಮ್ಮ ರಾಜ್ಯದ ಜೊತೆ ಚರ್ಚಿಸಿದಂತೆ ಕಾಣುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ADVERTISEMENT

ತಮ್ಮ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೃಷ್ಣ, ಗೋಧಾವರಿ, ತೆನ್ನಾರ್ ಮತ್ತು ಕಾವೇರಿ ನದಿಗಳ ಜೋಡಣೆ ಪ್ರಸ್ತಾಪವಿದೆ. ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ಯಲ್ಲಿ ಚರ್ಚಿಸಲಾಗಿದೆ. ಇದರಿಂದ 347 ಟಿ.ಎಂ.ಸಿ ನೀರು ಸಿಗಲಿದೆ. ಹೀಗಾಗಿ ದಕ್ಷಿಣ ರಾಜ್ಯಗಳಿಗೆ ನೀರು ಕೊಡಲು ಸಾಧ್ಯ ಎಂಬುದು ಅವರ ಆಲೋಚನೆ. ರಾಜಸ್ಥಾನ ಬಿಟ್ಟರೆ ದೇಶದಲ್ಲಿ ಹೆಚ್ಚು ಒಣ ಭೂಮಿ ಇರುವುದು ಕರ್ನಾಟಕದಲ್ಲಿ. ಶೇ. 70 ಕೃಷಿ ಭೂಮಿ ಮಳೆ ಆಶ್ರಿತ ಪ್ರದೇಶವಾಗಿದೆ. ನದಿಗಳ ಜೋಡಣೆಯಿಂದಾಗಿ ಹೆಚ್ಚು ನೀರು ತಮಿಳುನಾಡಿಗೆ ಹೋಗುತ್ತೆ. ರಾಜ್ಯಗಳ ಸಮ್ಮತಿ ಪಡೆಯದೆ, ಚರ್ಚೆ ನಡೆಸದೆ ಯೋಜನೆ ಜಾರಿ ಮಾಡಲು ಹೊರಟರೆ ರಾಜ್ಯಗಳ ನಡುವೆ ಜಲ ವಿವಾದ ಉದ್ಭವವಾಗಲಿದೆ. ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆದು ಯಾವ ನದಿಯಿಂದ ಎಷ್ಟು ನೀರು ಸಿಗುತ್ತದೆ, ಯಾವ ರಾಜ್ಯಗಳಿಗೆ ಎಷ್ಟು ನೀರು ಸಿಗುತ್ತದೆ ಎಂಬೆಲ್ಲ ಮಾಹಿತಿಯನ್ನು ನೀಡಬೇಕು. ಒಕ್ಕೂಟ ವ್ಯವಸ್ಥೆಯಲ್ಲಿ ಮಾಹಿತಿ ಪಡೆಯುವುದು ಪ್ರತಿ ರಾಜ್ಯದ ಹಕ್ಕು ಎಂದು ತಿಳಿಸಿದ್ದಾರೆ.

ಶೇ. 90 ರಷ್ಟು ತಮಿಳುನಾಡಿಗೆ ಅನುಕೂಲ

ಏಕಮುಖವಾದ ನಿರ್ಧಾರ ಮಾಡಿ, ರಾಜ್ಯಗಳ ಮೇಲೆ ಹೇರುವ ಪ್ರಯತ್ನ ಸರ್ವಾಧಿಕಾರಿ ಧೋರಣೆಯಾಗುತ್ತದೆ. ಇದನ್ನು ನಾನು ಖಂಡಿಸುತ್ತೇನೆ. ಎರಡು ಹಂತದಲ್ಲಿ ಯೋಜನೆ ಜಾರಿ ಮಾಡ್ತೇವೆ, ಮೊದಲ ಹಂತದಲ್ಲಿ ಕರ್ನಾಟಕಕ್ಕೆ ಅನುಕೂಲ ಆಗಲ್ಲ, ಎರಡನೇ ಹಂತದಲ್ಲಿ ಸ್ವಲ್ಪ ಅನುಕೂಲ ಆಗಬಹುದು ಎಂದು ಕೇಂದ್ರ ಸರ್ಕಾರ ಹೇಳುತ್ತೆ. ನನ್ನ ಪ್ರಕಾರ ಶೇ. 90 ತಮಿಳುನಾಡಿಗೆ ಅನುಕೂಲವಾಗುತ್ತೆ ಎಂದು ವಿವರಿಸಿದರು.

1978 ರಲ್ಲಿ ಮೊರಾರ್ಜಿ ದೇಸಾಯಿ ಅವರು ಗಂಗಾ-ಕಾವೇರಿ ನದಿ ಜೋಡಣೆ ಮಾಡುತ್ತೇವೆ ಎಂದಿದ್ದರು. ಒಂದು ಹಿಮಾಲಯದಲ್ಲಿ ಹುಟ್ಟುವ ನದಿ ಆಗಿರುವುದರಿಂದ ಅನುಕೂಲವಾಗುತ್ತೆ. ವಾಜಪೇಯಿ ಅವರು ಇದೇ ಯೋಜನೆಯನ್ನು ಪ್ರಸ್ತಾಪ ಮಾಡಿದರು. ಆದರೆ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಮತ್ತೆ ಈಗ ಅದೇ ಸುಳ್ಳನ್ನು ಹೇಳಲು ಆರಂಭ ಮಾಡಿದ್ದಾರೆ. ಬಿಜೆಪಿಯವರ ಸುಳ್ಳುಗಳಿಗೆ ಕೆಲವು ಮಾಧ್ಯಮಗಳು ಬೆಂಬಲಕ್ಕೆ ನಿಂತಿವೆ ಎಂದರು.

ಬಿಜೆಪಿಯವರು ತುಟಿ ಬಿಚ್ಚುತ್ತಿಲ್ಲ

ಬಜೆಟ್ ಮಂಡಿಸಿ ಮೂರು ದಿನ ಆದರೂ ರಾಜ್ಯದ ಯಾವೊಬ್ಬ ಸಂಸದ, ಬಿಜೆಪಿ ಸರ್ಕಾರದ ಸಚಿವರು, ಶಾಸಕರು, ಮುಖ್ಯಮಂತ್ರಿಗಳು ಯಾರೂ ಮಾತನಾಡಿಲ್ಲ. ಇವರು ರಾಜ್ಯದ ಹಿತರಕ್ಷಣೆ ಮಾಡುತ್ತಾರಾ? ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು. ಸರ್ಕಾರ ನದಿ ಜೋಡಣೆ ವಿಷಯದಲ್ಲಿ ತನ್ನ ನಿಲುವು ಹೇಳಲಿ. ರಾಜ್ಯಕ್ಕೆ ಇದರಿಂದ ಲಾಭ ಆಗುತ್ತಾ ಇಲ್ಲವೋ? ನಷ್ಟವಾಗುವುದಾದರೆ ಏನೆಲ್ಲಾ ನಷ್ಟವಾಗುತ್ತೆ? ಈ ಎಲ್ಲಾ ವಿಚಾರಗಳು ಜನರಿಗೆ ಗೊತ್ತಾಗಬೇಕು. ಸಚಿವರಾದ ಈಶ್ವರಪ್ಪ ಮತ್ತು ಆರ್.ಅಶೋಕ್ ಅವರ ಮಾತು ಕೇಳಿದರೆ ಸಂಪುಟದಲ್ಲಿ ಈ ಬಗ್ಗೆ ಚರ್ಚೆಯೇ ನಡೆದಿಲ್ಲ ಎಂಬುದು ಗೊತ್ತಾಗುತ್ತೆ. ಇದು ಕೇಂದ್ರ ಸರ್ಕಾರದ ಏಕಮುಖ ನಿರ್ಧಾರ. ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಕೇಂದ್ರದ ಗುಲಾಮರಲ್ಲ ಎಂದು ಹರಿಹಾಯ್ದರು.

ಕೇಂದ್ರ ಸರ್ಕಾರ ರಾಜ್ಯದ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿದೆ. ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಮಾತನಾಡದೆ ಸುಮ್ಮನಿರುತ್ತೆ. ಕೃಷಿ ಕಾಯ್ದೆ ರಾಜ್ಯಪಟ್ಟಿಯ ವಿಷಯ. ಇದನ್ನು ರಾಜ್ಯಗಳ ಮೇಲೆ ಹೇರಲು ಹೊರಟಿದ್ದು ಸರ್ವಾಧಿಕಾರಿ ಮನಸ್ಥಿತಿ ಆಗುತ್ತೆ. ಇದಕ್ಕೆ ಅವಕಾಶ ಮಾಡಿಕೊಡಬಾರದು. ನೆಲ, ಜಲ, ಭಾಷೆ, ಗಡಿಗಳ ವಿಚಾರದಲ್ಲಿ ನಾವು ರಾಜಕಾರಣ ಮಾಡಲ್ಲ. ಕರ್ನಾಟಕವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನದಿ ಜೋಡಣೆ ಯೋಜನೆ ಘೋಷಣೆ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಇದರಿಂದ ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕರೆದು, ಚರ್ಚಿಸಿ, ಒಮ್ಮತದ ವಿರೋಧವನ್ನು ಕೇಂದ್ರಕ್ಕೆ ತಿಳಿಸಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಮೇಕೆದಾಟು ಯೋಜನೆ ಕಡೆಗೂ ಒಲವು ತೋರಲಿ

ಆರ್ಥರ್ ಕಾಟನ್ ಎಂಬ ಇಂಜಿನಿಯರ್ ಹಿಮಾಲಯದ ನದಿಗಳನ್ನು ದಕ್ಷಿಣಕ್ಕೆ ತಿರುಗಿಸಬೇಕು ಎಂದು ಹೇಳಿದ್ದರು. ಮಾಜಿ ಜಲಸಂಪನ್ಮೂಲ ಸಚಿವರಾದ ಕೆ.ಎಲ್ ರಾವ್ ಅವರು ಸಹ ಈ ವಿಚಾರ ಪ್ರಸ್ತಾಪ ಮಾಡಿದ್ದರು. ಹಿಮಾಲಯದಲ್ಲಿ ಹುಟ್ಟುವ ನದಿಗಳು ವರ್ಷವಿಡೀ ತುಂಬಿ ಹರಿಯುವುದರಿಂದ ದಕ್ಷಿಣದ ರಾಜ್ಯಗಳ ನದಿಗಳಿಗೆ ಗಂಗಾ, ಗೋಧಾವರಿ ನದಿ ಜೋಡಣೆಯಿಂದ ಲಾಭ ಆಗಲಿದೆ ಎಂಬ ಲೆಕ್ಕಾಚಾರ ಇತ್ತು. ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಹಾಕಿ ಸರ್ಕಾರ ನಡೆಸಲು ಹೋಗಬಾರದು. ಜಲ ವಿವಾದ ಸೃಷ್ಟಿಯಾದರೆ ರಾಜ್ಯಗಳ ನಡುವೆ ವೈರತ್ವ ಹುಟ್ಟಲಿದೆ. ಕರ್ನಾಟಕ ಸರ್ಕಾರದ ಜೊತೆ ಚರ್ಚೆ ನಡೆಸದೆ ಯೋಜನೆ ಘೋಷಣೆ ಮಾಡಿದ್ದು ಸರಿಯಲ್ಲ. ಈ ಯೋಜನೆಗೆ ಆಸಕ್ತಿ ತೋರಿಸಿರುವ ನಿರ್ಮಲಾ ಸೀತಾರಾಮನ್ ಮೇಕೆದಾಟು ಯೋಜನೆ ಕಡೆಗೂ ತೋರಿಸಲಿ. ಒಂದು ಪರಿಸರ ಅನುಮತಿ ಪತ್ರ ಕೊಡಲು ಸಾಧ್ಯವಿಲ್ಲವ? ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದೇ ಕಾರಣಕ್ಕೆ ನಾನು ವಿರೋಧ ಮಾಡುತ್ತಿರುವುದು ಎಂದು ವಿವರಿಸಿದರು.

Tags: BJPCongress PartyCovid 19ಕರೋನಾಕೋವಿಡ್-19ಜಲ ವಿವಾದನದಿ ಜೋಡನೆಬಿಜೆಪಿಸಿದ್ದರಾಮಯ್ಯ
Previous Post

ಓವೈಸಿ ಗೆ Z ಭದ್ರತೆ : ಇಬ್ಬರು ಆರೋಪಿಗಳ ಬಂಧನ, ಒಬ್ಬ ರೈತ, ಇನ್ನೊಬ್ಬ ʼಹಿಂದೂ ಬಲಪಂಥೀಯ ಸಂಘಟನೆಯ ಸದಸ್ಯʼ

Next Post

ಹಿಜಾಬ್ ವಿವಾದ | ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲಿ ಹೇಳಿದೆ : ಸಿದ್ದರಾಮಯ್ಯ ಪ್ರಶ್ನೆ

Related Posts

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..
Top Story

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

by ಕೃಷ್ಣ ಮಣಿ
May 17, 2025
0

ದೇಶ, ಭದ್ರತೆ ವಿಚಾರ ಬಂದಾಗ ಪ್ರತಿಯೊಬ್ಬರು ಬದ್ಧತೆ ತೋರಬೇಕು ಎಂದು ಮೈಸೂರಲ್ಲಿ ಶಾಸಕ ತನ್ವೀರ್‌ಸೇಠ್ ಹೇಳಿದ್ದಾರೆ. ಭಾರತೀಯ ಸೇನೆ, ದೇಶದ ಪರ ಸದಾ ನಾನು ನಿಲ್ಲುತ್ತೇನೆ. ನಾವು...

Read moreDetails

Santhosh Lad ಅಂಥವ್ರು ಹಿಂಗೆಲ್ಲ ಮಾತಾಡ್ತಾರೆ ಅಂದ್ರೆ..

May 17, 2025

ಡಿಕೆ ಶಿವಕುಮಾರ್ ಸಿಎಂ ರೇಸ್ ನಲ್ಲಿ ಸಿದ್ದ…?

May 17, 2025

ಕುಮಾರಸ್ವಾಮಿ ಫ್ಯಾಮಿಲಿ ಬಗ್ಗೆ ನಾನು ಮಾತಾಡಲ್ಲ ಎಂದ ಡಿಕೆ ಸುರೇಶ್

May 17, 2025

ಅಧ್ಯಕ್ಷ ಸ್ಥಾನಕ್ಕೆ DKಸುರೇಶ್ ನಾಮಪತ್ರ ಸಲ್ಲಿಕೆ

May 17, 2025
Next Post
ಬಿಜೆಪಿ ಸರ್ಕಾರಕ್ಕೆ ಬದ್ಧತೆಯೇ ಇಲ್ಲ, 40% ಕಮಿಷನ್ ಹೊಡೆಯುವುದರಲ್ಲೇ ಮುಳುಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಹಿಜಾಬ್ ವಿವಾದ | ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲಿ ಹೇಳಿದೆ : ಸಿದ್ದರಾಮಯ್ಯ ಪ್ರಶ್ನೆ

Please login to join discussion

Recent News

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..
Top Story

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

by ಕೃಷ್ಣ ಮಣಿ
May 17, 2025
Top Story

ಕರಡಿ ಹಾಗೂ ಕರಡಿ ಮರಿಯನ್ನು ಕಂಡು ಪ್ರವಾಸಿಗರು ಫುಲ್ ಖುಷ್.

by ಪ್ರತಿಧ್ವನಿ
May 17, 2025
ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 
Top Story

ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 

by Chetan
May 17, 2025
ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ
Top Story

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

by ಕೃಷ್ಣ ಮಣಿ
May 17, 2025
ರಾಜ್ಯದಲ್ಲಿ ನುಡಿದಂತೆ ನಡೆದಿರುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್​ ಸರ್ಕಾರ..
Top Story

ರಾಜ್ಯದಲ್ಲಿ ನುಡಿದಂತೆ ನಡೆದಿರುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್​ ಸರ್ಕಾರ..

by ಕೃಷ್ಣ ಮಣಿ
May 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

May 17, 2025

Santhosh Lad ಅಂಥವ್ರು ಹಿಂಗೆಲ್ಲ ಮಾತಾಡ್ತಾರೆ ಅಂದ್ರೆ..

May 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada