ಕೇಂದ್ರ ಗೃಹಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಶನಿವಾರದ ದನವನ್ನು ರದ್ದು ಮಾಡಿರುವ ರಾಜ್ಯ ಬಿಜೆಪಿ ಸರ್ಕಾರದ ನಿಲುವು ನಾಡವಿರೋಧಿಯಾದುದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಸದನವನ್ನು ಇನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನೂ ಹದಿನೈದು ದಿನ ಚರ್ಚಿಸಿದರೂ ಮುಗಿಯದಷ್ಟು ಜನರ ಸಮಸ್ಯೆಗಳಿವೆ, ಅವೆಲ್ಲವನ್ನೂ ಬದಿಗೊತ್ತಿ ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿರುವುದು ಜನತೆಯ ಮೇಲೆ ಬಿಜೆಪಿ ಸರ್ಕಾರಕ್ಕಿರುವ ಅಸಡ್ಡೆಯನ್ನು ತೋರುತ್ತದೆ. ಎಂದು ಕಿಡಿಕಾರಿದ್ದಾರೆ.
ಹಳೆಯ ಪಿಂಚಣಿ ಪದ್ಧತಿ ಮರುಜಾರಿ, ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ, ಚಿಕಿತ್ಸೆ ಸಿಗದೆ ತುಮಕೂರಿನಲ್ಲಿ ಬಾಣಂತಿ, ಹಸುಗೂಸಿನ ಸಾವು ಇಂಥಾ ಹತ್ತಾರು ವಿಷಯಗಳು ಇನ್ನೂ ಚರ್ಚೆಯಾಗಬೇಕಿವೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಇದ್ಯಾವುದು ಬೇಕಿಲ್ಲ, ಅವರಿಗೆ ಬೇಕಿರುವುದು ಅಮಿತ್ ಶಾರವರ ಕೃಪಾಕಟಾಕ್ಷ ಎಂದು ಚಾಟಿ ಬೀಸಿದ್ದಾರೆ.