• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳಗಾವಿ ಗಡಿ ವಿಚಾರದಲ್ಲಿ ಸರ್ಕಾರ ಮಾಡಿದ್ದು ತಪ್ಪು..! ಸಿದ್ದರಾಮಯ್ಯ ಚಾಟಿ..

ಪ್ರತಿಧ್ವನಿ by ಪ್ರತಿಧ್ವನಿ
December 21, 2022
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಕಳೆದ ವಾರ ಬೆಳಗಾವಿ ಗಡಿ ವಿಚಾರವಾಗಿ ಮಧ್ಯಸ್ಥಿಕೆ ವಹಿಸಿ, ದೆಹಲಿಯಲ್ಲಿ ಸಭೆ ಮಾಡಿತ್ತು. ಅಮಿತ್​ ಷಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಹಾಗು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗು ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗಿಯಾಗಿದ್ದರು. ಸಭೆ ಬಳಿಕ ಕೇಂದ್ರ ಗೃಹ ಸಚಿವ ಬೆಳಗಾವಿ ಗಡಿ ವಿಚಾರವಾಗಿ ಯಾರೂ ನಮ್ಮದೂ ಎಂದು ಹೇಳಿಕೊಳ್ಳಬಾರದು. ಕೋರ್ಟ್​ ಆದೇಶ ಬರುವ ತನಕ ಶಾಂತಿ ಕಾಪಾಡಬೇಕು ಎಂದಿದ್ದರು. ಅಂದರೆ ಕರ್ನಾಟಕದ ಭಾಗವೇ ಆಗಿರುವ ಬೆಳಗಾವಿ ಕರ್ನಾಟಕದ್ದು ಎಂದು ಹೇಳಬಾರದು ಎಂದಿದ್ದನ್ನು ಪ್ರತಿಧ್ವನಿ ಅಂದೇ ಪ್ರಶ್ನಿಸಿತ್ತು. ಯಾವುದೇ ಮಾಧ್ಯಮಗಳಲ್ಲೂ ಅಮಿತ್​ ಷಾ ಹೇಳಿದ್ದು ತಪ್ಪು ಅನ್ನೋದನ್ನು ಹೇಳಲಿಲ್ಲ. ಆದರೆ ಪ್ರತಿಧ್ವನಿ ಮಾತ್ರ ನಾಡು ನುಡಿ ವಿಚಾರವಾಗಿ ದನಿ ಎತ್ತುವ ಕೆಲಸ ಮಾಡಿತ್ತು.

ADVERTISEMENT

ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಸಿದ್ದರಾಮಯ್ಯ ಅಸಮಾಧಾನ..!

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಗಡಿ ವಿಚಾರವಾಗಿ ಸರ್ಕಾರ ತೆಗೆದುಕೊಂಡ ನಿಲುವುಗಳನ್ನು ಪ್ರಶ್ನೆ ಮಾಡಿದ್ದಾರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ವಾಸ ಮಾಡುವ ಕನ್ನಡಿಗರಿಗೆ ಅಲ್ಲಿನ ಸರ್ಕಾರ ತೊಂದರೆ ಕೊಡುತ್ತಿದೆ. ಕುಡಿಯಲು‌ ನೀರು ಕೊಟ್ಟಿಲ್ಲ, ಅಭಿವೃದ್ಧಿಗೆ ಹಣವನ್ನೂ ಕೊಟ್ಟಿಲ್ಲ. ಪರಿಸ್ಥಿತಿ ಈಗಿರುವಾಗ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರೆದ ಸಭೆಗೆ ಹೋಗುವ ಅವಶ್ಯಕತೆ ಇರಲಿಲ್ಲ. ವಿವಾದ ಸುಪ್ರೀಂಕೋರ್ಟ್​ನಲ್ಲಿ ಇರುವಾಗ ಕೇಂದ್ರ ಸರ್ಕಾರದ ಸಭೆ ಅಗತ್ಯತೆ ಏನಿತ್ತು..? ಎಂದು ಪ್ರಶ್ನಿಸಿದ್ದಾರೆ. ಅದರಲ್ಲೂ ಮೂರು ಕಡೆ ಒಂದೇ ಪಕ್ಷ ಅಧಿಕಾರದಲ್ಲಿ ಇರುವಾಗ ಸಮಸ್ಯೆಯನ್ನು ಸರಳವಾಗಿ ಬಗೆಹರಿಸಬಹುದಿತ್ತು ಅಲ್ಲವೇ..? ಎಂದಿರುವ ಸಿದ್ದರಾಮಯ್ಯ,. ಮಹಾರಾಷ್ಟ್ರ ಕಿತಾಪತಿ ಬಗ್ಗೆ ಕೇಂದ್ರ ಸರ್ಕಾರ ಮೌನ ವಹಿಸದೆ ಬಾಯಿ ಮುಚ್ಚಿಕೊಂಡು ಇರಯ್ಯ ಅಂತಾ ಮಹಾರಾಷ್ಟ್ರ ಹೇಳಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ರು.

ಬೆಳಗಾವಿ ಗಡಿ ವಿಚಾರ ಚರ್ಚೆಯೇ ಆಗಿಲ್ಲ – ಸಿಎಂ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆ ಉತ್ತರ ಕೊಟ್ಟಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರದವರು ಮಾತಾಡಿದ ಕೂಡಲೇ ನಾನು ತೀಕ್ಷ್ಣವಾಗಿ ತಿರುಗೇಟು ಕೊಟ್ಟಿದ್ದೇನೆ. ಆ ಬಳಿಕ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಾರದಂತೆ, ನಿರ್ಬಂಧ ಕೂಡ ಹಾಕಿದ್ದೇವೆ. ಕಾನೂನು ಸುವ್ಯಸ್ಥೆ ಕಾಪಾಡಿದ್ದೇವೆ. ಕೇಂದ್ರ ಗೃಹ ಸಚಿವರು ಸಭೆ ಕರೆದಿದ್ದು, ಬೆಳಗಾವಿ ಗಡಿ ವಿಚಾರ ಚರ್ಚೆ ಮಾಡಲು ಅಲ್ಲಲೇ ಅಲ್ಲ. ಕೇವಲ ಲಾ ಅಂಡ್​ ಆರ್ಡರ್ ನಿಯಂತ್ರಣ ಮಾಡುವ ಬಗ್ಗೆ ಚರ್ಚೆ ಮಾಡಲು ಹೋಮ್ ಮಿನಿಸ್ಟರ್ ನಮ್ಮನ್ನು ಕರೆದಿದ್ದರು, ನಾವು ಹೋಗಿದ್ದೆವು ಎಂದಿದ್ದಾರೆ. ಇನ್ನು ಸುಪ್ರೀಂಕೋರ್ಟ್​ನಲ್ಲಿ ಕೇಸ್ ಇರುವಾಗ, ಎಲ್ಲರೂ ಶಾಂತಿಯನ್ನು ಕಾಪಾಡಿ, ಶಾಂತಿಯುತವಾಗಿ ನಡೆದಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವರು ಹೇಳಿದರು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಖಂಡನಾ ನಿರ್ಣಯ ಮಂಡಿಸಲು ನಿರ್ಧಾರ..!

ಕಾಂಗ್ರೆಸ್​, ಜೆಡಿಎಸ್​ ಸದಸ್ಯರೂ ಕೂಡ ಬೆಳಗಾವಿ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ. ಬೆಳಗಾವಿ ನಮ್ಮದು ಎಂದರು. ಈ ವಿಚಾರವಾಗಿ ಸರ್ಕಾರಕ್ಕೆ ಬೆಂಬ ಲವಾಗಿ ನಿಲ್ತೇವೆ. ಕಾನೂನು ಹೋರಾಟಕ್ಕೂ ಸೂಕ್ತ ವಕೀಲರ ನೇಮಕ ಮಾಡುವಂತೆ ಆಗ್ರಹ ಮಾಡಿದ್ರು. ಆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸದನದಲ್ಲಿ ಒಂದು ನಿರ್ಣಯ ಪಾಸ್ ಮಾಡಲು ತೀರ್ಮಾನಿಸಿದ್ರು. ಮಹಾರಾಷ್ಟ್ರ ಸರ್ಕಾರದ ನಡೆಯನ್ನು ವಿರೋಧಿಸಿ ಖಂಡನಾ ನಿರ್ಣಯ ಅಂಗೀಕಾರ ಮಂಡಿಸಿ ಅಂಗೀಕಾರ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ರು. ಈ ಮಾತಿಗೆ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸಮ್ಮತಿ ಸೂಚಿಸಿದ್ರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ರಾಜ್ಯ ನಾಯಕರ ಒಗ್ಗಟ್ಟು ಪ್ರದರ್ಶನ ಮಾಡಿದ್ದು ಸೂಕ್ತ ಎನಿಸಿತು. ಈ ಕೆಲವನ್ನು ನಿಮ್ಮ ಪ್ರತಿಧ್ವನಿ ಅಂದೇ ಖಂಡಿಸಿತ್ತು ಅನ್ನೋದು ಕೂಡ ವಿಶೇಷ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರೀತಿಗೆ ಹೆತ್ತವರಿಂದ ವಿರೋಧ-ಪ್ರೇಮಿಗಳಿಬ್ಬರು ನೇಣಿಗೆ ಶರಣು

Next Post

ಭೈರಿದೇವರಕೊಪ್ಪ ದರ್ಗಾ ಕಾರ್ಯಾಚರಣೆ ; ಪೋಲಿಸ್ ಬಂದೋಬಸ್ತ್

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
Next Post
ಭೈರಿದೇವರಕೊಪ್ಪ ದರ್ಗಾ ಕಾರ್ಯಾಚರಣೆ ; ಪೋಲಿಸ್ ಬಂದೋಬಸ್ತ್

ಭೈರಿದೇವರಕೊಪ್ಪ ದರ್ಗಾ ಕಾರ್ಯಾಚರಣೆ ; ಪೋಲಿಸ್ ಬಂದೋಬಸ್ತ್

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada