ಬೆಳಗಾವಿ :ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟ ಬೆನ್ನಲ್ಲೇ ವಿಪಕ್ಷ ನಾಯಕರು ಅತ್ತ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದರೆ,ಇತ್ತ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. ಅವರು ಈ ರಾಜ್ಯದ ಮಾಸ್ ಲೀಡರ್. ಇನ್ನು ಸಿಡಿ ಶಿವು ಸಿಎಂ ಆಗುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಾಹುಕಾರ್ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಮೇಲೆ ನನಗೆ ಅಪಾರ ಗೌರವವಿದೆ. ಯಾವುದೇ ರಾಜಕೀಯ ದುರುದ್ದೇಶದಿಂದ ನಾನು ಹೀಗೆ ಹೇಳುತ್ತಿಲ್ಲ. ಅವರು ರಾಜೀನಾಮೆ ನೀಡಿದರೆ, ರಾಜ್ಯದಲ್ಲಿ ಕಾಂಗ್ರೆಸ್ ಗೆ ರಾಜ್ಯದಲ್ಲಿ ಉಳಿಗಾಲವಿರಲ್ಲ. ಸಿಡಿ ಶಿವು ಅಧಿಕಾರಕ್ಕೆ ಬಂದರೆ ರಾಜ್ಯ ಅದೋಗತಿಗೆ ಹೋಗುತ್ತದೆ ಎಂದು ಕುಟುಕಿದ್ದಾರೆ.