• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ : Siddaramaiah Says He won’t be Able to Win in Kolar

Any Mind by Any Mind
March 20, 2023
in Top Story, ಕರ್ನಾಟಕ, ರಾಜಕೀಯ
0
ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ : Siddaramaiah Says He won’t be Able to Win in Kolar
Share on WhatsAppShare on FacebookShare on Telegram

ಕೋಲಾರ :ಮಾ;20; ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು. ಸರ್ವೇ ರಿಪೋರ್ಟ್ ತೆಗೆದುಕೊಂಡಿದ್ದಾರೆ. ಅವರಿಗೆ ಕೋಲಾರ ಕ್ಷೇತ್ರ ಪೂರಕವಾಗಿಲ್ಲ, ಹಾಗಾಗಿ ಚುನಾವಣೆಯಲ್ಲಿ ಗೆಲ್ಲಲು ಆಗಲ್ಲ ಅಂತ ಗೊತ್ತಾಗಿದೆ. ಅದಕ್ಕಾಗಿ ಅವರು ಹೈಕಮಾಂಡ್ ಹೇಗೆ ಹೇಳಿದರೆ ಹಾಗೆ ಎಂದು ಹೇಳುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ವಿಚಾರದಲ್ಲಿ ಅವರೇ ಹೈಕಮಾಂಡ್ ಹೊರತು ಕಾಂಗ್ರೆಸ್ ಪಕ್ಷವಲ್ಲ. ಎಲ್ಲಿ ಸ್ಪರ್ಧೆ ಮಾಡಬೇಕು ಅಂದ್ರೆ ಅಲ್ಲಿ ಸ್ಪರ್ಧೆ ಮಾಡುವ ಶಕ್ತಿ ಅವರಿಗಿದೆ. ಕೋಲಾರದಲ್ಲಿ ಗೆಲ್ಲೋಕೆ ಆಗಲ್ಲ ಅಂತೇಳಿ ಬೇರೆ ಕಡೆ ಹೋಗುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಹೇಳಿದರು.

ADVERTISEMENT

ಕೋಲಾರ ಕ್ಷೇತ್ರದಲ್ಲಿ ಗೆದ್ದು ಮುಖ್ಯಮಂತ್ರಿಯಾದರೆ ಕೋಲಾರ ಜಿಲ್ಲೆ ಅಭಿವೃದ್ಧಿಯಾಗುತ್ತೆ ಅಂತ ಸಿದ್ದರಾಮಯ್ಯಗೆ ಘಟಬಂಧನ್ ನಾಯಕರು ಹೇಳಿದ್ದಾರೆ. ಆದ್ರೆ ವಾಸ್ತವಾಂಶ ಅದಲ್ಲ. ಸಿದ್ದರಾಮಯ್ಯ ಕೋಲಾರಕ್ಕೆ ಬರುವುದರಿಂದ ಶ್ರೀನಿವಾಸಪುರ, ಮಾಲೂರು, ಬಂಗಾರಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬಹುದು ಅಂತ ಪ್ಲಾನ್ ಮಾಡಿದ್ದರು. ಆದ್ರೆ ಘಟಬಂಧನ್ ಅವರ ಪ್ಲಾನ್ ಫ್ಲಾಪ್ ಆಗಿದೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಬರದಿದ್ರೆ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ವರ್ತೂರು ಪ್ರಕಾಶ್, ಸಿದ್ದರಾಮಯ್ಯ ದೊಡ್ಡವರಾ? ಬ್ಯಾಲಹಳ್ಳಿ ದೊಡ್ಡವರಾ? ಯಾಕಂದ್ರೆ ದೊಡ್ಡವರಾದ ಸಿದ್ದರಾಮಯ್ಯ ಅವರೇ ನನ್ನ ವಿರುದ್ಧ ಸ್ಪರ್ಧಿಸುತ್ತಿಲ್ಲ. ಇನ್ನು ಬ್ಯಾಲಹಳ್ಳಿ ಗೋವಿಂದಗೌಡರು ಯಾವ ಲೆಕ್ಕ. ಕಾಂಗ್ರೆಸ್ ಪಕ್ಷದಿಂದ ನನ್ನ ವಿರುದ್ಧ ಯಾರೇ ಸ್ಪರ್ಧಿಸಲಿ. ನನಗೆ ಯಾವುದೇ ಸಮಸ್ಯೆಯಿಲ್ಲ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷ ನೆಲ ಕಚ್ಚುತ್ತಿದೆ. ಹಾಗಾಗಿ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿಲ್ಲ ಎಂದರು.

ಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳೆಯರಿಗೆ ಸಾಲ ಕೊಟ್ಟಿದ್ದಾರೆ. ಆದ್ರೆ ಮತಗಳನ್ನು ಪಡೆಯಲು ಆಗುವುದಿಲ್ಲ. ಒಂದು ವೇಳೆ ಟಿಕೆಟ್ ಕೊಟ್ಟರೂ ಎದುರಿಸಲು ನಾನು ಸಿದ್ಧನಿದ್ದೇನೆ. ಸಿದ್ದರಾಮಯ್ಯ ಬಂದಾಗ ಯಾರ್ಯಾರು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರೋ ಅವರೆಲ್ಲಾ ಈಗ ನನ್ನ ಸಂಪರ್ಕಕ್ಕೆ ಬಂದಿದ್ದಾರೆ. ಇನ್ನೊಂದು ವಾರದಲ್ಲಿ ಸಂಪೂರ್ಣವಾಗಿ ನನ್ನ ಕಡೆ ಇರುತ್ತಾರೆ. ಈಗಾಗಲೇ ಕ್ಷೇತ್ರದಲ್ಲಿ ನಾನು ಚುನಾವಣೆ ನಡೆಸಿದ್ದೇನೆ. ನಮ್ಮ ಕಾರ್ಯಕರ್ತರು ಮತ ಹಾಕುವುದು ಮಾತ್ರ ಬಾಕಿ ಅಷ್ಟೇ ಎಂದರು.

Tags: BJPBjpKaranatakacmbomamiCongress PartyDKShivakumarKolarKPCCsiddaramaiahvarturprakashಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉರಿಗೌಡ-ನಂಜೇಗೌಡ: ಬಿಜೆಪಿಯ ರಾಜಕೀಯ ಲೆಕ್ಕಾಚಾರ ಬುಡಮೇಲುಗೊಳಿಸುತ್ತಿರುವ ಒಕ್ಕಲಿಗರು.!

Next Post

ಇಟಾಲಿಯನ್ ‍‍ಮತ್ತು ಸ್ಪ್ಯಾನಿಶ್ ಭಾಷೆಗಳಲ್ಲಿ ಕನ್ನಡದ ʻಕಾಂತಾರʼ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಸ್ವಿಜರ್ಲ್ಯಾಂಡ್ನ ಜಿನಿವಾ ನಗರದಲ್ಲಿ “ಕಾಂತಾರ” ಸಿನಿಮಾ ಪ್ರದರ್ಶನ

ಇಟಾಲಿಯನ್ ‍‍ಮತ್ತು ಸ್ಪ್ಯಾನಿಶ್ ಭಾಷೆಗಳಲ್ಲಿ ಕನ್ನಡದ ʻಕಾಂತಾರʼ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada