Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ : Siddaramaiah Says He won’t be Able to Win in Kolar

ಪ್ರತಿಧ್ವನಿ

ಪ್ರತಿಧ್ವನಿ

March 20, 2023
Share on FacebookShare on Twitter

ಕೋಲಾರ :ಮಾ;20; ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು. ಸರ್ವೇ ರಿಪೋರ್ಟ್ ತೆಗೆದುಕೊಂಡಿದ್ದಾರೆ. ಅವರಿಗೆ ಕೋಲಾರ ಕ್ಷೇತ್ರ ಪೂರಕವಾಗಿಲ್ಲ, ಹಾಗಾಗಿ ಚುನಾವಣೆಯಲ್ಲಿ ಗೆಲ್ಲಲು ಆಗಲ್ಲ ಅಂತ ಗೊತ್ತಾಗಿದೆ. ಅದಕ್ಕಾಗಿ ಅವರು ಹೈಕಮಾಂಡ್ ಹೇಗೆ ಹೇಳಿದರೆ ಹಾಗೆ ಎಂದು ಹೇಳುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ವಿಚಾರದಲ್ಲಿ ಅವರೇ ಹೈಕಮಾಂಡ್ ಹೊರತು ಕಾಂಗ್ರೆಸ್ ಪಕ್ಷವಲ್ಲ. ಎಲ್ಲಿ ಸ್ಪರ್ಧೆ ಮಾಡಬೇಕು ಅಂದ್ರೆ ಅಲ್ಲಿ ಸ್ಪರ್ಧೆ ಮಾಡುವ ಶಕ್ತಿ ಅವರಿಗಿದೆ. ಕೋಲಾರದಲ್ಲಿ ಗೆಲ್ಲೋಕೆ ಆಗಲ್ಲ ಅಂತೇಳಿ ಬೇರೆ ಕಡೆ ಹೋಗುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಹೇಳಿದರು.

ಹೆಚ್ಚು ಓದಿದ ಸ್ಟೋರಿಗಳು

BSPಯಿಂದ ಲೋಕಸಭಾ ಸಂಸದ ಡ್ಯಾನಿಶ್‌ ಅಲಿ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ- JDSನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ

‘ BJP ಅಂದರೆ ಬಕೆಟ್ ಜನತಾ ಪಾರ್ಟಿ’

ಕೋಲಾರ ಕ್ಷೇತ್ರದಲ್ಲಿ ಗೆದ್ದು ಮುಖ್ಯಮಂತ್ರಿಯಾದರೆ ಕೋಲಾರ ಜಿಲ್ಲೆ ಅಭಿವೃದ್ಧಿಯಾಗುತ್ತೆ ಅಂತ ಸಿದ್ದರಾಮಯ್ಯಗೆ ಘಟಬಂಧನ್ ನಾಯಕರು ಹೇಳಿದ್ದಾರೆ. ಆದ್ರೆ ವಾಸ್ತವಾಂಶ ಅದಲ್ಲ. ಸಿದ್ದರಾಮಯ್ಯ ಕೋಲಾರಕ್ಕೆ ಬರುವುದರಿಂದ ಶ್ರೀನಿವಾಸಪುರ, ಮಾಲೂರು, ಬಂಗಾರಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬಹುದು ಅಂತ ಪ್ಲಾನ್ ಮಾಡಿದ್ದರು. ಆದ್ರೆ ಘಟಬಂಧನ್ ಅವರ ಪ್ಲಾನ್ ಫ್ಲಾಪ್ ಆಗಿದೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಬರದಿದ್ರೆ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ವರ್ತೂರು ಪ್ರಕಾಶ್, ಸಿದ್ದರಾಮಯ್ಯ ದೊಡ್ಡವರಾ? ಬ್ಯಾಲಹಳ್ಳಿ ದೊಡ್ಡವರಾ? ಯಾಕಂದ್ರೆ ದೊಡ್ಡವರಾದ ಸಿದ್ದರಾಮಯ್ಯ ಅವರೇ ನನ್ನ ವಿರುದ್ಧ ಸ್ಪರ್ಧಿಸುತ್ತಿಲ್ಲ. ಇನ್ನು ಬ್ಯಾಲಹಳ್ಳಿ ಗೋವಿಂದಗೌಡರು ಯಾವ ಲೆಕ್ಕ. ಕಾಂಗ್ರೆಸ್ ಪಕ್ಷದಿಂದ ನನ್ನ ವಿರುದ್ಧ ಯಾರೇ ಸ್ಪರ್ಧಿಸಲಿ. ನನಗೆ ಯಾವುದೇ ಸಮಸ್ಯೆಯಿಲ್ಲ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷ ನೆಲ ಕಚ್ಚುತ್ತಿದೆ. ಹಾಗಾಗಿ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿಲ್ಲ ಎಂದರು.

ಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳೆಯರಿಗೆ ಸಾಲ ಕೊಟ್ಟಿದ್ದಾರೆ. ಆದ್ರೆ ಮತಗಳನ್ನು ಪಡೆಯಲು ಆಗುವುದಿಲ್ಲ. ಒಂದು ವೇಳೆ ಟಿಕೆಟ್ ಕೊಟ್ಟರೂ ಎದುರಿಸಲು ನಾನು ಸಿದ್ಧನಿದ್ದೇನೆ. ಸಿದ್ದರಾಮಯ್ಯ ಬಂದಾಗ ಯಾರ್ಯಾರು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರೋ ಅವರೆಲ್ಲಾ ಈಗ ನನ್ನ ಸಂಪರ್ಕಕ್ಕೆ ಬಂದಿದ್ದಾರೆ. ಇನ್ನೊಂದು ವಾರದಲ್ಲಿ ಸಂಪೂರ್ಣವಾಗಿ ನನ್ನ ಕಡೆ ಇರುತ್ತಾರೆ. ಈಗಾಗಲೇ ಕ್ಷೇತ್ರದಲ್ಲಿ ನಾನು ಚುನಾವಣೆ ನಡೆಸಿದ್ದೇನೆ. ನಮ್ಮ ಕಾರ್ಯಕರ್ತರು ಮತ ಹಾಕುವುದು ಮಾತ್ರ ಬಾಕಿ ಅಷ್ಟೇ ಎಂದರು.

RS 500
RS 1500

SCAN HERE

Pratidhvani Youtube

«
Prev
1
/
6246
Next
»
loading
play
Shashikumar : ಲೀಲಮ್ಮನ ಅಂತಿಮ ದರ್ಶನಕ್ಕೆ ಬಂದ ಶಶಿಕುಮಾರ್
play
DK Shivakumar : ಮೊನ್ನೆ ಕೊನೆ ಭೇಟಿ, ಲೀಲಾವತಿ ನನ್ನ ಮನೆಗೆ ಬಂದಿದ್ರು
«
Prev
1
/
6246
Next
»
loading

don't miss it !

Assembly Live Results
ಇತರೆ

ತೆಲಂಗಾಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ

by ಲಿಖಿತ್‌ ರೈ
December 3, 2023
ಚಿನ್ನದ ಸರ ಕದ್ದು ಎಸ್ಕೇಪ್ ಆದ ತಾಯಿ-ಮಗಳು..!
ಕರ್ನಾಟಕ

ಚಿನ್ನದ ಸರ ಕದ್ದು ಎಸ್ಕೇಪ್ ಆದ ತಾಯಿ-ಮಗಳು..!

by Prathidhvani
December 5, 2023
ತೆಂಗಿನಕಾಯಿ ಎಂದು ಪರಿಶೀಲನೆಗೆ ಹೋದಾಗ ಕಾದಿತ್ತು ಆಪತ್ತು
ಇದೀಗ

ತೆಂಗಿನಕಾಯಿ ಎಂದು ಪರಿಶೀಲನೆಗೆ ಹೋದಾಗ ಕಾದಿತ್ತು ಆಪತ್ತು

by Prathidhvani
December 3, 2023
ರೇವಂತ್ ರೆಡ್ಡಿಗೆ ತೆಲಂಗಾಣ ಸಿಎಂ ಪಟ್ಟ : ನಾಳೆಯೇ ಪ್ರಮಾಣ ವಚನ!?
ದೇಶ

ರೇವಂತ್ ರೆಡ್ಡಿಗೆ ತೆಲಂಗಾಣ ಸಿಎಂ ಪಟ್ಟ : ನಾಳೆಯೇ ಪ್ರಮಾಣ ವಚನ!?

by Prathidhvani
December 5, 2023
Ram Mandir: ರಾಮಮಂದಿರ ಉದ್ಘಾಟನೆ – ಉದ್ಯಮಿಗಳು, ಕರಸೇವಕರ ಕುಟುಂಬಸ್ಥರಿಗೆ ಆಹ್ವಾನ
Top Story

Ram Mandir: ರಾಮಮಂದಿರ ಉದ್ಘಾಟನೆ – ಉದ್ಯಮಿಗಳು, ಕರಸೇವಕರ ಕುಟುಂಬಸ್ಥರಿಗೆ ಆಹ್ವಾನ

by Prathidhvani
December 7, 2023
Next Post
ಸ್ವಿಜರ್ಲ್ಯಾಂಡ್ನ ಜಿನಿವಾ ನಗರದಲ್ಲಿ “ಕಾಂತಾರ” ಸಿನಿಮಾ ಪ್ರದರ್ಶನ

ಇಟಾಲಿಯನ್ ‍‍ಮತ್ತು ಸ್ಪ್ಯಾನಿಶ್ ಭಾಷೆಗಳಲ್ಲಿ ಕನ್ನಡದ ʻಕಾಂತಾರʼ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ : ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ರೇಡ್‌..! IT Raid At Dawn in Bangalore: Raid on the offices of Shobha Developers..!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ : ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ರೇಡ್‌..! IT Raid At Dawn in Bangalore: Raid on the offices of Shobha Developers..!

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist